Friday, April 3, 2026
Friday, April 3, 2026

ನ್ಯಾಯಮೂರ್ತಿಗಳ ಸಮ್ಮುಖ:ಲಿಖಿಂಪುರ -ಖೇರಿ ತನಿಖೆ

Date:

ಲಿಖಿಂಪುರ -ಖೇರಿ ಹಿಂಸಾಚಾರ ಪ್ರಕರಣದ ತನಿಖೆಯ ಉಸ್ತುವಾರಿಯನ್ನ ನಿವೃತ್ತ ನ್ಯಾಯಮೂರ್ತಿ ನಡೆಸುವಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿತ್ತು. ಉತ್ತರ ಪ್ರದೇಶ ಸರ್ಕಾರ ಅದರ ಪಾಲನೆ ಮಾಡಲು ತನ್ನ ಸಮ್ಮತಿ ಸೂಚಿಸಿದೆ.
ವಿಶೇಷ ತನಿಖಾ ತಂಡವನ್ನು ( ಎಸ್ಐಟಿ) ಮೇಲ್ದರ್ಜೆಗೆ ಏರಿಸುವಂತೆ ಉತ್ತರಪ್ರದೇಶ ಸರ್ಕಾರಕ್ಕೆ ನ್ಯಾಯಾಲಯವು ಸೂಚಿಸಿದೆ. ಉನ್ನತ ಶ್ರೇಣಿಯ ಅಧಿಕಾರಿಗಳನ್ನು ನೇಮಿಸಲು ಹೇಳಿದೆ. ಉತ್ತರಪ್ರದೇಶ ಕೇಡರ್ ನ ಐಪಿಎಸ್ ಅಧಿಕಾರಿಗಳನ್ನು ನೇಮಿಸಬೇಕು. ಆದರೆ, ಅವರು ಮೂಲತಃ ಬೇರೆ ರಾಜ್ಯದವರಾಗಿರಬೇಕು ಎಂದು ತಿಳಿಸಿದೆ.
ನಾಲ್ವರು ರೈತರು ಮತ್ತು ಒಬ್ಬ ಪತ್ರಕರ್ತನ ಮೇಲೆ ಎಸ್ ಯುವಿ ವಾಹನ ಹರಿಸಿ ಹತ್ತಿ ಹಾಗೂ ನಂತರದ ಹಿಂಸಾಚಾರದಲ್ಲಿ ಮೂವರ ಹತ್ಯೆಯು ಅಕ್ಟೋಬರ್ 3ರಂದು ಲಿಖಿಂಪುರ -ಖೇರಿಯಲ್ಲಿ ನಡೆದಿತ್ತು.
ಸುಪ್ರೀಂಕೋರ್ಟ್ ಅಥವಾ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಯೊಬ್ಬರನ್ನು ತನಿಖೆಯ ದಿನ ನಿತ್ಯದ ಪ್ರಗತಿಯ ಉಸ್ತುವಾರಿಗೆ ನೇಮಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಎಂ. ವಿ.ರಮಣ ಅವರ ನೇತೃತ್ವದ ಪೀಠವು ಹೇಳಿದೆ.
ತನಿಖೆ ಸರಿಯಾಗಿ ನಡೆಯುತ್ತಿಲ್ಲ ಎಂದು ಉತ್ತರಪ್ರದೇಶ ಸರ್ಕಾರವನ್ನು ಸುಪ್ರೀಂಕೋರ್ಟ್ ಇದೇ 8 ರಂದು ತರಾಟೆಗೆ ತೆಗೆದುಕೊಂಡಿತ್ತು. ಪಂಜಾಬ್-ಹರಿಯಾಣ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿಯನ್ನು ತನಿಖೆಯ ಪ್ರಗತಿಯ ಮೇಲೆ ನಿಗಾ ಇರಿಸಲು ನೇಮಿಸುವ ಪ್ರಸ್ತಾಪವನ್ನೂ ಮುಂದಿಟ್ಟಿತ್ತು.
ಪ್ರಕರಣದ ಪ್ರಮುಖ ಆರೋಪಿ ಯೊಬ್ಬರನ್ನು ರಕ್ಷಿಸುವುದಕ್ಕಾಗಿಯೇ ಸಾಕ್ಷ್ಯ ಸಂಗ್ರಹ ಮಾಡಿದಂತಿದೆ ಎಂದು ಅತೃಪ್ತಿ ವ್ಯಕ್ತಪಡಿಸಿತ್ತು. ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ, ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಅವರನ್ನು ಪರೋಕ್ಷವಾಗಿ ಉಲ್ಲೇಖಿಸಿ ಹೀಗೆ ಹೇಳಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...