ರಾಜ್ಯದಲ್ಲಿ ಕೆಲವೆಡೆ ಕಳೆದೆರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಇದರಿಂದ ಜಿಲ್ಲೆಯ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಶಿವಮೊಗ್ಗದ ನ್ಯೂ ಮಂಡ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಒಂದು ಅಡಿ ನೀರು ನಿಂತಿದೆ. ಇದರಿಂದ ಮಕ್ಕಳಿಗೆ ಶಾಲೆಗೆ ತೆರಳು ಕಷ್ಟಕರವಾಗಿದೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನಲ್ಲಿ ನಿರಂತರ ಮಳೆಯಿಂದಾಗಿ ರೈತರು ಬೆಳೆದ ರಾಗಿ ಬೆಳೆಯು ನೆಲಕ್ಕುರುಳಿದ. ಇದರಿಂದ ಅನ್ನದಾತರು ಕಂಗಾಲಾಗಿದ್ದಾರೆ.
ಹಾಸನ ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆಯಾಗಿದೆ. ಗೊರವನಹಳ್ಳಿಯಲ್ಲಿ ಮನೆಯ ಗೋಡೆ ಕುಸಿದಿದೆ. ಜೋಳ ,ರಾಗಿ ಬೆಳೆಗಳ ಕಟಾವಿಗೆ ಅಡ್ಡಿ ಉಂಟಾಗಿದೆ.
ಉತ್ತರ ಕನ್ನಡ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಜೋರು ಮಳೆ ಯಾಗಿದೆ. ಭಟ್ಕಳ, ಹೊನ್ನಾವರ, ಶಿರಸಿ ವಿವಿಧೆಡೆ ಸಾಧಾರಣ ಮಳೆಯಾಗಿದೆ.
ರಾಜ್ಯದ ಕರಾವಳಿ ಹಾಗೂ ಮಳೆನಾಡಿನ ಒಳನಾಡಿನ ಹಲವು ಜಿಲ್ಲೆಗಳಲ್ಲಿ ನವೆಂಬರ್ 16 ರಿಂದ 18ರವರೆಗೆ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.