Monday, August 24, 2026
Monday, August 24, 2026

ಶ್ರೀಸಿದ್ಧೇಶ್ವರರು ಅರಿವಿನಿಂದಲೇ ಗುರುವಾದವರು- ಶೇಖರ್ ಗೌಳೇರ್

Date:

ಸಿದ್ಧಗಂಗಾ ಶ್ರೀಗಳು ಹಾಗೂ ವಿಜಯಪುರದ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಕನ್ನಡ ನಾಡಿನಲ್ಲಿ ಸರಳ ಬದುಕಿನ ಆದರ್ಶ ಸಾರಿದ ಮಹಾನ್ ಚೇತನರು ಎಂದು ನಿವೃತ್ತ ಪ್ರಾಚಾರ್ಯ ಶೇಖರ್ ಗೌಳೇರ್ ಹೇಳಿದರು.

ರಾಜೇಂದ್ರ ನಗರ ಬಡಾವಣೆಯ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಸಮಾಜ ಪರಿವರ್ತನಾ ಟ್ರಸ್ಟ್ ವತಿಯಿಂದ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರಿಗೆ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಿದ್ದೇಶ್ವರ ಶ್ರೀಗಳು ಜಗತ್ತಿನ ಅನೇಕ ದಾರ್ಶನಿಕರ ಬಗ್ಗೆ, ಆಧ್ಯಾತ್ಮದ ಬಗ್ಗೆ ಅಧ್ಯಯನ ಮಾಡಿದ್ದರು. ದಾರ್ಶನಿಕರ ಆದರ್ಶಗಳಿಂದ ಸರಳ ಜೀವನಶೈಲಿ ರೂಢಿಸಿಕೊಂಡಿದ್ದರು. ಸಿದ್ದೇಶ್ವರ ಶ್ರೀಗಳು ಅರಿವಿನಿಂದಲೇ ಗುರು ಆಗಿದ್ದವರು ಎಂದು ತಿಳಿಸಿದರು.

ಶಿವಗಂಗಾ ಯೋಗಕೇಂದ್ರದ ರುದ್ರಾರಾಧ್ಯ ಮಾತನಾಡಿ, ಕೋಟ್ಯಾನುಕೋಟಿ ಜನಸಂಖ್ಯೆಯಲ್ಲಿ ಸಿದ್ಧೇಶ್ವರ ಸ್ವಾಮೀಜಿ ಅಂತಹ ಮಹಾನ್ ವ್ಯಕ್ತಿಗಳು ಸಿಗುವುದು ಅಪರೂಪ. ಅವರ ಪ್ರತಿಯೊಂದು ಪ್ರವಚನಗಳು ಕೂಡ ಪ್ರತಿಯೊಬ್ಬರ ಬದುಕಿಗೆ ದಾರಿದೀಪ ಎಂದು ಹೇಳಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಮಾತನಾಡಿ, ಸಿದ್ದೇಶ್ವರ ಶ್ರೀಗಳು ಉತ್ತಮ ದಾರ್ಶನಿಕರಾಗಿದ್ದು, ಶ್ರೀಗಳ ಜೀವನ ನಮ್ಮೆಲ್ಲರಿಗೂ ಮಾರ್ಗದರ್ಶನ. ಎಲ್ಲರೂ ಅವರ ಸಂದೇಶಗಳನ್ನು ಅನುಸರಿಸಬೇಕು ಎಂದು ತಿಳಿಸಿದರು.

ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಸಮಾಜ ಪರಿವರ್ತನಾ ಟ್ರಸ್ಟ್ ಸದಸ್ಯ, ನಿವೃತ್ತ ವಾರ್ತಾಧಿಕಾರಿ ಬಿ.ಎಸ್.ತಿಮ್ಮೋಲಿ ನುಡಿನ ನಮನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಗೂ ಅರ್ಥವಾಗುವ ರೀತಿಯಲ್ಲಿ ಉತ್ತಮ ಸಂದೇಶಗಳನ್ನು ನೀಡುತ್ತಿದ್ದರು ಎಂದರು.

ಕನ್ನಡ ಸಾಹಿತ್ಯ ಪರಿಷತ್ ಮಾಜಿ ಜಿಲ್ಲಾಧ್ಯಕ್ಷ ಕತ್ತಿಗೆ ಚೆನ್ನಪ್ಪ, ಬಸವ ಮಂಟಪದ ಯೋಗೀಶ್ ನಿರ್ವಿಕಲ್ಪ, ವೀರಣ್ಣ ಹುಗ್ಗಿ, ಟ್ರಸ್ಟ್ ನಿರ್ದೇಶಕರಾದ ಕೆ.ಸಿ.ಬಸವರಾಜ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...