Friday, April 3, 2026
Friday, April 3, 2026

ಗ್ರಾಮೀಣ ವಸತಿ ಯೋಜನೆ : ಫಲಾನುಭವಿಗಳು ಅತಂತ್ರ

Date:

ರಾಜ್ಯದಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ ಸರ್ವರಿಗೂ ಸೂರು, ಈ ನಾಡನ್ನು ಗುಡಿಸಲು ಮುಕ್ತ ಮಾಡುತ್ತವೆ ಎಂದು ಘೋಷಣೆ ಯನ್ನು ಮೂಡಿಸುತ್ತವೆ. ಆದರೆ, ಕಳೆದ ಮೂರು ವರ್ಷಗಳಿಂದ ರಾಜ್ಯದ ಗ್ರಾಮೀಣ ವಸತಿ ಯೋಜನೆಗಳು ಸ್ಥಗಿತಗೊಂಡಿದೆ. ಗ್ರಾಮೀಣ ವಸತಿಯನ್ನೆ ನಂಬಿಕೊಂಡು ಕೂತ ಅದೆಷ್ಟೋ ಕುಟುಂಬಗಳು ಇಂದಿಗೂ ಸರ್ಕಾರದ ವಸತಿ ಮನೆಗಳ ನಿರ್ಮಾಣಕ್ಕಾಗಿ ಕಾದು ಕುಳಿತಿವೆ.
ರಾಜ್ಯ ಸರ್ಕಾರ 2018- 19 ನೇ ಸಾಲಿನಿಂದ ಗ್ರಾಮೀಣ ವಸತಿ ಯೋಜನೆಗಳಿಗೆ ಅನುದಾನ ಹಂಚಿಕೆಯನ್ನೇ ನಿಲ್ಲಿಸಿದೆ. 2016-17, 2017-18ನೇ ಸಾಲಿನ ಫಲಾನುಭವಿಗಳಿಗೆ 2-3 ಬಿಲ್ ಗಳನ್ನು ಬಾಕಿ ಉಳಿಸಿಕೊಳ್ಳಲಾಗಿದೆ. ಇದರಿಂದ ಮನೆಗಳು ಅರೆಬರೆ ನಿರ್ಮಾಣದ ಸ್ಥಿತಿಯಲ್ಲಿವೆ.
ರಾಜೀವ್ ಗಾಂಧಿ ವಸತಿ ನಿಗಮವು ಗ್ರಾಮೀಣ ಭಾಗದಲ್ಲಿ ಪಂಚಾಯಿತಿಗಳ ಮೂಲಕ ಪ್ರಧಾನ ಮಂತ್ರಿ ಅವಾಸ್ ಯೋಜನೆ, ಅಂಬೇಡ್ಕರ್, ಬಸವ ವಸತಿ ಯೋಜನೆ, ಮತ್ಸ್ಯಾಶ್ರಯ ವಸತಿ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇವುಗಳ ಹಂಚಿಕೆ ಪಂಚಾಯಿತಿಗಳ ಮೂಲಕ ನಡೆಯುತ್ತದೆ. ಹಲವು ಪಂಚಾಯಿತಿ ಸದಸ್ಯರು ಮನೆ ನೀಡುವ ಭರವಸೆಯೊಂದಿಗೆ ಚುನಾವಣೆ ಎದುರಿಸುತ್ತಾರೆ. ಈಗ ಸರ್ಕಾರವೇ ಅನುದಾನವನ್ನೇ ನಿಲ್ಲಿಸಿರುವುದರಿಂದ ಮನೆಗಳ ನಿರ್ಮಾಣ ಪ್ರಕ್ರಿಯೆಯು ಸಂಪೂರ್ಣವಾಗಿ ನಿಂತಂತಾಗಿದೆ.
2018- 19 ರಲ್ಲಿ ಅತಿವೃಷ್ಟಿಯಲ್ಲಿ ಮನೆ ಕಳೆದುಕೊಂಡವರಿಗೆ ರಾಜ್ಯ ಸರಕಾರ 5 ಲಕ್ಷ ರೂ. ಪರಿಹಾರ ಘೋಷಿಸಿತ್ತು.
ರಾಜೀವ್ ಗಾಂಧಿ ವಸತಿ ನಿಗಮದ ಮೂಲಕವೇ ಪರಿಹಾರ ಹಂಚಿಕೆ ಮಾಡಿದ್ದರಿಂದಾಗಿ ವಸತಿ ಯೋಜನೆಗಳಿಗೆ ಅನುದಾನ ಹಂಚಿಕೆ ಸ್ಥಗಿತಗೊಂಡಿತೆಂಬ ಮಾತುಗಳು ಸರ್ಕಾರಿ ವಲಯದಿಂದ ಕೇಳಿಬಂದಿವೆ.
ಈಗ ವಸತಿ ಯೋಜನೆ ಮನೆಗಳ ಹಂಚಿಕೆಗೂ ಹಣ ಇಲ್ಲ. ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳಿಗೂ ಪರಿಹಾರ ಇಲ್ಲ ಎಂಬಂತಾಗಿದೆ.
ಇದರಿಂದಾಗಿ ಸರ್ಕಾರದಿಂದ ಕೇವಲ ಎರಡು ಅಥವಾ ಮೂರು ಬಿಲ್ಲುಗಳು ಸ್ವಿಕೃತಗೊಂಡ ಪರಿಣಾಮ ಮಿಕ್ಕ ಹಣ ಬಾಕಿಯಾಗಿ ಫಲಾನುಭವಿಗಳು ಅತಂತ್ರರಾಗಿದ್ದಾರೆ. ಫಲಾನುಭವಿಗಳ ಹಿತಾಸಕ್ತಿ ಮತ್ತು ಸದ್ಯದ ಮಳೆಗಾಲದ ಸಂಕಷ್ಟ ಪರಿಸ್ಥಿತಿಯನ್ನು ಸಹಾನುಭೂತಿಯಿಂದ ಸರ್ಕಾರ ಗಮನಿಸಬೇಕಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...