Wednesday, December 10, 2025
Wednesday, December 10, 2025

ಹಳ್ಳಿಹಳ್ಳಿಗಳಲ್ಲಿ ಬಿಜೆಪಿ ಕಾರ್ಯಕರ್ತರ ಪಡೆ ಸದೃಢವಾಗಿದೆ- ಯಡಿಯೂರಪ್ಪ

Date:

ಹೊಸನಗರ: ರಾಜ್ಯದಲ್ಲಿ ಅನೇಕ ಪಾದಯಾತ್ರೆಗಳ ಮೂಲಕ ಪಕ್ಷ ಕಟ್ಟಿ ಬೆಳೆಸಿದ್ದೇನೆ. ಅಂದಿನ ಹೋರಾಟದ ಫಲ ಇಂದು ಬಿಜೆಪಿ ಅಧಿಕಾರ ನಡೆಸುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು.

ಹೊಸನಗರ ತಾಲೂಕಿನ ಬ್ರಹ್ಮೇಶ್ವರ ಗ್ರಾಮದಲ್ಲಿ 3 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಅಖಿಲ ಭಾರತ ವೀರಶೈವ ಸಮಾಜದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಹೋರಾಟದ ದಿನದಲ್ಲಿ ಶಾಸಕರಾಗಿದ್ದವರು ನಾನು ಹಾಗೂ ದಕ್ಷಿಣ ಕನ್ನಡದ ವಸಂತ ಬಂಗೇರ. ಆದರೆ ಇಂದು ಹಳ್ಳಿಹಳ್ಳಿಯಲ್ಲೂ ಬಿಜೆಪಿ ಕಾರ್ಯಕರ್ತರ ಪಡೆ ಸದೃಢವಾಗಿದೆ ಎಂದು ತಮ್ಮ ಸಂತಸವನ್ನು ವ್ಯಕ್ತಪಡಿಸಿದರು.

ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶ ಕಂಡ ದಣಿವರಿಯದ ನಾಯಕರಾಗಿದ್ದು, ಅವರ ನೇತೃತ್ವದಲ್ಲಿ ನಾವೆಲ್ಲ ಕೆಲಸ ಮಾಡಬೇಕಾಗಿದೆ. ಸಮೃದ್ಧ ಭಾರತ ಕಟ್ಟಬೇಕಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಸಾಗರ ಶಾಸಕರಾದ ಹರತಾಳು ಹಾಲಪ್ಪ, ಮಳಲಿ ಮಠದ ಶ್ರೀ ಷ.ಬ್ರ.ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು, ಮೂಲೆಗದ್ದೆ ಮಠದ ಶ್ರೀ ಮ.ನಿ.ಪ್ರ. ಅಭಿನವ ಚನ್ನಬಸವ ಮಹಾಸ್ವಾಮಿಗಳು, ಸಂಸದರಾದ ಶ್ರೀ ಬಿ ವೈ ರಾಘವೇಂದ್ರ ರವರು, ಶ್ರೀ ಟಿ ಡಿ ಮೇಘರಾಜ್, ಶ್ರೀ ಎಸ್ ಎಸ್ ಜ್ಯೋತಿಪ್ರಕಾಶ್,ಶ್ರೀ ಎಸ್ ಆರ್ ಷಡಕ್ಷರಿ, ಶ್ರೀ ಚನ್ನವೀರಪ್ಪ,ಶ್ರೀ ಜಿ.ಯುವರಾಜ್, ಶ್ರೀ ಜಯಶೀಲಪ್ಪ ಗೌಡ್ರು,ಶ್ರೀ ಹಾಲಪ್ಪ ಗೌಡ್ರು,ಶ್ರೀ ಚಂದ್ರ ಮೌಳಿ, ಶ್ರೀ ಹಾಲಪ್ಪ ಚಿಕ್ಕಮಣತಿ, ಶ್ರೀಮತಿ ಅನಿತಾ ರವಿಶಂಕರ್,ಶ್ರೀ ಹೆಚ್ ಆರ್ ತೀರ್ಥೇಶ್, ಹಾಗೂ, ಮಹಾಸಭಾ ಎಲ್ಲಾ ಸದಸ್ಯರು, ಯುವ ವೇದಿಕೆಯ ಎಲ್ಲಾ ಸದಸ್ಯರು, ಮಹಿಳಾ ವೇದಿಕೆಯ ಎಲ್ಲಾ ಸದಸ್ಯರು, ವೀರಭದ್ರೇಶ್ವರ ದೇವನ ಸ್ಥಾನ ಸಮಿತಿಯ ಎಲ್ಲಾ ಸದಸ್ಯರು, ಇನ್ನೂ ಮುಂತಾದ ಗಣ್ಯರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

L.B. Colleges ಸಾಗರದ ಎಲ್ .ಬಿ‌.ಕಾಲೇಜಿನ ಮುಖ್ಯದ್ವಾರಕ್ಕೆ ಶಿಲಾನ್ಯಾಸ.

L.B. Colleges ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ ನೆಡೆಸುತ್ತಿರುವ ಲಾಲ್ ಬಹದ್ದೂರ್ ಕಲಾ,...

Shimoga News ಮಕ್ಕಳು ಉತ್ಸಾಹದ ಚಿಲುಮೆಗಳು.ಉತ್ತಮ ಊಟ ಆಟ ಪಾಠದೊಂದಿಗೆ ಸಮಾಜದ ಅಭಿವೃದ್ಧಿ- ನ್ಯಾ.ಎಂ.ಎಸ್.ಸಂತೋಷ್

Shimoga News ಮಕ್ಕಳು ಉತ್ಸಾಹದ ಚಿಲುಮೆಗಳಾಗಿದ್ದು, ಉತ್ತಮ ಊಟ-ಆಟ-ಪಾಠದೊಂದಿಗೆ ಪ್ರಗತಿ ಹೊಂದಿ...

YADAV School Of Chess ಆನ್ ಲೈನ್ ಮೂಲಕಹಿಂದುಳಿದ & ಬಡಮಕ್ಕಳಿಗೆಒಂದು ತಿಂಗಳ ಚೆಸ್ ಕ್ರೀಡಾ ತರಬೇತಿ

YADAV School Of Chess ರಾಜೇಂದ್ರ ನಗರದಲ್ಲಿರುವ ಪ್ರತಿಷ್ಠಿತ ಯಾದವ ಸ್ಕೂಲ್...

Vallabhbhai Patel ಭ್ರಷ್ಟಾಚಾರವು ದೇಶದ ಆಂತರಿಕ ಶತ್ರು.- ಡಾ.ಹೆಚ್.ಬಿ.ಮಂಜುನಾಥ್

ಮಹಾತ್ಮ ಗಾಂಧಿ, ಸರ್ದಾರ್ ಪಟೇಲ್ ಸ್ಮರಣೆಯಲ್ಲಿ ಹಿರಿಯ ಪತ್ರಕರ್ತ ಡಾ ಎಚ್...