Wednesday, December 17, 2025
Wednesday, December 17, 2025

ನೀರು ಹಂಚಿಕೆ ನಿರ್ಧಾರವಾಗಿಲ್ಲ : ಸಿಎಂ ಬೊಮ್ಮಾಯಿ

Date:

ನೆರೆ ರಾಜ್ಯಗಳು ನೀರಿನ ಬಳಕೆಗೆ ರೂಪಿಸಿರುವ ಜಲ ನ್ಯಾಯ ಮಂಡಳಿ ತೀರ್ಪು ಉಲಂಘಿಸಿ ರೂಪಿಸುತ್ತಿರುವ ಬೃಹತ್ ಮಟ್ಟದ ಶಾಶ್ವತ ಯೋಜನೆಗಳನ್ನು ಕೇಂದ್ರ ಸರ್ಕಾರ ಶಾಸನಬದ್ಧ ಅನುಮೋದನೆ ನೀಡಬಾರದು ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮನವಿ ಮಾಡಿದ್ದಾರೆ.

ತಿರುಪತಿಯಲ್ಲಿ ನಡೆದ ದಕ್ಷಿಣ ವಲಯ ಪರಿಷತ್ತಿನ ಸಿ.ಎಂಗಳ 29ನೇ ಸಭೆಯಲ್ಲಿ ಬೊಮ್ಮಾಯಿಯವರು ಕರ್ನಾಟಕದ ಬೇಡಿಕೆಗಳನ್ನು ಮಂಡಿಸಿದರು. ಕೇಂದ್ರ ಗೃಹಸಚಿವ ಅಮಿತ್ ಶಾ ಈ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.

ಸಹ ಜಲಾನಯನ ಪ್ರದೇಶಗಳನ್ನು ಹೊಂದಿರುವ ರಾಜ್ಯಗಳ ಪಾಲು ಎಷ್ಟು ಎಂಬ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಆದರೂ ಕಾವೇರಿ ವೈಗೈ- ಗುಂಡಾರ್ ಸಂಪರ್ಕಿಸುವ ಕಾಮಗಾರಿಯನ್ನು ತಮಿಳುನಾಡು ಮುಂದುವರಿಸಿದೆ. ಶ್ರೀಶೈಲಂ ಜಲಾಶಯದಲ್ಲಿ ಹೆಚ್ಚುವರಿ ಪ್ರಮಾಣದ ಅಪಾರ ನೀರನ್ನ ಬಳಸಿಕೊಂಡು ಹಲವು ಏತ ನೀರಾವರಿ ಯೋಜನೆಗಳನ್ನು ಕೈಗೊಳ್ಳಲು ತೆಲಂಗಾಣ ಅಥವಾ ಅಪೆಕ್ಸ್ ಮಂಡಳಿಗೆ ಅಧಿಕಾರವಿಲ್ಲ. ಹಾಗಾಗಿ ಕೇಂದ್ರ ಸರ್ಕಾರ ಈ ರೀತಿಯ ಯೋಜನೆಗಳಿಗೆ ಶಾಸನಬದ್ಧ ಅನುಮೋದನೆ ನೀಡಬಾರದು ಎಂದು ಬೊಮ್ಮಾಯಿ ಅವರು ಸಭೆಯಲ್ಲಿ ಗೃಹ ಸಚಿವರ ಗಮನಕ್ಕೆ ತಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 18. ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ,...

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...