Thursday, April 30, 2026
Thursday, April 30, 2026

ಮತದಾರರ ದಿನಾಚರಣೆ: ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

Date:

ಶಿವಮೊಗ್ಗ: ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರಯುಕ್ತ ಚುನಾವಣಾ ಆಯೋಗದ ನಿರ್ದೇಶನದಂತೆ 2022-23ನೇ ಸಾಲಿನ ಜಿಲ್ಲಾ ಮಟ್ಟದಿಂದ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿಡಿಯೋ ಕಾನ್ಫ್‍ರೆನ್ಸ್ ಮೂಲಕ ರಾಜ್ಯ ಮಟ್ಟದಲ್ಲಿ ಕನ್ನಡ ಪ್ರಬಂಧ ಸ್ಪರ್ಧೆ, ಇಂಗ್ಲೀಷ್ ಪ್ರಬಂಧ ಸ್ಪರ್ಧೆ ಹಾಗೂ ಪೋಸ್ಟರ್ ಮೇಕಿಂಗ್ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಪ್ರೌಢ ಶಾಲಾ ವಿಭಾಗದಿಂದ ತಲಾ ಮೂರು ವಿದ್ಯಾರ್ಥಿಗಳು ಪದವಿ ಪೂರ್ವ ವಿಭಾಗದಿಂದ ತಲಾ 3 ವಿದ್ಯಾರ್ಥಿಗಳು ಹಾಗೂ ಪದವಿ ವಿಭಾಗದಿಂದ ಮೂರು ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆ, ಇಂಗ್ಲೀಷ್ ಪ್ರಬಂಧ ಸ್ಪರ್ಧೆ ಹಾಗೂ ಪೋಸ್ಟರ್ ಮೇಕಿಂಗ್ ಸ್ಪರ್ಧೆಗಳನ್ನು ಜಿಲ್ಲಾ ಪಂಚಾಯತಿಯ ಕಛೇರಿಯ ಕೆ-ಸ್ವಾನ್ ಕೊಠಡಿಯಲ್ಲಿ ನಡೆಸಲಾಗಿತ್ತು.

ಈ ಸ್ಪರ್ಧಾತ್ಮಕ ಚಟುವಟಿಕೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಡಿ. ಪ್ರಕಾಶ್‍ರವರು ಪ್ರೋತ್ಸಾಹಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ನವೀನ ಕುಮಾರ್ ಮತ್ತು ಜಿಲ್ಲಾ ಉಪ ಸ್ವಿಪ್ ನೋಡಲ್ ಅಧಿಕಾರಿ ನವೀದ್ ಅಹಮದ್ ಫರ್ವಿಜ್, ಡಯಟ್‍ನ ಉಪನ್ಯಾಸಕ ರಾಜೀವ್ ಹಾಗೂ ಪದವಿ ವಿಭಾಗದ ನೋಡಲ್ ಅಧಿಕಾರಿಯಾದ ಎಂ.ಸಿ ರಾಜಕುಮಾರ್, ಮಂಜುಳ ವಿಶೇಷ ಅಧಿಕಾರಿಗಳು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಕಛೇರಿ ವಿಷಯ ಪರಿವೀಕ್ಷಕರಾದ ಶಿವನೆಗೌಡ ಹಾಗೂ ಪದವಿ ಪೂರ್ವ ವಿಭಾಗದಿಂದ ಮಾಲತೇಶ್, ಕುಂಸಿ ಪಿ.ಯು.ಕಾಲೇಜಿನ ಪ್ರಾಂಶುಪಾಲ ಅರವಿಂದ್ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಶಂಕರಘಟ್ಟದ ಕಾಲೇಜಿನ ವಿದ್ಯಾರ್ಥಿಗಳ ಪ್ರವಾಸಿ ಬಸ್ ಅಪಘಾತದಲ್ಲಿ ಈರ್ವರ ಸಾವು : ಸಂಸದ ರಾಘವೇಂದ್ರ ಸಂತಾಪ

B.Y. Raghavendra ಕುಂದಾಪುರ ತಾಲ್ಲೂಕಿನ ಮರವಂತೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ...

S.N. Channabasappa ನಗರದ ಬಡಾವಣೆಗಳಲ್ಲಿನ ಚರಂಡಿ ಸಮಸ್ಯೆ ತ್ವರಿತ ಬಗೆಹರಿಸಿ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಬಡಾವಣೆಗಳಲ್ಲಿನ ಚರಂಡಿ ವ್ಯವಸ್ಥೆ ಸುಧಾರಣೆಗೆ ಹೆಚ್ಚಿನ...

B.Y. Raghavendra ಪ್ರವಾಸಿ ತಾಣವಾಗಿ ಜೋಗದ ಅಭಿವೃದ್ದಿ ಕಾಮಗಾರಿ ಶೀಘ್ರ ಪೂರೈಸಲು ಸಂಸದ ರಾಘವೇಂದ್ರ ಸೂಚನೆ

B.Y. Raghavendra ಶಿವಮೊಗ್ಗ ಜಿಲ್ಲೆಯ ಹೆಮ್ಮೆಯ ಪ್ರವಾಸಿ ತಾಣವಾದ ಜೋಗ ಜಲಪಾತವನ್ನು...