Tuesday, March 24, 2026
Tuesday, March 24, 2026

ಕನ್ನಡದ ಪೆಂಪು ಕುವೆಂಪು

Date:

ಕುವೆಂಪು’ ಎಂಬ ಕಾವ್ಯನಾಮದಿಂದಲೇ ಪ್ರಸಿದ್ದರಾಗಿರುವ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ. ಇವರು ಕನ್ನಡದ ಶ್ರೇಷ್ಠ ಕವಿಗಳಲ್ಲೊಬ್ಬರು.

ಕುವೆಂಪು ಅವರು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆ ಎಂಬಲ್ಲಿ ಡಿಸೆಂಬರ್ 29, 1904 ರಲ್ಲಿ ಜನಿಸಿದರು.
ಇವರ ತಂದೆ ವೆಂಕಟಪ್ಪ. ತಾಯಿ ಸೀತಮ್ಮ. ಕುವೆಂಪು ಅವರು ತಮ್ಮ ಬಾಲ್ಯವನ್ನು ಕುಪ್ಪಳ್ಳಿಯಲ್ಲಿ ಕಳೆಯುತ್ತಾರೆ .

ಕುವೆಂಪು ಅವರು ಮೈಸೂರಿನ ಮಹಾರಾಜ ಕಾಲೇಜಿನ ಪ್ರಾಧ್ಯಾಪಕರೂ, ಪ್ರಾಂಶುಪಾಲರೂ ಕಾರ್ಯ ನಿರ್ವಹಿಸಿದರು. ನಂತರದ ದಿನಗಳಲ್ಲಿ ಉಪಕುಲಪತಿಗಳಾದರು.

ಚಿಕ್ಕಂದಿನಿಂದಲೂ ವಿದ್ಯಾಭ್ಯಾಸದೊಂದಿಗೆ ಕುವೆಂಪು ಅವರು ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಆಸಕ್ತಿಯನ್ನು ಹೊಂದಿದ್ದರು.

ವರಕವಿ ಬೇಂದ್ರೆಯವರಿಂದ “ಯುಗದ ಕವಿ” “ಜಗದ ಕವಿ” ಎನಿಸಿಕೊಂಡವರು ಕುವೆಂಪು.
ರಾಷ್ಟ್ರಕವಿ , ಸಾಹಿತ್ಯ ದಿಗ್ಗಜ ಎಂದೇ ಪ್ರಸಿದ್ಧರಾಗಿರುವ ಕುವೆಂಪುರವರು ವಿದ್ಯಾರ್ಥಿ ದೆಸೆಯಲ್ಲಿಯೇ 1928 ರಲ್ಲಿ ಬೆಂಗಳೂರಿನಲ್ಲಿ ನಡೆದ ವಿದ್ಯಾರ್ಥಿ ಕವಿ ಸಮ್ಮೇಳನದ ಅಧ್ಯಕ್ಷತೆಯ ಗೌರವ ಇವರಿಗೆ ಸಂದಿತು .

ಕುವೆಂಪುರವರು ಕಾವ್ಯ, ಕವನ, ಕಥೆ, ಕಾದಂಬರಿ, ವಿಮರ್ಶೆ, ಅನುವಾದ, ನಾಟಕ ಹೀಗೆ ಎಲ್ಲಾ ಬಗೆಯ ಸಾಹಿತ್ಯ ರೂಪಗಳಲ್ಲಿಯೂ ತಮ್ಮ ಛಾಪು ಮೂಡಿಸಿದ್ದಾರೆ. ಇವರು ಕನ್ನಡದಲ್ಲಿ 80 ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.

1933 ರಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕವಿ ಸಮ್ಮೇಳನದ ಅಧ್ಯಕ್ಷರಾದರು.1937 ಎಪ್ರಿಲ್ 30 ರಂದು ಹೇಮಾವತಿಯವರನ್ನು ಕೈ ಹಿಡಿದರು.

ಪೂರ್ಣಚಂದ್ರ ತೇಜಸ್ವಿ ಮತ್ತು ಕೋಕಿಲೋದಯ ಚೈತ್ರ ಎಂಬ ಪುತ್ರರು, ಇಂದುಕಲಾ ಮತ್ತು ತರಿಣಿ ಎಂಬ ಇಬ್ಬ ಪುತ್ರಿಯರಿದ್ದಾರೆ. ರಾಮಕೃಷ್ಣ ಪರಮಹಂಸರ ಜೀವನದಿಂದ ಪ್ರಭಾವಿತರಾದ ಕುವೆಂಪುರವರು ಸ್ವಾಮಿ ಶಿವಾನಂದರಿಂದ ದೀಕ್ಷೆ ಪಡೆದಿದ್ದಾರೆ.

ಜ್ಞಾನಪೀಠ ಪ್ರಶಸ್ತಿಯನ್ನು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು ಕುವೆಂಪು.

ಕರ್ನಾಟಕ ಸರ್ಕಾರ ಕೊಡಮಾಡುವ ಕರ್ನಾಟಕ ರತ್ನ, ಹಾಗೂ ಪಂಪ ಪ್ರಶಸ್ತಿಯನ್ನು ಮೊದಲ ಬಾರಿಗೆ ಪಡೆದವರು ಕುವೆಂಪು.

ಜಯ ಭಾರತ ಜನನಿಯ ತನುಜಾತೆ‘, ‘ಎಲ್ಲಾದರು ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು’,

‘ಓ ನನ್ನ ಚೇತನ ಆಗುವ ನೀ ಅನಿಕೇತನ’

ಹೀಗೆ ರಾಷ್ಟ್ರಕವಿ ಕುವೆಂಪು ಅವರ ಹಲವಾರು ಕವನಗಳು ಕನ್ನಡಿಗರ ಮನದಾಳದಲ್ಲಿ ಹಾಸುಹೊಕ್ಕಾಗಿದೆ. ಕನ್ನಡದ ಅಗ್ರಮಾನ್ಯ ಕಾದಂಬರಿಕಾರ ನಾಟಕಕಾರ, ವಿಮರ್ಷಕ ಮತ್ತು ಚಿಂತಕ, ಇಪ್ಪತ್ತನೆಯ ಶತಮಾನದಲ್ಲಿ ಕಂಡ ದೈತ್ಯ ಪ್ರತಿಭೆ ಕುವೆಂಪು.

ಜಲಗಾರ, ಯಮನಸೋಲು,
ಬೊಮ್ಮನಹಳ್ಳಿ ಕಿಂದರಿ ಜೋಗಿ,
ವಾಲ್ಮೀಕಿ ಭಾಗ್ಯ ಸ್ಮಶಾನ ಕುರುಕ್ಷೇತ್ರ, ಮಹಾರಾತ್ರಿ, ರಕ್ತಾಕ್ಷಿ, ಬಿರುಗಾಳಿ, ಬೆರಳ್‌ಗೆ ಕೊರಳ್, ಕಾನೂರು ಹೆಗ್ಗಡತಿ,
ಮಲೆಗಳಲ್ಲಿ ಮದುಮಗಳು ಇವು ಕುವೆಂಪು ಅವರ ಪ್ರಮುಖ ಕಾವ್ಯ ಕೃತಿಗಳಾಗಿವೆ.

ಅವರು ಕನ್ನಡಕ್ಕೆ ನೀಡಿದ ಕೊಡುಗೆಗಳಿಗಾಗಿ ಕನ್ನಡದ ಸಾಹಿತ್ಯಗಳನ್ನು ರಚಿಸಿದ್ದಕ್ಕಾಗಿ ಅವರಿಗೆ ಅನೇಕ ಮನ್ನಣೆ ಪ್ರಶಸ್ತಿಗಳು ದೊರೆತವು.

ಕನ್ನಡದ ಮಹೋನ್ನತ ಕವಿ ಕುವೆಂಪು 11 ನವೆಂಬರ್ 1994 ರಲ್ಲಿ ಇಹಲೋಕ ತ್ಯಜಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...