Monday, February 2, 2026
Monday, February 2, 2026

ಪತ್ರಕರ್ತರ ಕ್ರಿಕೆಟ್ ಟೂರ್ನಿಯಲ್ಲಿ ಮಿಂಚಿದ ಕೆ ಲೈವ್ ನ್ಯೂಸ್ ನ ರಂಜನ್

Date:

ಚಿತ್ರದುರ್ಗದಲ್ಲಿ ನಡೆಯುತ್ತಿರುವ 6 ಜಿಲ್ಲೆಗಳ ಪತ್ರಕರ್ತ ತಂಡಗಳ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ತಂಡವು ಸೆಮಿಫೈನಲ್ ಪ್ರವೇಶಿಸಿದೆ.

ಎರಡನೇ ದಿನದ ಇಂದಿನ ಆರಂಭಿಕ ಪಂದ್ಯಾವಳಿಯಲ್ಲಿ ಚಿತ್ರದುರ್ಗ ಜಿಲ್ಲೆಯ ಎ ತಂಡದ ವಿರುದ್ಧ ರೋಚಕ ಆಟವಾಡಿದ ಶಿವಮೊಗ್ಗ ತಂಡವು 22 ರನ್ ಗಳಿಂದ ಗೆಲುವು ಸಾಧಿಸಿ ಟೂರ್ನಿಯ ಸೆಮಿಫೈನಲ್ ಪ್ರವೇಶಿಸಿತು.

ಟಾಸ್ ಗೆದ್ದ ಚಿತ್ರದುರ್ಗ ಎ ತಂಡದ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ಶಿವಮೊಗ್ಗ ಪತ್ರಕರ್ತರ ತಂಡ ನಿಗದಿತ ಐದು ಓವರ್ ಗಳಲ್ಲಿ 65 ರನ್ ಗಳನ್ನು ಗಳಿಸಿತು.

ತಂಡದ ನವೀನ್ , ಅಮೋಘ 35 ರನ್ ಗಳನ್ನು, ಲೋಹಿತ್ 28 ಗಳೊಂದಿಗೆ ಎದುರಾಳಿ ತಂಡದ ಬೌಲರ್ ಗಳನ್ನು ದಂಡಿಸಿದರು.

65 ರನ್ ಗಳ ಬೆನ್ನತ್ತಿದ ಚಿತ್ರದುರ್ಗ ಪತ್ರಕರ್ತರ ತಂಡವು ಶಿವಮೊಗ್ಗ ಪತ್ರಕರ್ತರ ತಂಡದ ಆಕಾಶ್ ಅವರ ಮಾರಕ ಬೌಲಿಂಗ್ ಮುಂದೆ ನೆಲಕಚ್ಚಿತು. ಆಕಾಶ್ ಒಂದೆ ಓವರ್ ನಲ್ಲೆ 3 ವಿಕೆಟ್ ಗಳನ್ನು ಬಲಿ ತೆಗೆದುಕೊಳ್ಳುವ ಮುಖಾಂತರ ಚಿತ್ರದುರ್ಗ ತಂಡವನ್ನು ಸೋಲಿನ ದವಡೆಗೆ ನೂಕಿದರು.

ಕೆ ಲೈವ್ ನ್ಯೂಸ್ ನ ರಂಜನ್ ಅವರು ಒಂದೇ ಕೈ ಯಲ್ಲಿ ಚೆಂಡನ್ನು ಕ್ಯಾಚ್ ಹಿಡಿದಿದ್ದಾರೆ.

ಅಂತಿಮವಾಗಿ ಚಿತ್ರದುರ್ಗ ಪತ್ರಕರ್ತರ ತಂಡವು 5 ಓವರ್ ಗಳಲ್ಲಿ 43 ಗಳಿಗೆ ಸೀಮಿತವಾಗಿ‌ ಶಿವಮೊಗ್ಗ ಪತ್ರಕರ್ತರ ತಂಡದ ಮುಂದೆ ಶರಣಾಯಿತು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚಿತ್ರದುರ್ಗ ಶಾಖೆಯು ಕ್ರಿಕೆಟ್ ಪಂದ್ಯಾವಳಿಯ ಆತಿಥ್ಯವಹಿಸಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...