Wednesday, March 25, 2026
Wednesday, March 25, 2026

ಚಿಕ್ಕಮಗಳೂರಿನ ಆಜಾದ್ ಪಾರ್ಕ್ ಶಾಲೆಯ ಕಟ್ಟಡ ದುರಸ್ತಿಗೆ ಜೆಡಿಎಸ್ ನಿಂದ ಒತ್ತಾಯ

Date:

ಚಿಕ್ಕಮಗಳೂರು ಸಮೀಪ ಹಾಗೂ ಹೃದಯಭಾಗದಲ್ಲಿರುವ ಆಜಾದ್ ಪಾರ್ಕ್ ಶಾಲೆಯ ಕಟ್ಟಡವನ್ನು ಅಭಿವೃದ್ದಿಪಡಿಸದೇ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ನಿರ್ಲಕ್ಷ್ಯತನ ವಹಿಸಿದೆ ಎಂದು ಜೆಡಿಎಸ್ ವಿಧಾನಸಭಾ ಅಭ್ಯರ್ಥಿ ಬಿ.ಎಂ.ತಿಮ್ಮಶೆಟ್ಟಿ ಅವರು ಆರೋಪಿಸಿದರು.

ಚಿಕ್ಕಮಗಳೂರಿನ, ಆಜಾದ್‌ಪಾರ್ಕ್ ಶಾಲೆಗೆ ಮಂಗಳವಾರ ದಿಡೀರ್ ಭೇಟಿ ನೀಡಿ ಮಾತನಾಡಿದ ಅವರು ಕನ್ನಡ ಹಾಗೂ ತಮಿಳು 2 ಭಾಷೆಯ ವಿದ್ಯಾಸಂಸ್ಥೆಗಳನ್ನು ಒಳಗೊಂಡಿರುವ ಆಜಾದ್‌ಪಾರ್ಕ್ ಶಾಲೆಯು ಮೂಲಭೂತ ಸೌಲಭ್ಯವಿಲ್ಲದೇ ಕುಂಠಿತವಾಗಿದೆ ಎಂದು ದೂರಿದರು.

ಶಾಲೆಯು ಪ್ರಾರಂಭಗೊಂಡು ಅನೇಕ ವರ್ಷಗಳೆ ಕಳೆದಿವೆ. ಸ್ಥಳೀಯ ಜನಪ್ರತಿನಿಧಿಗಳು ಈ ಕ್ಷೇತ್ರ ದಲ್ಲಿ ಸತತವಾಗಿ 20 ವರ್ಷಗಳ ಶಾಸಕರಾಗಿದ್ದರೂ ಹೃದಯಭಾಗದಲ್ಲಿರುವ ಶಾಲೆಗೆ ಭೇಟಿ ನೀಡಿ ಮೂಲಭೂತ ಸೌಲಭ್ಯ ಕೊರತೆಯನ್ನು ನೀಗಿಸುವ ಬದಲು ರಾಜ್ಯ ಪ್ರವಾಸದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.

ವಿದ್ಯಾರ್ಥಿಗಳ ಶಾಲೆಯ ಕೊಠಡಿಯಲ್ಲಿ ಕಿಟಕಿ, ಬಾಗಿಲು, ವಿದ್ಯುತ್ ದೀಪ ಹಾಗೂ ಶೌಚಾಲಯ ಸೂಕ್ತ ವ್ಯವಸ್ಥೆ ಇಲ್ಲದಿರುವ ಪರಿಣಾಮ ಕೆಲವು ಪೋಷಕರು ಶಾಲೆಗೆ ಮಕ್ಕಳನ್ನು ಸೇರ್ಪಡೆ ಗೊಳಿಸಲು ಈ ಕಾರಣದಿಂದ ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಜಿಲ್ಲೆ ಹಾಗೂ ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರ ಬಂದ ಸಂದರ್ಭದಲ್ಲಿ ಹೆಚ್.ಡಿ.ಕೆ.ಯವರ ಗಮನಕ್ಕೆ ತರುವ ಮೂಲಕ ಆಜಾದ್‌ಪಾರ್ಕ್ ಶಾಲೆಗೆ ನೂತನ ಕಟ್ಟಡವನ್ನು ನಿರ್ಮಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯಶಿಕ್ಷಕರು ಮತ್ತು ಸ್ಥಳೀಯ ಮುಖಂಡರುಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...