Wednesday, December 17, 2025
Wednesday, December 17, 2025

ಕನ್ನಡದ ಕಾಂತಾರಕ್ಕೆ ನೂರುದಿನದ ಮೆರುಗು

Date:

2022 ರ ಸಾಲಿನಲ್ಲಿ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದಿರುವ ಸಿನಿಮಾ ಎಂದರೆ ಅದು ಕಾಂತಾರ. ಇದರಲ್ಲಿ ರಿಷಬ್‌ ಶೆಟ್ಟಿ ಅವರದ್ದು ಪ್ರಧಾನ ಭೂಮಿಕೆ. ರಿಷಬ್ ಶೆಟ್ಟಿ ಅವರ ಅಭಿನಯ ಪ್ರೇಕ್ಷಕರ ಮನದಲ್ಲಿ ಅಚ್ಚೊತ್ತಿದೆ.

ಈ ಜನಪ್ರಿಯ ಪಡೆದ ಕಾಂತಾರ ಸಿನಿಮಾವು ತೆರೆಕಂಡು100 ದಿನಗಳು ಕಳೆದಿವೆ. ಭಾರತದಲ್ಲಿ ರಿಷಬ್‌ ಶೆಟ್ಟಿ ಅವರಿಗೆ ಹೆಸರು ತಂದುಕೊಟ್ಟ ಸಿನಿಮಾ ಎಂದೇ ಖ್ಯಾತಿ ಗಳಿಸಿದೆ. ಈಗ ಈ ಸಿನಿಮಾವು 100 ದಿನದ ಸಂಭ್ರಮದಲ್ಲಿದೆ.

ಕಾಂತಾರ ಸಿನಿಮಾವು 16 ಕೋಟಿ ರೂ. ಬಜೆಟ್‌ ನಲ್ಲಿ ತಯಾರಾಗಿದೆ. ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣ ಮಾಡಿದ ಈ ಸಿನಿಮಾ ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಹಾಗೂ ತುಳು ಭಾಷೆಯಲ್ಲೂ ಕೂಡ ಡಬ್ ಆಗಿದೆ.

ಚಿತ್ರೀಕರಣ,ಕಥೆ,ಅಭಿನಯ, ಲೊಕೇಶನ್, ಎಲ್ಲಾ ದೃಷ್ಟಿಯಿಂದ ತಯಾರಾಗಿ ಕಾಂತಾರ
ಊಹೆಗೂ ಮೀರಿದ ಗಲ್ಲಾ ಪೆಟ್ಟಿಗೆ ಯಶಸ್ಸು ಗಳಿಸಿದೆ.

ಕಾಂತಾರ ಸಿನಿಮಾವನ್ನು ಅಮೇಜಾನ್‌ ಪ್ರೈಮ್‌ ಓಟಿಟಿ ಖರೀದಿ ಮಾಡಿರುವುದು ಅದರ ಹೆಗ್ಗಳಿಕೆ.

ಇದೇ ಜ.15 ರಂದು ಕಿರುತೆರೆಯಲ್ಲೂ ಕಾಂತಾರ ಸಿನಿಮಾ ಶೋ ಆಗಲಿದೆ.

ತುಳುನಾಡಿನ ಆಚರಣೆ ಮತ್ತು ಅಲ್ಲಿನ, ಕಾಡಿನಲ್ಲಿವಾಸಿಸುವ ಜನರ ಬದುಕನ್ನು ಸಿನಿಮಾದಲ್ಲಿ ತೋರಿಸಲಾಗಿದೆ. ದೈವದ ಬಗೆಗಿನ ನಂಬಿಕೆಯ ಮೇಲೆ ಸಿನಿಮಾ ಸಾಗುತ್ತದೆ.

ಸಾಮಾನ್ಯವಾಗಿ ಇಂಥಹ ಸಿನಿಮಾಗಳು ಕರಾವಳಿ ಭಾಗದಲ್ಲಿ ಹೆಚ್ಚು ಸದ್ದು ಮಾಡುತ್ತಿದೆ. ಆದರೆ ಕಾಂತಾರ ಮಾತ್ರ ಕರಾವಳಿ ಮಾತ್ರವಲ್ಲದೆ, ಇಡೀ ದೇಶದಲ್ಲಿ ತನ್ನದೇ ಜನಪ್ರಿಯತೆ ಪಡೆದಿದೆ.

ರಜಿನಿಕಾಂತ್‌, ಕಮಲ್‌ ಹಾಸನ್‌ ಹೀಗೆ ಅನೇಕ ದೊಡ್ಡ ದೊಡ್ಡ ಸ್ಟಾರ್‌ ಗಳು ಸಿನಿಮಾದ ಬಗ್ಗೆ ಶ್ಲಾಘಿಸಿದ್ದಾರೆ.

ಸಿನಿಮಾಕ್ಕೆ ಎಲ್ಲೆಡೆ ಸಿಕ್ಕ ಪ್ರತಿಕ್ರಿಯೆ ನೋಡಿದಾಗ ಪ್ರತಿಕ್ರಿಯೆ ಅತ್ಯಂತ ಆಪ್ತವಾಗಿದೆ. ಅಷ್ಟೇ ಅಲ್ಲ ಇದರ ಎರಡನೇ ಭಾಗ ಚಲನಚಿತ್ರ ಆಗಬೇಕೆಂದು ಪ್ರೇಕ್ಷಕರು ಬಯಸಿದ್ದಾರೆ. ಆದರೆ, ಇದುವೆರೆಗೂ ಕಾಂತಾರ -2 ಸಿನಿಮಾ ಬರುತ್ತದೆ ಎನ್ನುವ ಬಗ್ಗೆ ಅಧಿಕೃತವಾಗಿ ಮಾಹಿತಿ ಇನ್ನೂ ಹೊರ ಬಿದ್ದಿಲ್ಲ.

ಸಿನಿಮಾ ರಿಲೀಸ್ ಆಗಿ 100 ದಿನಗಳು ಪೂರೈಸಿದೆ. ಈ ಬಗ್ಗೆ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅವರು ಟ್ವಿಟರ್‌ ನಲ್ಲಿ ಹೀಗೆ ಬರೆದು ಕೊಂಡಿದ್ದಾರೆ. ” ಬೆಳಕು..!! ಆದರೆ, ಇದು ಬೆಳಕಲ್ಲಾ 100 ದಿನದ ದರ್ಶನ” ಎಂದು ಬರೆದುಕೊಂಡಿದ್ದಾರೆ. ಹೀಗೆ ಕಾಂತಾರ ಸಿನಿಮಾದ 100 ದಿನದ ಸಂಭ್ರಮವನ್ನು ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...