Tuesday, December 16, 2025
Tuesday, December 16, 2025

ತೀರ್ಥಹಳ್ಳಿಯಲ್ಲಿ ಫೆ.12 ರಿಂದ ದಕ್ಷಿಣ ಭಾರತ ಮಟ್ಟದ ಜಾದೂಗಾರರ ಮೇಳ

Date:

ರಾಜ್ಯದ ಬೇರೆ ಭಾಗಗಳಲ್ಲಿ ಸಮ್ಮೇಳನ ಮಾಡುವ ಒತ್ತಡ ಇದ್ದರೂ ಜನರ ಸಹಕಾರದಿಂದ ತೀರ್ಥಹಳ್ಳಿಯಲ್ಲಿ ಅಖಿಲ ದಕ್ಷಿಣ ಭಾರತ ಜಾದೂಗಾರರ ಮಹಾ ಸಮ್ಮೇಳನ ಫೆ. 12. 13ರಂದು ಹಮ್ಮಿಕೊಳ್ಳಲಾಗಿದೆ ಎಂದು ಮಲೆನಾಡು ಮ್ಯಾಜಿಕ್ ಸರ್ಕಲ್ ಸಂಚಾಲಕ ಸರ್ಕಲ್ ಸಂಚಾಲಕರಾದ ನಿಶ್ಚಿಲ್ ಜಾದೂಗಾರ್ ಅವರು ತಿಳಿಸಿದ್ದಾರೆ.

ಈ ಕುರಿತು ತೀರ್ಥಹಳ್ಳಿಯ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ರಾಜ್ಯದಲ್ಲಿ ಜಾದುಗಾರ್ ಮೌಢ್ಯ ನಿಷೇಧ ಕಾಯ್ದೆ ಜಾರಿಗೊಳಿಸಿದ್ದು ಹಲವು ಅನಿಷ್ಟ ಪದ್ದತಿಗಳನ್ನು ತೆಗೆದು ಹಾಕಲಾಗಿದೆ. ಅಂತಹ ಪಟ್ಟಿಯಲ್ಲಿ ಜಾದೂ ಕಲಾವಿದರೂ ಸೇರಿಕೊಂಡಿದ್ದರು. ಅತಿಮಾನುಷ ಶಕ್ತಿ ಪವಾಡ ಮುಂತಾದ ಢೋಂಗಿ, ಸುಳ್ಳುಗಳನ್ನು ಸಾರ್ವಜನಿಕರಿಗೆ ತಿಳಿಸುವ ಜಾದೂಗಾರರು ಅಗತ್ಯವಾಗಿ ಬೇಕಾಗಿದ್ದಾರೆ ಎಂದು ಮ್ಯಾಜಿಕ್ ಸರ್ಕಲ್ ಉಪಾಧ್ಯಕ್ಷ ನೆಂಪೆ ದೇವರಾಜ್ ಹೇಳಿದರು.

ಮೂರು ವರ್ಷಗಳ ಹಿಂದೆ ತೀರ್ಥಹಳ್ಳಿ ಪಟ್ಟಣದಲ್ಲಿ ರಾಜ್ಯಮಟ್ಟದ ಜಾದುಗಾರರ ಸಮ್ಮೇಳನ ಯಶಸ್ವಿಯಾಗಿ ನಡೆದಿದೆ. ಈ ವರ್ಷ ವಿಶೇಷವಾಗಿ ಜಾದೂ ಸ್ಪರ್ಧೆ, ಜಾದೂ ಜಾತ್ರೆ, ಉಪನ್ಯಾಸ, ಕಲಾವಿದರಿಗೆ ಸಹಾಯ, ತರಬೇತಿ, ಕಾರ್ಯಗಾರಗಳನ್ನು ಏರ್ಪಡಿಸಲಾಗಿದೆ. ದಕ್ಷಿಣ ಭಾರತದ ಪ್ರಖ್ಯಾತ ಜಾದು ಕಲಾವಿದರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷ ದೇವರಾಜ್ ಮಲ್ಯ, ಉಪಾಧ್ಯಕ್ಷ ಪ್ರಶಾಂತ್ ಹೆಗಡೆ, ಕಾರ್ಯದರ್ಶಿ ಶಿವಾಜಿ ಜಾದುಗಾರ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...