Saturday, May 16, 2026
Saturday, May 16, 2026

ಮಹಿಳೆಯರು ಹೆಚ್ಚು ಅಧ್ಯಯನ ಮಾಡಿ ಸಾಧನೆ ಗುರಿ ಹೊಂದಬೇಕು-ಮೋಹನ್ ಕುಮಾರ್

Date:

ಕಳಸ: ಮಹಿಳೆಯರು ಜೀವನದಲ್ಲಿ ಸಿಗುವ ಅವಕಾಶವನ್ನು ಸದುಪಯೋಗಪಡಿಸಿ ಕೊಂಡು ಮುಂಬರುವ ದಿನಗಳಲ್ಲಿ ಹೆಚ್ಚು ಅಧ್ಯಯನ ನಡೆಸಿ ಸಾಧನೆ ಮಾಡುವ ಗುರಿ ಹೊಂದಬೇಕು ಎಂದು ಸಹಾಯಕ ಸಬ್ ಇನ್ಸ್ಪೆಕ್ಟರ್ ಡಾ. ಸಿ.ಆರ್.ಮೋಹನ್‌ಕುಮಾರ್ ಅವರು ಹೇಳಿದರು.

ಶ್ರೀ ಕ್ಷೇತ್ರ‍್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಮಹಿಳಾ ಜ್ಞಾನ ವಿಕಾಸ ಅಡಿಯಲ್ಲಿ ಪಟ್ಟಣದ ಕಳಸ ಪೊಲೀಸ್ ಠಾಣೆ ಆವರಣದಲ್ಲಿ ಮಹಿಳಾ ಅಧ್ಯಯನ ಪ್ರವಾಸ ಕಾರ್ಯಕ್ರಮವನ್ನು ಮಂಗಳವಾರ ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಪೊಲೀಸ್ ಇಲಾಖೆ ಬಗ್ಗೆ ಜನರಲ್ಲಿ ವಿಶ್ವಾಸ ಮೂಡಿಸುವ ಸಲುವಾಗಿ ಜನ ಸ್ನೇಹಿ ವ್ಯವಸ್ಥೆ, ಬೀಟ್, ಮಹಿಳಾ ಕಾನೂನು, 112ರ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ ಮಹಿಳೆಯರು ಪುರುಷರಂತೆ ಸಮಾನ ವೆಂಬ ಭಾವನೆ ಬೆಳೆಸಿಕೊಂಡು ಉತ್ತಮ ಸಾಧನೆ ಬಗ್ಗೆ ಗಮನ ಹರಿಸಬೇಕು ಎಂದರು.

ಮಹಿಳಾ ಜ್ಞಾನ ವಿಕಾಸ ಮೆಲ್ವಿಚಾರಕಿ ರಂಜಿತಾ ಮಾತನಾಡಿ ಮಹಿಳಾ ಸಬಲೀಕರಣ ದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ. ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಮಹಿಳೆ ಪ್ರಗತಿ ಸಾಧಿಸಿದಾಗ ಮಾತ್ರ ಸಬಲರಾಗಲು ಸಾಧ್ಯ ಎಂದರು.

ಈ ಸಂದರ್ಭದಲ್ಲಿ ಪ್ರೇರಣಾ, ಪ್ರೇಮ, ಹೇಮಾವತಿ ಸ್ನೇಹ, ಪ್ರಕೃತಿ, ಸಾವಿತ್ರಿ ಜಾನಕಿ, ಭಾರತಿ, ಸುಮಿತ್ರ, ಮಾಲತಿ ಹಾಗೂ ಇಲಾಖೆಯ ಸಿಬ್ಬಂದಿಗಳು ಸೇರಿದಂತೆ ಮತ್ತಿತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...