Wednesday, October 2, 2024
Wednesday, October 2, 2024

ನೀರು ಹಂಚಿಕೆ ನಿರ್ಧಾರವಾಗಿಲ್ಲ : ಸಿಎಂ ಬೊಮ್ಮಾಯಿ

Date:

ನೆರೆ ರಾಜ್ಯಗಳು ನೀರಿನ ಬಳಕೆಗೆ ರೂಪಿಸಿರುವ ಜಲ ನ್ಯಾಯ ಮಂಡಳಿ ತೀರ್ಪು ಉಲಂಘಿಸಿ ರೂಪಿಸುತ್ತಿರುವ ಬೃಹತ್ ಮಟ್ಟದ ಶಾಶ್ವತ ಯೋಜನೆಗಳನ್ನು ಕೇಂದ್ರ ಸರ್ಕಾರ ಶಾಸನಬದ್ಧ ಅನುಮೋದನೆ ನೀಡಬಾರದು ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮನವಿ ಮಾಡಿದ್ದಾರೆ.

ತಿರುಪತಿಯಲ್ಲಿ ನಡೆದ ದಕ್ಷಿಣ ವಲಯ ಪರಿಷತ್ತಿನ ಸಿ.ಎಂಗಳ 29ನೇ ಸಭೆಯಲ್ಲಿ ಬೊಮ್ಮಾಯಿಯವರು ಕರ್ನಾಟಕದ ಬೇಡಿಕೆಗಳನ್ನು ಮಂಡಿಸಿದರು. ಕೇಂದ್ರ ಗೃಹಸಚಿವ ಅಮಿತ್ ಶಾ ಈ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.

ಸಹ ಜಲಾನಯನ ಪ್ರದೇಶಗಳನ್ನು ಹೊಂದಿರುವ ರಾಜ್ಯಗಳ ಪಾಲು ಎಷ್ಟು ಎಂಬ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಆದರೂ ಕಾವೇರಿ ವೈಗೈ- ಗುಂಡಾರ್ ಸಂಪರ್ಕಿಸುವ ಕಾಮಗಾರಿಯನ್ನು ತಮಿಳುನಾಡು ಮುಂದುವರಿಸಿದೆ. ಶ್ರೀಶೈಲಂ ಜಲಾಶಯದಲ್ಲಿ ಹೆಚ್ಚುವರಿ ಪ್ರಮಾಣದ ಅಪಾರ ನೀರನ್ನ ಬಳಸಿಕೊಂಡು ಹಲವು ಏತ ನೀರಾವರಿ ಯೋಜನೆಗಳನ್ನು ಕೈಗೊಳ್ಳಲು ತೆಲಂಗಾಣ ಅಥವಾ ಅಪೆಕ್ಸ್ ಮಂಡಳಿಗೆ ಅಧಿಕಾರವಿಲ್ಲ. ಹಾಗಾಗಿ ಕೇಂದ್ರ ಸರ್ಕಾರ ಈ ರೀತಿಯ ಯೋಜನೆಗಳಿಗೆ ಶಾಸನಬದ್ಧ ಅನುಮೋದನೆ ನೀಡಬಾರದು ಎಂದು ಬೊಮ್ಮಾಯಿ ಅವರು ಸಭೆಯಲ್ಲಿ ಗೃಹ ಸಚಿವರ ಗಮನಕ್ಕೆ ತಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...