Wednesday, December 17, 2025
Wednesday, December 17, 2025

ಬದುಕಿನ ಬಗ್ಗೆ ಎಲ್ಲ ಆಯಾಮಗಳಲ್ಲಿ ಅರ್ಥೈಸಲು ವಿಜ್ಞಾನದ ಸದುಪಯೋಗ ಮಾಡಿ- ಜೆ.ಪಿ.ಕೃಷ್ಣೇಗೌಡ

Date:

ಶಿವಮೊಗ್ಗ: ಹಿಂದೆ ಹಾಗೂ ಇಂದು ಮತ್ತು ಮುಂದಿನ ಬದುಕು ಹೇಗಿರಬೇಕು. ಹೇಗೆ? ಬದುಕಬೇಕು ಎಂಬುದನ್ನು ಅತ್ಯಂತ ಸುಲಭವಾಗಿ ತಿಳಿದುಕೊಳ್ಳಬಹುದಾದಂತಹ ವೈಜ್ಞಾನಿಕ ವಾತಾವರಣ ನಿಮ್ಮ ಮುಂದಿದೆ ಅದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಸಾಹಿತಿ ವಾಗ್ಮಿ ಹಾಗೂ ಉಪನ್ಯಾಸಕ ಪ್ರೊಫೆಸರ್ ಕೃಷ್ಣೇಗೌಡ ಅವರು ಮಕ್ಕಳಿಗೆ ಕಿವಿಮಾತು ಹೇಳಿದರು.

ಶಿವಮೊಗ್ಗ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ನಡೆದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಸೂಕ್ಷ್ಮ ಪ್ರಜ್ಞೆಯ ಮೂಲಕ ವೈಜ್ಞಾನಿಕ ಹಾಗೂ ವೈಚಾರಿಕ ತಳಹದಿಯ ನಡುವೆ ಸುಭದ್ರವಾದ ಬದುಕನ್ನು ಕಟ್ಟಿಕೊಳ್ಳಬಹುದಾದ ವ್ಯವಸ್ಥೆಯನ್ನು ವಿವರಿಸಿದರು.

ಹಿಂದೆ ಶಿಕ್ಷಣಕ್ಕೆ ಅಷ್ಟೊಂದು ಆದ್ಯತೆ ಇರಲಿಲ್ಲ ಅದರಲ್ಲೂ ವಿಜ್ಞಾನಕ್ಕೆ ಅಷ್ಟೊಂದು ಅವಕಾಶಗಳು ಹಾಗೂ ಲಭ್ಯ ಸಂಪನ್ಮೂಲಗಳು ಸಿಗುತ್ತಿರಲಿಲ್ಲ ಈಗಿನ ಮಕ್ಕಳಿಗೆ ವೈಜ್ಞಾನಿಕ ಹಾಗೂ ಆಧುನಿಕ ಮಟ್ಟದ ವಿಜ್ಞಾನ ಕೈಗೆ ತಲುಪುತ್ತದೆ. ಅದನ್ನು ಸದ್ಬಳಕೆ ಮಾಡಿಕೊಳ್ಳಿ ಎಂದ ಅವರು ಇಂತಹ ವಿಜ್ಞಾನ ಪ್ರದರ್ಶನಗಳ ಮೂಲಕ ಹೊಸ ಹೊಸ ಆವಿಷ್ಕಾರಗಳು ನಡೆಯುವ ಸಾಧ್ಯತೆಗಳು ಹೆಚ್ಚಾಗುತ್ತದೆ ಎಂದರು.

ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಆದಿಚುಂಚನಗಿರಿ ಮಹಾಸಂಸ್ಥಾನದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರು ಮಾತನಾಡುತ್ತಾ, ನಾವು ನಮಗೆ ಅನಗತ್ಯವಾದ ವಿಷಯವನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ.

ಅಗತ್ಯದ ಸಂಸ್ಕೃತಿ ಬದುಕು ಹಾಗೂ ನಮ್ಮ ನಡುವಿನ ಚಿಕ್ಕ ಚಿಕ್ಕ ವಿಷಯಗಳನ್ನು ಮರೆತುಬಿಟ್ಟಿದ್ದೇವೆ. ಇದೊಂದು ದುರಂತದ ಸಂಗತಿ ಎಂದರು.

ವಿಜ್ಞಾನ ಎಂಬುದು ಅತ್ಯಂತ ಸೂಕ್ಷ್ಮ ವಿಷಯ. ವಿದ್ಯಾರ್ಥಿಗಳು ಮುಂದೆ ದೊಡ್ಡಮಟ್ಟದ ವಿಜ್ಞಾನಿಗಳಾಗಬೇಕು. ಹಾಗೆಯೇ ಅದರ ಜೊತೆ ನಮ್ಮ ದೇಶವನ್ನು ನಮ್ಮ ಸಂಸ್ಕೃತಿಯನ್ನು ನಮ್ಮ ಪರಿಸರದ ಸಮಗ್ರ ಮಾಹಿತಿಯನ್ನು ತಿಳಿದುಕೊಳ್ಳುವಂತಹವರಾಗಬೇಕು ಎಂದರು.

ಪ್ರಜ್ಞಾವಂತರು, ಜ್ಞಾನವಂತರು ಹಾಗೂ ಸಮಾಜದ ಗಣ್ಯ ವ್ಯಕ್ತಿಗಳಾಗಿ ಗುರುತಿಸಿಕೊಳ್ಳುವಂತಹ ರೀತಿಯಲ್ಲಿ ಬೆಳೆಯಬೇಕೆಂದು ಮಕ್ಕಳಿಗೆ ಕಿವಿ ಮಾತು ಹೇಳಿದರು.

ಯಾವುದೇ ಕ್ರೀಡೆ ಪ್ರದರ್ಶನದಂತಹ ಸ್ಪರ್ಧಾತ್ಮಕ ಪ್ರಕ್ರಿಯೆಯಲ್ಲಿ ಗೆಲುವು ಮಾತ್ರ ಮುಖ್ಯವಲ್ಲ. ಭಾಗವಹಿಸುವಿಕೆ ಅತಿ ಮುಖ್ಯ. ಸೋತವರು ದಡ್ಡರಲ್ಲ ಎಂಬುದನ್ನು ಅರಿತುಕೊಳ್ಳಬೇಕು. ಇಂದಿನ ಸೋಲು ಮುಂದಿನ ಗೆಲುವಾಗುತ್ತದೆ ಎಂದು ಗೆಲುವು ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಪರಾಭವ ಗೊಂಡವರನ್ನು ಮುಂದಿನ ಹೆಜ್ಜೆಯಲ್ಲಿ ಜಯಶೀಲರಾಗುವಂತಹ ಮನಸು ಬೆಳೆಯಲಿ ಎಂದು ಹುರಿದುಂಬಿಸಿದರು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಆಡಳಿತ ಅಧಿಕಾರಿ ಎ.ಟಿ.ಶಿವರಾಂ, ಪ್ರಾಂಶುಪಾಲೆ ಎಸ್.ಆರ್. ಹೇಮಾ, ಆಡಳಿತ ಮಂಡಳಿ ಸದಸ್ಯರು ಮತ್ತಿರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 18. ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ,...

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...