Wednesday, October 2, 2024
Wednesday, October 2, 2024

ಜನವರಿ 27 ಹಂಪಿ ಉತ್ಸವ ಮುಖ್ಯಮಂತ್ರಿಗಳಿಂದ ಉದ್ಘಾಟನೆ- ಸಚಿವೆ ಶಶಿಕಲಾ ಜೊಲ್ಲೆ

Date:

ಜನವರಿ 27 ರಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಹಂಪಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದು ಧಾರ್ಮಿಕ ದತ್ತಿ ಮತ್ತು ಧರ್ಮಾದಾಯ ಸಂಸ್ಥೆಗಳ ಸಚಿವೆ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಅವರು ಹೇಳಿದರು.

ಬುಧವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಜಯನಗರ ಜಿಲ್ಲಾಡಳಿತದ ಅಧಿಕಾರಿಗಳ ಜೊತೆ ಸಭೆ ನಡೆಸಿ ಹಂಪಿ ಉತ್ಸವದ ಸಿದ್ದತೆಗಳ ಬಗ್ಗೆ ಸಮಗ್ರ ಮಾಹಿತಿಯನ್ನು ಪಡೆದುಕೊಂಡರು.
ಕೋವಿಡ್ ನಂತರ ಮತ್ತು ವಿಜಯನಗರ ಜಿಲ್ಲೆ ಹೊಸದಾಗಿ ನಿರ್ಮಾಣವಾದ ನಂತರ ನಡೆಸುತ್ತಿರುವ ಹಂಪಿ ಉತ್ಸವ ಇದಾಗಿದೆ. ಈ ಹಿನ್ನಲೆಯಲ್ಲಿ ಈಗಾಗಲೇ ಅದ್ದೂರಿಯಾಗಿ ಉತ್ಸವ ಆಚರಣೆಗೆ ಸೂಚನೆ ನೀಡಲಾಗಿದ್ದು ಅಗತ್ಯ ಸಿದ್ದತೆಗಳನ್ನು ಚುರುಕುಗೊಳಿಸುವಂತೆ ಇಂದು ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿಗೆ ಸಚಿವರು ಸೂಚನೆ ನೀಡಿದರು.

ಮುಖ್ಯಮಂತ್ರಿಗಳಿಂದ ಉದ್ಘಾಟನೆ:

ಕಳೆದ ಬಾರಿ ವಿಜಯನಗರ ಜಿಲ್ಲೆಯಲ್ಲಿ ನಡೆಸಿದ ಸಭೆಯಲ್ಲಿ ಜನವರಿ 27, 28 ಮತ್ತು 29 ರಂದು ಹಂಪಿ ಉತ್ಸವ ಆಚರಣೆಗೆ ದಿನಾಂಕ ನಿಗದಿಪಡಿಸಲಾಗಿತ್ತು. ಬುಧವಾರ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿದ್ದು, ಅವರು ಜನವರಿ 27 ರಂದು ಉದ್ಘಾಟನೆ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ ಎಂದರು.

ದಸರಾ ಮಾದರಿಯ ದೀಪಾಲಂಕಾರ: ದಸರಾ ಮಾದರಿಯಲ್ಲಿ ಹಂಪಿ ಹಾಗೂ ಹೊಸಪೇಟೆಯಲ್ಲಿ ದೀಪದ ಆಲಂಕಾರ ಮಾಡುವ ಬಗ್ಗೆ ವಿಸ್ತ್ರುತವಾಗಿ ಚರ್ಚಿಸಲಾಯಿತು. ಹೊಸದಾಗಿ ದೀಪಾಲಂಕಾರ ಸಮಿತಿಯನ್ನು ರಚನೆ ಮಾಡಲಾಗಿದ್ದು, ಸದರಿ ಸಮಿತಿಯ ಸದಸ್ಯರು ಹೊಸಪೇಟೆ, ಕಮಲಾಪುರ, ಹಂಪಿ ಈ ಮೂರು ಸ್ಥಳಗಳ ಮುಖ್ಯ ರಸ್ತೆಗಳ ಪ್ರಮುಖ ಸ್ಥಳಗಳಲ್ಲಿ ವಿಶೇಷ ದೀಪಾಲಂಕಾರ ಮಾಡಲು ಯೋಜನೆ ತಯಾರಿಸಿ ಪ್ರಸ್ತುತ ಪಡಿಸಲು ಸೂಚನೆ ನೀಡಲಾಯಿತು.

ಸ್ಥಳೀಯ ಕಲಾತಂಡಗಳಿಗೆ ಹೆಚ್ಚಿನ ಆದ್ಯತೆ: ಹಂಪಿ ಉತ್ಸವದಲ್ಲಿ ಪ್ರದರ್ಶನಕ್ಕೆ ಅವಕಾಶ ನೀಡುವಂತೆ ಕೋರಿ ಸುಮಾರು 1036 ಅರ್ಜಿಗಳು ಸಲ್ಲಿಕೆಯಾಗಿವೆ. ಇವುಗಳ ಆಯ್ಕೆಗೆ ಸಮಿತಿಯನ್ನು ರಚಿಸಲಾಗಿದ್ದು ಇದುವರೆಗೂ ಅವಕಾಶ ಸಿಗದ ಸ್ಥಳೀಯ ಕಲಾವಿದರುಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು ಎಂದು ಸಚಿವರು ಸೂಚನೆ ನೀಡಿದರು.

ಕಾನೂನು ಸುವ್ಯವಸ್ಥೆಗೆ ಅಗತ್ಯ ತಯಾರಿ:ಲಕ್ಷಾಂತರ ಜನರು ಸೇರುವ ಈ ಉತ್ಸವದಲ್ಲಿ ಅಗತ್ಯ ಕಾನೂನು ಸುವ್ಯವಸ್ಥೆಗೆ ವ್ಯವಸ್ಥೆ ಮಾಡಬೇಕು. ಹಂಪಿ ಪ್ರದೇಶದಲ್ಲಿ ಸಂಪೂರ್ಣ ಸಿ.ಸಿ ಟಿವಿಗಳನ್ನು ಅಳವಡಿಸಬೇಕು. ಹಂಪಿಗೆ ಹೋಗುವ ಮಾರ್ಗವಾದ ಕಡ್ಡಿರಾಂಪುರ ಸ್ವಾಗತ ಕಮಾನಿನಿಂದ ಕಡ್ಡಿರಾಂಪೂರ, ಕೃಷ್ಣ ದೇವಸ್ಥಾನ, ಉದ್ದಾನ ವೀರಭದ್ರೇಶ್ವರ ದೇವಸ್ಥಾನದ ಮಾರ್ಗದ ಮೂಲಕ ಕಮಲಾಪುರದವರೆಗೆ ಏಕಮುಖ ಮಾರ್ಗ ಸಂಚಾರ ವ್ಯವಸ್ಥೆ ಮಾಡುವುದು. ಹಂಪಿ ಪ್ರದೇಶದಲ್ಲಿ ಅವಶ್ಯವಿದ್ದ ಕಡೆಗಳಲ್ಲಿ ಶಾಶ್ವತವಾಗಿ ಸಂಚಾರ ಸೂಚನಾ ಫಲಕಗಳನ್ನು ಅಳವಡಿಸಿ ಸುವ್ಯವಸ್ಥಿತ ವಾಹನ ನಿಲುಗಡೆಗೆ ಅವಕಾಶ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ರಾಜ್ಯ ಮತ್ತು ರಾಷ್ಟ್ರಮಟ್ಟದ ಕಲಾತಂಡಗಳಿಂದ ಹೊಸಪೇಟೆ ನಗರದಲ್ಲಿ ವಸಂತವೈಭವ ಮೆರವಣಿಗೆ ಕಾರ್ಯಕ್ರಮ, ತುಂಗಾನದಿಯ ತಟದಲ್ಲಿ ತುಂಗಾರತಿ, ವಿಜಯನಗರ ವೈಭವದ ಕುರಿತು ಸುಮಾರು 300 ಕಲಾವಿದರನ್ನೊಳಗೊಂಡ ಧ್ವನಿ ಮತ್ತು ಬೆಳಕು ಕಾರ್ಯಕ್ರಮ, ಹಂಪಿ ಬೈ ಸ್ಕೈ, ವಿಭಿನ್ನ ರೀತಿಯ ಫಲಪುಷ್ಪ ಪ್ರದರ್ಶನ, ಅಶ್ವದಳ ಪ್ರದರ್ಶನ, ಕುಸ್ತಿ ಹಾಗೂ ಇತರೆ ಗ್ರಾಮೀಣ ಕ್ರೀಡೆಗಳ ಪ್ರದರ್ಶನಗಳನ್ನು ಆಯೋಜಿಸಲಾಗಿದೆ ಎಂದರು.
ಸಭೆಯಲ್ಲಿ ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿ ವೆಂಕಟೇಶ್, ಸಹಾಯಕ ಆಯುಕ್ತ ಸಿದ್ರಾಮೇಶ್ವರ ಸೇರಿದಂತೆ ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber Of Commerce ಗಾಂಧೀಜಿ & ಶಾಸ್ತ್ರೀಜಿ ಯುವಜನರಿಗೆ ಆದರ್ಶ- ಚಂದ್ರಶೇಖರಯ್ಯ

Chamber Of Commerce ಗಾಂಧೀಜಿ ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನ...

Gangotri College ವಿದ್ಯಾರ್ಥಿಗಳು ಶಿಕ್ಷಣದ ಸಂಗಡ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು- ಶ್ರೀ ಚನ್ನಬಸವಶ್ರೀ

Gangotri College ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮ ಅರಿಯುವ ಜೊತೆಗೆ...

CM Siddharamaih ಸಿದ್ಧರಾಮಯ್ಯ ರಾಜಿನಾಮೆ ಬೇಡ.ಬೆಂಬಲಿಸಿ ಜನಜಾಥಾ-‘ಅಹಿಂದ’ ಮಹೇಶ್

CM Siddharamaih ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವುದು ಬೇಡ....