Thursday, August 13, 2026
Thursday, August 13, 2026

ತೀರ್ಥಹಳ್ಳಿಯ ಹೆದ್ದೂರಿನಲ್ಲಿ ಕಂಬದಿಂದ ಬಿದ್ದು ಲೈನ್ ಮನ್ ಸಾವು

Date:

ತೀರ್ಥಹಳ್ಳಿ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೆದ್ದೂರು ಎಂಬ ಗ್ರಾಮದಲ್ಲಿ ವಿದ್ಯುತ್ ಕಂಬದ ಮೇಲೆ ಕೆಲಸ ಮಾಡುತ್ತಿದ್ದ ಲೈನ್ ಮ್ಯಾನ್ ಒಬ್ಬರು ಕಂಬದಿಂದ ಬಿದ್ದು, ಆಸ್ಪತ್ರೆಗೆ ತೆರಳುವಾಗ ಮೃತಪಟ್ಟ ಘಟನೆ ಇಂದು ನಡೆದಿದೆ.

ರವಿ ನಾಯಕ (37) ಮೃತಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ. ರವಿ ನಾಯಕ ಅವರು ಲೈನ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಇಂದು ಹೆದ್ದೂರಿನ ಬಳಿ ಕೆಲಸ ಮಾಡುತ್ತಿರುವ ವೇಳೆ, ಆಯಾ ತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಇವರನ್ನು ಸ್ಥಳೀಯರು ಹತ್ತಿರದಲ್ಲೇ ಇದ್ದ, ಕಟ್ಟೆಹಕ್ಕಲು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಹೆಚ್ಚಿನ ಚಿಕಿತ್ಸೆಗಾಗಿ ತೀರ್ಥಹಳ್ಳಿಯ ಆಸ್ಪತ್ರೆಗೆ ಕರೆದೊಯ್ಯಲು ಸರಿಯಾದ ಸಮಯಕ್ಕೆ ಆಂಬುಲೆನ್ಸ್ ಸಿಗದ ಕಾರಣ,ಕಾರಿನಲ್ಲಿ ರವಿ ನಾಯಕ ಅವರನ್ನು ಕರೆದೊಯ್ಯುತ್ತಿದ್ದರು. ಈ ಸಂದರ್ಭದಲ್ಲಿ ತೀರ್ಥಹಳ್ಳಿ ಆಸ್ಪತ್ರೆ ಮಾರ್ಗ ಮಧ್ಯದಲ್ಲಿ ರವಿ ನಾಯಕ ಅವರು ಮೃತಪಟ್ಟಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಈ ಘಟನೆಯಿಂದ ಸ್ಥಳೀಯರು ಕಟ್ಟೆ ಹಕ್ಕಲು ಆಸ್ಪತ್ರೆಗೆ ಸರಿಯಾದ ಆಂಬುಲೆನ್ಸ್ ವ್ಯವಸ್ಥೆ ಇಲ್ಲವೆಂದು ಗ್ರಾಮಸ್ಥರು ಆಸ್ಪತ್ರೆಯ ಎದುರು ಕುಳಿತು ಧರಣಿ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...