Thursday, October 3, 2024
Thursday, October 3, 2024

ಗುಜರಾತಿನಷ್ಟೇ ರಾಜ್ಯವೂ ಕ್ಷೀರೋತ್ಪಾದನೆಯಲ್ಲಿ ಬಲಿಷ್ಠ ವಿಲೀನದ ಪ್ರಶ್ನೆಯೇ ಇಲ್ಲ-ಸಚಿವಸೋಮಶೇಖರ್

Date:

ಎಂಎಫ್ ಮತ್ತು ಗುಜರಾತ್‍ನ ಅಮೂಲ್ ವಿಲೀನದ ಪ್ರಶ್ನೆ ಇಲ್ಲ ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರುಹೊಸ ಸಾಫ್ಟ್‍ವೇರ್ ಅಳವಡಿಸಲು ಶೇ 60ರಷ್ಟು ಹಣವನ್ನು ಕೇಂದ್ರ ಸರಕಾರ ಕೊಡಲಿದೆ. ಒಂದೇ ನಿಯಮಾವಳಿ, ಒಂದೇ ಸಾಫ್ಟ್‍ವೇರ್ ಅಳವಡಿಕೆ ಆಗಲಿದೆ. ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ರೇóಶನ್ ಡಿಪೊ, ಪೆಟ್ರೋಲ್ ಬಂಕ್ ನಿರ್ವಹಣೆ ಇನ್ನಿತರ ಅವಕಾಶಗಳಿದ್ದರೆ ಅನುಮತಿ ಕೊಡಲು ಯೋಜಿಸಿದೆ. ಇಂಥ ಸಹಕಾರ ಸಂಘಗಳು ಮತ್ತು ಹಾಲಿನ ಸೊಸೈಟಿಗಳು ಶಕ್ತಿಶಾಲಿಯಾಗಿ ಕಾರ್ಯ ನಿರ್ವಹಿಸಬೇಕೆಂಬ ಚಿಂತನೆ ಮಾಡಿ ಅದರ ಅನುಷ್ಠಾನ ಆಗುತ್ತಿದೆ ಎಂದು ತಿಳಿಸಿದರು.

ಮಿಲ್ಕ್ ಯೂನಿಯನ್ ಮತ್ತು ಫೆಡರೇಶನ್ ಗುಜರಾತ್‍ನಷ್ಟೇ ಪ್ರಬಲವಾಗಿ ಬೆಳೆದಿದೆ. ವಿಲೀನ ಪ್ರಸ್ತಾಪ ಇಲ್ಲವೆಂದು ಮುಖ್ಯಮಂತ್ರಿಗಳೂ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರೂ ಇದರ ಬಗ್ಗೆ ಸ್ಪಷ್ಟವಾಗಿ ತಿಳಿಸಿದ್ದಾರೆ. ಕರ್ನಾಟಕದ ಪ್ರತಿ ಗ್ರಾಮಗಳಲ್ಲೂ ಮಿಲ್ಕ್ ಡೈರಿ ಮಾಡಬೇಕು; ಪತ್ತಿನ ಸಹಕಾರ ಸಂಘಕ್ಕೆ ಹೊಸ ನಿಯಮಾವಳಿ ಮಾಡಬೇಕು. 3 ವರ್ಷಗಳೊಳಗೆ ಒಂದೇ ಸಾಫ್ಟ್‍ವೇರ್ ಅಳವಡಿಸಿಕೊಳ್ಳಬೇಕು ಎಂದು ಕೇಂದ್ರ ಸರಕಾರ ಸೂಚಿಸಿದೆ ಎಂದು ಹೇಳಿದರು.

ಕೆಎಂಎಫ್ ವಿಲೀನದ ಕುರಿತು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಮಾತನಾಡಿಲ್ಲ, ಕೆಎಂಎಫ್ ಬಲಿಷ್ಠ ಸಂಸ್ಥೆ.
15 ಮಿಲ್ಕ್ ಯೂನಿಯನ್, 9 ಲಕ್ಷ ಮಹಿಳೆಯರು ಸೇರಿ 26 ಲಕ್ಷ ಇದರಡಿ ಬರುತ್ತಾರೆ. ಸಾವಿರಾರು ಕೋಟಿ ವ್ಯವಹಾರ ನಡೆಯುತ್ತಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನವರಾತ್ರಿಯ ಮೊದಲ ದಿನ. ಶೈಲಪುತ್ರಿ ದೇವಿರೂಪ ಆರಾಧನೆ

ಲೇ; ಎನ್.ಜಯಭೀಮ ಜೊಯಿಸ್. ಶಿವಮೊಗ್ಗ Navaratri Festival ವಂದೇ ವಾಂಛಿತ ಲಾಭಾಯಚಂದ್ರಾರ್ಧಕೃತಶೇಖರಂ/ವೃಷಾರೂಢಂ...

Gandhi Jayanthi ನಗರದ ರೋವರ್ಸ್ ಕ್ಲಬ್ ನಲ್ಲಿ ಗಾಂಧಿ ಜಯಂತಿ ಆಚರಣೆ

Gandhi Jayanthi ನಗರದ ರೋವರ್ಸ್ ಕ್ಲಬ್ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ...

B.Y.Raghavendra ಸಾರ್ವಜನಿಕ ಉದ್ಯಮಗಳು & ಗೃಹ ಇಲಾಖೆ ಸಂಬಂಧಿತ ಸ್ಥಾಯಿ ಸಮಿತಿಗೆ ನೇಮಕವಾಗಿರುವ ಸಂಸದ ರಾಘವೇಂದ್ರರಿಗೆ ಅಭಿನಂದನೆ

B.Y.Raghavendra ಕೇಂದ್ರ ಸರ್ಕಾರದ ಸಂಸದೀಯ ಸಂಸ್ಥೆಗಳಾದ ಸಾರ್ವಜನಿಕ ಉದ್ಯಮಗಳ ಸಮಿತಿ,...

Mahatma Gandhi ಗಾಂಧಿ ಟೋಪಿ ಧಾರಣೆ ಕೇವಲ ತೋರಿಕೆಯಾಗಬಾರದು. ಆದರ್ಶಗಳ ಪಾಲನೆಯಾಗಬೇಕು-ಡಾ.ಎಚ್.ಬಿ.ಮಂಜುನಾಥ್.

Mahatma Gandhi ಗಾಂಧಿ ಟೋಪಿಯನ್ನು ಧರಿಸುವುದು ಕೇವಲ ತೋರಿಕೆಯಾಗದೆ ಮಹಾತ್ಮರ ಆದರ್ಶಗಳ...