Saturday, May 16, 2026
Saturday, May 16, 2026

ಕ್ಲೌಡ್ ತಂತ್ರಜ್ಞಾನದ ನಾವೀನ್ಯತಾ ಕೇಂದ್ರ ಸ್ಥಾಪನೆ;ರಾಜ್ಯ ಸರ್ಕಾರದೊಂದಿಗೆ ಮಾತುಕತೆ

Date:

ಅಮೆರಿಕದ ರಾಕ್ ಸ್ಪೇಸ್ ಕಂಪನಿಯು ಬೆಳಗಾವಿಯಲ್ಲಿ ತನ್ನ ಕ್ಲೌಡ್ ತಂತ್ರಜ್ಞಾನದ ನಾವೀನ್ಯತಾ ಕೇಂದ್ರವನ್ನು ಸ್ಥಾಪಿಸುವ ಸಂಬಂಧ ಐಟಿ-ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರೊಂದಿಗೆ ಪೂರ್ವಭಾವಿ ಮಾತುಕತೆ ನಡೆಸಿದೆ.

ಬೆಳಗಾವಿಯ ಸುವರ್ಣ ಸೌಧದ ವಿಧಾನಪರಿಷತ್ ಮೊಗಸಾಲೆಯಲ್ಲಿ ಸೋಮವಾರ ನಡೆದ ಈ ಮಾತುಕತೆಯಲ್ಲಿ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿ ಮುಂತಾದ ಪ್ರಮುಖ ಅಂಶಗಳನ್ನು ಕುರಿತು ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು. ಕಂಪನಿಯ ಪರವಾಗಿ ಅದರ ಸಿಇಒ ಅಮರ್ ಮಲೆತೀರ ಅವರು ಇದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕರ್ನಾಟಕವು ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಯ ಅತ್ಯುತ್ತಮ ಕಾರ್ಯ ಪರಿಸರ ಹೊಂದಿದೆ. ಜತೆಗೆ ಸರಕಾರದ ನೀತಿಗಳು ಸಂಶೋಧನೆ ಮತ್ತು ಅಭಿವೃದ್ಧಿ, ಹಾಗೂ ಉತ್ಪಾದನೆಗೆ ಪೂರಕವಾಗಿವೆ. ಇದರ ಜತೆಗೆ ಕೌಶಲ್ಯಪೂರ್ಣ ಮಾನವ ಸಂಪನ್ಮೂಲ ಒದಗಿಸಲು ಸೂಕ್ತ ವ್ಯವಸ್ಥೆ ಇದೆ ಎಂದರು.

ರಾಕ್ ಸ್ಪೇಸ್ ಕಂಪನಿಯು ಬೆಳಗಾವಿಯಲ್ಲಿ ನೆಲೆಯೂರಿದರೆ ಅಪಾರ ಬಂಡವಾಳ ಹರಿದು ಬರಲಿದೆ. ಸ್ಥಳೀಯ ಪ್ರತಿಭಾವಂತರಿಗೆ ಉದ್ಯೋಗದ ಅವಕಾಶಗಳ ಬಾಗಿಲು ತೆರೆಯಲಿದೆ. ಇದರಿಂದ ಅನಗತ್ಯ ವಲಸೆ ತಪ್ಪಿ, ಪ್ರಾದೇಶಿಕ ಅಸಮತೋಲನ ನಿವಾರಣೆಯೂ ಆಗಲಿದೆ ಎಂದು ಅವರು ನುಡಿದರು.

ಬೆಂಗಳೂರಿನ ಆಚೆಗೂ ಉದ್ಯಮಗಳು ಬರಬೇಕು ಎನ್ನುವುದು ಸರ್ಕಾರದ ನೀತಿಯಾಗಿದೆ. ರಾಕ್ ಸ್ಪೇಸ್ ಕಂಪನಿಯು ಬೆಳಗಾವಿಯನ್ನು ಆಯ್ದುಕೊಂಡಿರುವುದು ಸ್ವಾಗತಾರ್ಹ ಎಂದರು.

ಚರ್ಚೆಯಲ್ಲಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಸಿಇಒ ಸಂಜೀವ್ ಗುಪ್ತ ಕೂಡ ಇದ್ದರು.

ಕ್ಯಾಪ್ಯನ್;
ಅಮೆರಿಕದ ರಾಕ್ ಸ್ಪೇಸ್ ಕಂಪನಿಯ ಸಿಇಒ ಅಮರ್ ಮಲೆತೀರ ಅವರು ಐಟಿ-ಬಿಟಿ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ಅವರೊಂದಿಗೆ ಬೆಳಗಾವಿಯಲ್ಲಿ ಸೋಮವಾರ ಮಾತುಕತೆ ನಡೆಸಿದರು. ಜೊತೆಯಲ್ಲಿ ಕೆಡಿಇಎಂ ಸಿಇಒ ಸಂಜೀವ್ ಗುಪ್ತ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...