Friday, April 3, 2026
Friday, April 3, 2026

ಮಣ್ಣ ಮಕ್ಕಳನ್ನು ಕಾಡಿದ, ಮಳೆರಾಯ

Date:

ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರೈತರ ಬೆಳೆ ನಾಶಕ್ಕೆ ಕಾರಣವಾಗಿದೆ.

ಅಪಾರ ಬೆಳೆಯ ನಾಶದ ಪರಿಣಾಮವಾಗಿ ತರಕಾರಿಗಳ ಬೆಲೆ ಏರುಗತಿಯಲ್ಲಿದೆ.

ಕಳೆದ ತಿಂಗಳಿಗೆ ಹೋಲಿಸಿದರೆ ಸೀಮೆ ಬದನೆಕಾಯಿ, ಬೀಟ್ರೂಟ್ ಹೊರತುಪಡಿಸಿ ಇತರೆ ಎಲ್ಲಾ ತರಕಾರಿಗಳು ಶೇ. 50ರಿಂದ 60 ರಷ್ಟು ಏರಿಕೆಯಾಗಿವೆ. ಗೆಡ್ಡೆಕೋಸು, ದಪ್ಪ ಮೆಣಸಿನಕಾಯಿ, ನುಗ್ಗೆಕಾಯಿ ಹೀಗೆ ಇತ್ಯಾದಿ ತರಕಾರಿಯ ಬೆಲೆ ಏರಿದೆ. 15 ಕೆಜಿ ಟೊಮೆಟೊ ಬಾಕ್ಸ್ ಕಳೆದ ತಿಂಗಳು 400ರಿಂದ 450 ರೂಗಳಿಂದ 800 ರೂ. ತಲುಪಿದೆ ಎಂದು ಫೋರ್ ಸ್ಟಾರ್ ಗ್ರೂಪ್ಸ್ ಟ್ರೇಡರ್ಸ್ ನ ಪ್ರಕಾಶ್ ಅವರು ತಿಳಿಸಿದ್ದಾರೆ.

ವಾಡಿಕೆಗಿಂತ ಹೆಚ್ಚು ಸುರಿಯುತ್ತಿರುವ ಮಳೆಯಿಂದಾಗಿ ಕೊಡಗಿನ ಕಾಫಿ, ಮಲೆನಾಡಿನ ಅಡಿಕೆ ಬೆಳೆ, ಚಾಮರಾಜನಗರ ಹಾಸನದಲ್ಲಿ ಮೆಕ್ಕೆಜೋಳ ರಾಗಿ ಬೆಳೆಗಳಿಗೆ ಹಾನಿ ಉಂಟುಮಾಡಿದೆ. ಕಟಾವಿಗೆ ಬಂದ ರಾಗಿ, ಶೇಂಗಾ, ಕಾಳುಮೆಣಸು ನಾಶವಾಗಿವೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ದಲ್ಲಿ ಭಾರಿ ಪ್ರಮಾಣದ ನೀರು ನಿಂತು ಹೊಲಗದ್ದೆಗಳು ಸಂಪೂರ್ಣ ಜಲಾವೃತಗೊಂಡಿವೆ. ಬೆಂಗಳೂರು, ಮೈಸೂರು, ದಾವಣಗೆರೆ, ಕೋಲಾರ ಮುಂತಾದ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ.

ಪೈರು ಕೊಯ್ಲುಗುವ ಹಂತದಲ್ಲಿ ಇಂತಹ ದುಸ್ಥಿತಿ ಬಂದಿದೆ. ಕಷ್ಟಪಟ್ಟು ಬೆಳೆದ ಬೆಳೆಯು ಕೈಗೆ ಸೇರುವಷ್ಟರಲ್ಲಿ ನೀರುಪಾಲಾಗಿದೆ ಎಂದು ರೈತರು ಕಂಗಾಲಾಗಿದ್ದಾರೆ.

ಕಷ್ಟಪಟ್ಟು ಬೆವರು ಹರಿಸಿ, ಸಾಲ ಸೋಲ ಮಾಡಿ ಬೆಳೆದ ಬೆಳೆಯು ಇಂದು ನೀರುಪಾಲಾಗಿದೆ. ರೈತರ ಸ್ಥಿತಿ ಚಿಂತಾಜನಕ. ಇಂತಹ ಸಂದರ್ಭದಲ್ಲಿ ಅವರಿಗೆ ನೆರವಾಗಲು ರಾಜ್ಯ ಸರ್ಕಾರ ಪರಿಹಾರ ಚಟುವಟಿಕೆ ಆರಂಭಿಸಬೇಕಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...