Thursday, August 13, 2026
Thursday, August 13, 2026

ಹಿಂದುಳಿದ ಮತ್ತು ಅಲೆಮಾರಿ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Date:

2022-23 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ ಹಾಗೂ ಊಟ ಮತ್ತು ವಸತಿ ಸಹಾಯ ಯೋಜನೆಯಡಿ ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ದಿನಾಂಕ ಜನವರಿ 31 ರವರೆಗೆ ವಿಸ್ತರಿಸಲಾಗಿದೆ.

ದಿನಾಂಕ: 20-01-2023 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿ ನಿಗದಿಗೊಳಿಸಿದ್ದು ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಿಂದ ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆಗೊಳಿಸಲು ಮನವಿ ಬಂದ ಹಿನ್ನೆಲೆ ಅರ್ಜಿ ಅವಧಿ ವಿಸ್ತರಿಸಲಾಗಿದೆ.

ಆನ್‍ಲೈನ್ ಅರ್ಜಿ ಸಲ್ಲಿಸಲು ವೆಬ್‍ಸೈಟ್ www.//ssp.postmatric.karnataka.gov.in, ಸರ್ಕಾರಿ ಆದೇಶ ಮತ್ತು ಇತರೆ ಮಾಹಿತಿಗೆ https://bcwd.karnataka.gov.in, ಹೆಚ್ಚಿನ ಮಾಹಿತಿಗೆ ಇಲಾಖೆಯ ಸಹಾಯವಾಣಿ ಸಂಖ್ಯೆ : 8050770005/08182-222129 ಇಮೇಲ್ bcwdhelpline@gmail.com, ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಇಮೇಲ್ postmatrichelp@karnataka.gov.in ಮತ್ತು ಸಹಾಯವಾಣಿ 080-35254757 ನ್ನು ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...