Thursday, February 5, 2026
Thursday, February 5, 2026

ಎಂ-ಸ್ಯಾಂಡ್ ಬಂತು : ನದಿ ಮರಳಿಗೆ ಬೆಲೆ ಇಲ್ಲ

Date:

ರಾಜ್ಯದಲ್ಲಿ ಮರಳಿನ ಬೇಡಿಕೆ ಮತ್ತು ಪೂರೈಕೆ ವ್ಯವಸ್ಥೆಗಳೇ ಕೃತಕ ಅಭಾವ ಸೃಷ್ಟಿಸಿ ವ್ಯವಹಾರ ಕುದುರಿಸುವ ಕಾರಣದಿಂದ ದರ ಗಗನಕ್ಕೇರಿದೆ. ಈ ವ್ಯಾಪಾರ ದಂದೆಯಾಗಿ ಮಾರ್ಪಟ್ಟಿದೆ. ನಿರ್ಮಾಣ ವಲಯ ಈ ರೀತಿ ಅಭಿಪ್ರಾಯ ವ್ಯಕ್ತಪಡಿಸಿದೆ.
ನದಿ ಮರಳಿನಿಂದ ಬೇಡಿಕೆ ನೀಗಿಸಲು ಎಂ-ಸ್ಯಾಂಡ್ ಪರ್ಯಾಯ ಆಯ್ಕೆಯಾಗಿದೆ. ನಿರ್ಮಾಣ ವಲಯ ಈಗ ನದಿ ಮರಳು ಆಶ್ರಯಿಸಿಲ್ಲ ಎಂದು ಭಾರತೀಯ ಬಿಲ್ಡರ್ ಗಳ ಒಕ್ಕೂಟದ ಅಧ್ಯಕ್ಷರಾಗಿರುವ ಜಿ.ಎಂ.ರವೀಂದ್ರ ಅವರು ತಿಳಿಸಿದ್ದಾರೆ.
2018ರಲ್ಲಿ 11 ಕೋಟಿ ರೂಪಾಯಿ ಹೂಡಿಕೆ ಮಾಡಿ ಮಲೇಷಿಯಾದಿಂದ 56,400 ಟನ್ ಮರಳನ್ನು ನವ ಮಂಗಳೂರು ಬಂದರಿಗೆ ತರಿಸಿದ್ದೆವು. ಟನ್ ಗೆ 2,200ರೂ. ವೆಚ್ಚವಾಗಿದೆ. ಬೇಡಿಕೆ ಇಲ್ಲದ್ದರಿಂದ ಟನ್ ಗೆ 1,400ಕ್ಕೆ ಮಾರಿದೆವು. ಅಷ್ಟೂ ಮರಳು ಖಾಲಿ ಮಾಡಲು ಎರಡು ವರ್ಷ ಬೇಕಾಯಿತು. 5ಕೋಟಿ ರೂ. ನಷ್ಟ ಆಗಿದೆ ಎಂದು ಮರಳು ಆಮದು ಮಾಡಿದ್ದ ಚೆನ್ನೈನ ಇಂಟಿಗ್ರೇಟೆಡ್ ಸರ್ವಿಸ್ ಪಾಯಿಂಟ್ ಕಂಪನಿಯ ನಿರ್ದೇಶಕರೊಬ್ಬರು ತಿಳಿಸಿದ್ದಾರೆ.
ರಾಜ್ಯದಲ್ಲಿ ಗುರುತಿಸಿದ ನೈಸರ್ಗಿಕ ಮರುಳು ನಿಕ್ಷೇಪಗಳ ಪೈಕಿ 251ನ್ನು ಹರಾಜು ಮಾಡಲಾಗಿದೆ. ಉಳಿದ 102 ನಿಕ್ಷೇಪಗಳನ್ನು ಸರ್ಕಾರಿ ಸ್ವಾಮ್ಯದ ಹಟ್ಟಿ ಚಿನ್ನದ ಗಣಿ (ಎಚ್ ಜಿಎಂಲ್) ಮತ್ತು ಕರ್ನಾಟಕ ರಾಜ್ಯ ಖನಿಜ ನಿಗಮಕ್ಕೆ ವಹಿಸಿ ಗ್ರಾಹಕರಿಗೆ ಪೂರೈಸಲು ಹೊಸ ಮರಳು ನೀತಿಯಲ್ಲಿ ಪ್ರಸ್ತಾಪಿಸಲಾಗಿದೆ.
ಮರಳು ಗಣಿಗಾರಿಕೆಗೆ ಗುತ್ತಿಗೆ ಪಡೆದ ಸಂಸ್ಥೆಗಳ ಅವಧಿ ಮುಗಿದ ಬಳಿಕ ಆ ನಿಕ್ಷೇಪಗಳಲ್ಲಿ ಮರಳು ಗಣಿಗಾರಿಕೆ ಮತ್ತು ಸಾಗಣೆ ಹೊಣೆಯನ್ನು ಈ ಸಂಸ್ಥೆಗಳೇ ವಹಿಸಿಕೊಳ್ಳಲಿದೆ ಎಂಬ ಮಾಹಿತಿ ದೊರೆತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಕಾರು ಮತ್ತು ಬೈಕ್ ಅಪಘಾತ. ಮಾನವೀಯತೆ ಮೆರೆದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಸೊರಬ ತಾಲ್ಲೂಕಿನ ಉಳವಿಯ...

Shivamogga News ಬಲಿಷ್ಢ ವ್ಯವಹಾರ ಮತ್ತು ಬಲಿಷ್ಢ ಕುಟುಂಬ ಇದ್ದಾಗಲೇ ಸಂತೋಷ ಲಭ್ಯ- ಬಿ.ಗೋಪಿನಾಥ್

Shivamogga News ಕುಟುಂಬವು ನಮಗೆ ಭಾವನಾತ್ಮಕ ಶಕ್ತಿ ಹಾಗೂ ಬೆಂಬಲ ನೀಡುತ್ತದೆ...