Thursday, February 5, 2026
Thursday, February 5, 2026

ದಾನಗಳಲ್ಲಿ ವಿದ್ಯಾದಾನವೇ ಶ್ರೇಷ್ಢ-ಡಾ.ಸರ್ಜಿ

Date:

ಶಿವಮೊಗ್ಗ: ಎಲ್ಲ ದಾನಗಳಿಗಿಂತ ವಿದ್ಯಾದಾನ ದೊಡ್ಡದು. ವಿದ್ಯೆಯನ್ನು ಒಲಿಸಿಕೊಂಡರೆ ಜೀವನದಲ್ಲಿ ಎಲ್ಲವನ್ನೂ ಪಡೆದುಕೊಳ್ಳಬಹುದು ಎಂದು ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಡಾ.ಧನಂಜಯ ಸರ್ಜಿ ಅವರು ಹೇಳಿದರು.

ಶಿವಮೊಗ್ಗದ ಕುವೆಂಪು ರಂಗ ಮಂದಿರದಲ್ಲಿ ಮೌಂಟೆನ್‌ ಇನೋವೇಟಿವ್‌ ಸ್ಕೂಲ್‌ನ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಮೌಂಟೆನ್‌ ಇನೋವೇಟಿವ್‌ ಶಿಕ್ಷಣ ಸಂಸ್ಥೆಯು ಉತ್ತಮ ಶಿಕ್ಷಣವನ್ನು ನೀಡುವ ಮೂಲಕ ಬಹು ಎತ್ತರಕ್ಕೆ ಬೆಳೆದಿದೆ. ಸಂಸ್ಥೆಯು ಇನ್ನಷ್ಟು ಬೃಹತ್‌ ಆಗಿ ಬೆಳೆಯಲಿ ಎಂದು ಆಶಿಸಿದರು.

ನೂರಾರು ವಿದ್ಯಾರ್ಥಿಗಳು ಅದ್ಭುತವಾಗಿ ಮನರಂಜನಾ ಕಾರ್ಯಕ್ರಮಗಳನ್ನು ಪ್ರದರ್ಶಿಸಿರುವುದು ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕರ ಹೊಣೆಗಾರಿಕೆಗಾರಿಕೆಗೆ ಸಾಕ್ಷಿಯಾಗಿದೆ. ಮನೆಯಲ್ಲಿ ಒಂದೆರಡು ಮಕ್ಕಳನ್ನು ಸಮರ್ಥವಾಗಿ ನಿಭಾಯಿಸುವುದು ಕಷ್ಟ. ಆದರೆ, ಎಲ್ಲರನ್ನೂ ಶಿಸ್ತಿನಿಂದ ಬೆಳೆಸುವ ಮೂಲಕ ಅವರಲ್ಲಿ ಸಂಸ್ಕೃತಿ ಹಾಗೂ ಸಂಸ್ಕಾರವನ್ನು ತುಂಬುವ ಕಾಯಕವನ್ನು ಮಾಡುತ್ತಿದೆ ಎಂದು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಎಂಐಇಎಸ್‌ ಶೈಕ್ಷಣಿಕ ನಿರ್ದೇಶಕ ಶಿವಕುಮಾರ್‌ ಟಿ.ಎಸ್‌., ಕಾರ್ಯದರ್ಶಿ ಶಿಲ್ಪಶ್ರೀ, ಪ್ರಾಂಶುಪಾಲೆ ಶಿಲ್ಪ ಅರವಿಂದ್‌ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...