Wednesday, October 2, 2024
Wednesday, October 2, 2024

ರಂಭಾಪುರಿ ಶ್ರೀ ವೀರಸೋಮೇಶ್ವರಜಗದ್ಗುರುಗಳ 68 ನೇ ಜನ್ಮದಿನೋತ್ಸವ

Date:

ಮೂಡಿಗೆರೆ: ಮನಸ್ಸಿಗೆ ಶಾಂತಿ ನೀಡುವ ಸಂಪತ್ತನ್ನು ಪಡೆಯಲು ನಾಗರೀಕರು ಧರ್ಮದ ದಾರಿಯಲ್ಲಿ ಮುನ್ನೆಡೆದು ಸಾಗಿದ್ದಲ್ಲಿ ಮಾತ್ರ ಲಭಿಸಲಿದೆ ಎಂದು ಶ್ರೀ ರೇಣುಕಾ ಚಾರ್ಯ ಟ್ರಸ್ಟ್ ನ ಸದಸ್ಯ ಬಿ.ಬಿ.ರೇಣುಚಾರ್ಯ ಅವರು ಹೇಳಿದರು.

ಮೂಡಿಗೆರೆ ಪಟ್ಟಣದ ಅವಿನ್ ಸ್ವರಸಂಗಮ ಸ್ಟುಡಿಯೋ, ಪುಷ್ಪಗಿರಿ ಸಾಂಸ್ಕತಿಕ ಪ್ರತಿಷ್ಠಾನ (ರಿ), ಅವಿನ್ ಟಿವಿ ಸಹಯೋಗದಲ್ಲಿ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಶಿವಾಚಾರ್ಯ ಜಗದ್ಗುರು ಗಳ 68ನೇ ಜನ್ಮದಿನೋತ್ಸವ ಪ್ರಯುಕ್ತ ಸಂಗೀತ ಸೌರಭ ಹಾಗೂ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಾಡು ಕಂಡ ಪೂಜ್ಯ ರಂಭಾಪುರಿ ಶ್ರೀ ಗಳು ನಾಡಿನೆಲ್ಲೆಡೆ ಧರ್ಮ ಉಳಿಯುವಿಕೆಗಾಗಿ ಶಾಂತಿ, ಸಮೃದ್ಧಿ ಸರ್ವರಿಗೂ ಲಭಿಸಲು, ಸಾಹಿತ್ಯ ಸಾಂಸ್ಕತಿಕ ಸಂವರ್ಧಿಸಲಿ ಎಂಬ ಆಶಯದೊಂದಿಗೆ ದೇಶದೆಲ್ಲೆಡೆ ನಿರಂತರವಾಗಿ ಸಂಚರಿಸಿ ವೀರಶೈವ ಧರ್ಮದ ಬಗ್ಗೆ ತಿಳಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ಪುಷ್ಪಗಿರಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಸಂಸ್ಥಾಪಕ ಡಾ.ಮೋಹನ್ ರಾಜಣ್ಣ ಮಾತನಾಡಿ ರಂಭಾಪುರಿ ಶ್ರೀ ಗಳು ರೇಣುಕಾಧಿ ಪಂಚಾಚಾರ್ಯರು, ಬಸವಾದಿ ಶಿವಶರಣರ ತತ್ವ ಆದರ್ಶಗಳನ್ನು ಎಲ್ಲೆಡೆ ಪಸರಿಸುತ್ತಾ ಧರ್ಮ ಸಾಂಸ್ಕೃತಿಕ ಆಚರಣೆ ಉಳಿಸುವ ಮೂಲಕ ಆರೋಗ್ಯಯುತ ಸಮಾಜ ನಿರ್ಮಾಣ ಮಾಡುವ ಉದ್ದೇಶದಿಂದ ಕಾರ್ಯೋನ್ನಮ್ಮಖರಾಗಿದ್ದಾರೆ ಎಂದರು.

ಅವಿನ್ ಟಿವಿ ಯ ವ್ಯವಸ್ಥಾಪಕ ಮಗ್ಗಲಮಕ್ಕಿ ಗಣೇಶ್ ಮಾತನಾಡಿ, ಎಲ್ಲಾ ಜಾತಿಯವರಿಗೂ ಸಂಸ್ಕಾರ ಕೊಡುವ ಧರ್ಮ ಎಂದರೆ ಅದು ವೀರಶೈವ ಧರ್ಮ. ಅಂತಹ ಧರ್ಮದ ಮೂಲಕ ಸಂಸ್ಕಾರ ಕೊಡುವ ಕೆಲಸ ಜಗದ್ಗುರು ಮಾಡುತ್ತಿದ್ದಾರೆ. ಅವರು ಶತಾಯುಷಿಗಳಾಗಿ ಬಾಳಲಿ ಎಂದು ಪ್ರಾರ್ಥಿಸಿದರು.

ಇದೇ ಸಂದರ್ಭದಲ್ಲಿ, ಸಂಗೀತ ಸೌರಭ ಕಾರ್ಯಕ್ರಮವನ್ನು ಬಕ್ಕಿ ಮಂಜುನಾಥ್ ಸುಚಿತ್ರಪ್ರಸನ್ನ, ಅಶ್ವಿನಿ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಮಹಾಸಭಾ ನಿರ್ದೇಶಕ ಹೆಚ್.ಆರ್ ಕಾಂತರಾಜ್, ಸಿದ್ದಾರ್ಥ, ವಸಂತ್ ಹಾರ್ಗೋಡ್, ಮಹಮ್ಮದ್ ಸಿದ್ದಿಕ್ ಮುಂತಾದವರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...