Tuesday, March 24, 2026
Tuesday, March 24, 2026

ಪತ್ರಿಕಾ ವಿತರಕರಿಗೆ ಸರ್ಕಾರ ಭದ್ರತೆ ಒದಗಿಸಬೇಕು-ಪತ್ರಕರ್ತ ಮಹೇಶ್

Date:

ಸೊರಬ: ಮಳೆ, ಗಾಳಿ, ಚಳಿಯನ್ನು ಲೆಕ್ಕಿಸದೇ ಪತ್ರಿಕಾ ವಿತರಣೆ ಮಾಡುವುದು ಸವಾಲಿನ ಕೆಲಸವಾಗಿದೆ. ಪತ್ರಿಕಾ ವಿತರಕರಿಗೆ ಸರ್ಕಾರ ಜೀವನ ಭದ್ರತೆ ಒದಗಿಸಬೇಕು ಎಂದು ಪತ್ರಕರ್ತ ಮಹೇಶ್ ಗೋಖಲೆ ಒತ್ತಾಯಿಸಿದರು.
ಪಟ್ಟಣದ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕದ ಸೊರಬದಲ್ಲಿ 2023ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಸಾಮಾಜಿಕ ಜಾಲತಾಣಗಳು, ಅಂತರ್ಜಾಲ ಪತ್ರಿಕೋದ್ಯಮದ ಪೈಪೋಟಿಯ ನಡುವೆ ಪತ್ರಿಕೆಗಳು ಮುದ್ರಣವಾಗುವವರೆಗೂ ಹಲವು ಹಂತದಲ್ಲಿ ಕಾರ್ಯನಿರ್ವಹಿಸಲಾಗುತ್ತದೆ. ಆದರೆ, ಮುದ್ರಣಗೊಂಡ ಪತ್ರಿಕೆಗಳನ್ನು ಓದುಗನ ಮನೆ ಬಾಗಿಲಿಗೆ ತಲುಪಿಸುವ ಪತ್ರಿಕಾ ವಿತರಕರು ಪತ್ರಿಕೆಗಳಿಗೆ ಕಳಸವಿದ್ದಂತೆ ಎಂದರೆ ತಪ್ಪಾಗಲಾರದು. ಪತ್ರಿಕೆಗಳು ನೀಡುವ ಕಮಿಷನ್ ಆಧಾರದಲ್ಲಿ ಕಾರ್ಯನಿರ್ವಹಿಸುವ ಪತ್ರಿಕಾ ವಿತರಕರಿಗೆ ಜೀವನ ಭದ್ರತೆ, ನಿವೇಶನ, ವಾಹನ ಸೌಲಭ್ಯ, ವೃದ್ಧಾಪ್ಯದಲ್ಲಿ ವೇತನ ಸೇರಿದಂತೆ ಸರ್ಕಾರದಿಂದ ಸಾಧ್ಯವಾದಷ್ಟು ಸೌಲಭ್ಯಗಳನ್ನು ಒದಗಿಸಬೇಕು ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸೊರಬ ಶಾಖೆ ಉಪಾಧ್ಯಕ್ಷ ಮುಹಮ್ಮದ್ ಆರೀಫ್, ಸದಸ್ಯ ಮಧುಕೇಶ್ವರ್, ಪತ್ರಿಕಾ ವಿತರಕರಾದ ಸುರೇಶ್, ಪುರುಷೋತ್ತಮ ಚಂದ್ರಗುತ್ತಿ ಸೇರಿದಂತೆ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...