Friday, February 6, 2026
Friday, February 6, 2026

ಶಿವಮೊಗ್ಗದಲ್ಲಿ ಶ್ರೀಬಾಲ ಗಂಗಾಧರನಾಥ ಸ್ವಾಮೀಜಿ ಸಂಸ್ಮರಣಾ ಮಹೋತ್ಸವ

Date:

ಶಿವಮೊಗ್ಗ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 71ನೇ ಪೀಠಾಧ್ಯಕ್ಷರಾಗಿ ಸಿದ್ಧ ಸಿಂಹಾಸನಾರೋಹಣ ಮಾಡಿದಂತಹ ಪರಮಪೂಜ್ಯ ಯುಗ ಯೋಗಿ ಜಗದ್ಗುರು ಪದ್ಮಭೂಷಣ ಶ್ರೀ ಶ್ರೀ ಶ್ರೀ ಡಾ.ಬಾಲಗಂಗಾಧರನಾಥ ಮಹಾ ಸ್ವಾಮಿಗಳವರು ಜನಸಾಮಾನ್ಯರ ಉದ್ಧಾರಕ್ಕಾಗಿ ಅನ್ನ, ಅಕ್ಷರ, ಆರೋಗ್ಯ, ಆಶ್ರಯ, ಆಕಳು, ಪರಿಸರ ಮುಂತಾದ ಕ್ಷೇತ್ರಗಳಲ್ಲಿ ಆಂದೋಲನವನ್ನೇ ಮಾಡಿದರು. ಶೈಕ್ಷಣಿಕ, ಧಾರ್ಮಿಕ ಹಾಗೂ ಸಮಾಜ ಕ್ಷೇತ್ರದಲ್ಲಿ ಅಪಾರ ಸೇವೆಯನ್ನು ಸಲ್ಲಿಸಿದ್ದಾರೆ.

ಪರಮ ಪೂಜ್ಯರ ಅವಿಶ್ರಾಂತ ಕಾಯಕದ ಫಲವಾಗಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಅಡಿಯಲ್ಲಿ 475 ಕ್ಕೂ ಹೆಚ್ಚಿನ ವಿದ್ಯಾಸಂಸ್ಥೆಗಳು ಸ್ಥಾಪನೆಗೊಂಡಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಒಂದು ಲಕ್ಷದ ಹತ್ತು ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಪೂರ್ವ ಪ್ರಾಥಮಿಕ ಶಾಲೆಯಿಂದ ಸಂಸ್ಕೃತ ವೇದಾಗಮ ಹಾಗೂ ತಾಂತ್ರಿಕ, ವೈದ್ಯಕೀಯ ವಿಜ್ಞಾನದ ವರಗೆ ಯಾವುದೇ ಜಾತಿ, ಮತ, ಲಿಂಗ ಭೇದ ವಿಲ್ಲದೆ ವ್ಯಾಸಂಗ ಮಾಡುತ್ತಿದ್ದಾರೆ. ಶ್ರೀ ಮಠದ ವತಿಯಿಂದ ವಿವಿಧ ಕಾರ್ಯಕ್ರಮಗಳು ಜನವರಿ 12 ರಿಂದ 18ರ ವರೆಗೆ 10ನೇ ಸಂಸ್ಮರಣಾ ಮಹೋತ್ಸವ ನಡೆಯಲಿದೆ.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪರಮಪೂಜ್ಯ ಜಗದ್ಗುರು ಶ್ರೀಶ್ರೀಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ವಹಿಸಲಿದೆ.

ಜ. 12 ರಂದು ರೈತರ ಸಮಾವೇಶ,13 ರಂದು ಹೋಮ, ಹವನಾದಿ ಧಾರ್ಮಿಕ ಕಾರ್ಯಕ್ರಮ,14 ರಂದು ಹಿರಿಯ ವಿದ್ಯಾರ್ಥಿಗಳ ವೇದಿಕೆ ಸಮಾರಂಭ,15 ರಂದು ಮಕ್ಕಳ ಸಾಹಿತ್ಯ ಸಮ್ಮೇಳನ,16 ರಂದು ಕುವೆಂಪು ಸಾಹಿತ್ಯ ದರ್ಶನ, 17 ರಂದು ರಾಜ್ಯಮಟ್ಟದ ಚುಂಚಾದ್ರಿ ಮಹಿಳಾ ಸಮಾವೇಶ, ಹಾಗೂ 18 ರಂದು ಜಯಂತ್ಯುತ್ಸವ ಹಾಗೂ ಸಂತ ಭಕ್ತ – ಸಂಗಮ ನಡೆಯಲಿದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...