Sunday, August 23, 2026
Sunday, August 23, 2026

ಉಗ್ರರಿಂದ ಜಮ್ಮು- ಕಾಶ್ಮೀರದ ರಚೌರಿಯಲ್ಲಿ 6 ನಾಗರಿಕರ ಹತ್ಯೆ ಖಂಡನೀಯ- ಜೈಶಂಕರ್

Date:

ಜಮ್ಮು ಕಾಶ್ಮೀರದ ರಜೌರಿಯಲ್ಲಿ ನಾಗರಿಕರನ್ನು ಉಗ್ರರು ಹತ್ಯೆ ಮಾಡಿದ ಕ್ರಮಕ್ಕೆ ತೀವ್ರ ವಿರೋಧವನ್ನು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ವ್ಯಕ್ತಪಡಿಸಿದ್ದಾರೆ.

ವಿಯೆನ್ನಾದಲ್ಲಿ ಮಾತನಾಡಿದ ಅವರು, ಹಲವು ವರ್ಷಗಳ ಹಿಂದೆ ಭಾರತದ ಸಂಸತ್ತಿನ ಮೇಲೆ ದಾಳಿ ಮಾಡಿದ ದೇಶ ಇದು, ಮುಂಬೈ ನಗರದ ಮೇಲೆ ದಾಳಿ ನಡೆಸಿತು. ಹೋಟೆಲ್ ಗಳಿಗೆ ಆಗಮಿಸಿದ್ದ ವಿದೇಶಿ ಪ್ರವಾಸಿಗರ ಮೇಲೆ ದಾಳಿ ಮಾಡಿತ್ತು. ಪ್ರತಿದಿನ ಗಡಿಯಾಚೆಗೆ ಭಯೋತ್ಪಾದಕರನ್ನು ಕಳುಹಿಸುತ್ತಿರುವ ದೇಶವಿದು.ಪಾಕಿಸ್ತಾನ ಉಗ್ರರ ಕೇಂದ್ರ ಎಂದು ಜೈ ಶಂಕರ್ ಅವರು ಹೇಳಿದ್ದಾರೆ.

ಪಂಜಾಬ್ ಗಡಿಯಲ್ಲಿ ಪಾಕ್ ನುಸುಳುಕೋರನನ್ನು ಗುಂಡಿಟ್ಟು ಹತ್ಯೆಗೈದ ಬಿಎಸ್‌ಎಫ್ ಜಮ್ಮು ಕಾಶ್ಮೀರದ ರಜೌರಿಯಲ್ಲಿ ಹಿಂದೂ ನಾಗರಿಕರನ್ನು ಉಗ್ರರು ಹತ್ಯೆ ಮಾಡಿದ ಕ್ರಮವನ್ನು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈ ಶಂಕರ್ ತೀವ್ರವಾಗಿ ಖಂಡಿಸಿದೆ. ಪಾಕಿಸ್ತಾನ ಭಯೋತ್ಪಾದಕರ ಕೇಂದ್ರ ಎಂದು ವಾಗ್ದಾಳಿ ನಡೆಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ನಡೆದ 2 ಭಯೋತ್ಪಾದಕ ದಾಳಿಗಳಲ್ಲಿ ಆರು ನಾಗರಿಕರನ್ನು ಭಯೋತ್ಪಾದಕರು ಹತ್ಯೆ ಮಾಡಿದ್ದಾರೆ.

ಉಗ್ರರ ಮೂಲಕ ಈ ರೀತಿ ಕೃತ್ಯ ನಡೆಸುವ ಪಾಕಿಸ್ತಾನದ ಕ್ರಮ ಹೇಡಿತನದ್ದು ಎಂದು ವಾಗ್ದಾಳಿ ನಡೆಸಿದ್ದಾರೆ. ತಮ್ಮ ವಾಗ್ದಾಳಿಯಲ್ಲಿ ಪಾಕಿಸ್ತಾನವನ್ನು ಹೆಸರಿಸದೆ ಭಾರತಕ್ಕೆ ಭಯೋತ್ಪಾದಕರನ್ನು ದಾಳಿಗೆ ಬಿಡುವ ಪಾಕಿಸ್ತಾನಕ್ಕೆ ನಾಚಿಕೆ ಆಗಬೇಕು ಎಂದ ಅವರು, ಗಡಿಯಾಚೆ ಭಯೋತ್ಪಾದನಾ ದಾಳಿ ನಿಲ್ಲಿಸುವಂತೆ ಪಾಕಿಸ್ತಾನಕ್ಕೆ ಅನೇಕ ಬಾರಿ ಮನವಿ ಮಾಡಿದರೂ ಯಾವುದೇ ತಲೆ ಕೆಡಿಸಿಕೊಳ್ಳುತ್ತಿಲ್ಲ. ಬದಲಾಗಿ ತನ್ನ ಕೆಲಸವನ್ನು ಮುಂದುವರಿಸಿಕೊಂಡು ಭಾರತದ ಮೇಲೆ ಭಯೋತ್ಪಾದಕರ ಮೇಲೆ ನಕಲಿಯುದ್ದ ಘೋಷಿಸಿದೆ ಎಂದು ದೂರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...