Thursday, August 13, 2026
Thursday, August 13, 2026

ರಾಜ್ಯಮಟ್ಟದ ಪುಸ್ತಕ ಸಮಿತಿಗೆ ಆಯ್ಕೆಗಾಗಿ ಪುಸ್ತಕ ಕಳಿಸಲು ಅರ್ಜಿ ಆಹ್ವಾನ

Date:

ಶಿವಮೊಗ್ಗ:

2022 ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಕನ್ನಡ, ಆಂಗ್ಲ, ಭಾರತೀಯ ಇತರೆ ಭಾಷೆಗಳ ಪುಸ್ತಕಗಳನ್ನು ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

2022 ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಪುಸ್ತಕಗಳನ್ನು ಗ್ರಂಥಸ್ವಾಮ್ಯ ವಿಭಾಗ, ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ, ಬೆಂಗಳೂರು ಇಲ್ಲಿ ದಿನಾಂಕ: 31-01-2023 ರೊಳಗೆ ಕಾಪಿರೈಟ್ ಮಾಡಿಸಿರತಕ್ಕದ್ದು. ಕಾಪಿರೈಟ್ ಮಾಡಿಸಿರುವ ಪುಸ್ತಕಗಳನ್ನು ಆಯ್ಕೆಗಾಗಿ ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿಯನ್ನು(ನೋಂದಣಿ ಪತ್ರದ ಪ್ರತಿಯೊಂದಿಗೆ) ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು 560001 ಇಲ್ಲಿಗೆ ದಿ: 31-01-2023 ರ ಒಳಗೆ ಸಲ್ಲಿಸುವುದು.

ನಿಗದಿತ ಅರ್ಜಿ ನಮೂನೆ ಮತ್ತು ನಿಬಂಧನೆಗಳ ಕುರಿತಾದ ಮಾಹಿತಿಯನ್ನು ಇಲಾಖಾ ಅಂತರ್ಜಾಲ www.dpl.karnataka.gov.in ಹಾಗೂ ರಾಜ್ಯದ ಎಲ್ಲಾ ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯಗಳ ಉಪನಿರ್ದೇಶಕರು/ಮುಖ್ಯ ಗ್ರಂಥಾಲಯಾಧಿಕಾರಿಗಳ ಕಚೇರಿಗಳಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : 080-22864990, 22867358 ನ್ನು ಸಂಪರ್ಕಿಸಬಹುದೆಂದು ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...