Wednesday, October 2, 2024
Wednesday, October 2, 2024

ಬಳ್ಳಾರಿ ತುಂಬಾ ರಂಗು ರಂಗಿನ ರಂಗೋಲಿ ಹಬ್ಬವೋ ಹಬ್ಬ

Date:

ಬಳ್ಳಾರಿ: ಚೊಚ್ಚಲ ಬಾರಿಗೆ ನಡೆಸಲಾಗುತ್ತಿರುವ ಬಳ್ಳಾರಿ ಉತ್ಸವಕ್ಕೆ ಕ್ಷಣಗಣನೆ ಬಾಕಿಯಿದ್ದು, ಜನರಲ್ಲಿ ದಿನದಿಂದ ದಿನಕ್ಕೆ ಉತ್ಸುಕತೆ ಹೆಚ್ಚಾಗುತ್ತಿದೆ.

ಹೀಗೆ ಕಂಡುಬಂದಿದ್ದು, ನಗರದ ಮುಖ್ಯ ರಸ್ತೆಗಳಲ್ಲಿ ಹಾಗೂ ಮುಖ್ಯ ವೃತ್ತಗಳಲ್ಲಿ ಹಾಕಲಾಗಿದ್ದ ರಂಗೋಲಿ ಚಿತ್ತಾರಗಳು. ಹೌದು ಬೆಳಗಿನ ಜಾವದಿಂದಲೇ ಯುವತಿಯರು ಮತ್ತು ಹೆಂಗಳೆಯರು ಕೈಯಲ್ಲಿ ರಂಗೋಲಿ ಹಿಡಿದು ಮುಖ್ಯ ವೃತ್ತಗಳಲ್ಲಿ ಹಾಗೂ ನಗರದ ಮುಖ್ಯ ರಸ್ತೆಗಳಲ್ಲಿ ರಂಗೋಲಿ ಬಿಟ್ಟಿದ್ದು, ವಿಶೇಷವಾಗಿತ್ತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ವತಿಯಿಂದ ಬಳ್ಳಾರಿ ಉತ್ಸವದ ಅಂಗವಾಗಿ ಜನವರಿ 20 ರಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಏರ್ಪಡಿಸಲಾಗಿದ್ದ ಮೊದಲ ಸುತ್ತಿನ ರಂಗೋಲಿ ಸ್ಪರ್ಧೆಗೆ ಮಹಾನಗರ ಪಾಲಿಕೆಯ ಮಹಾಪೌರರಾದ ಎಂ.ರಾಜೇಶ್ವರಿ ಅವರು ರಂಗೋಲಿ ಹಾಕುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲೆ ವಿಭಜನೆಯಾದ ನಂತರ ಮೊದಲ ಬಾರಿಗೆ ನಡೆಸಲಾಗುತ್ತಿರುವ ಬಳ್ಳಾರಿ ಉತ್ಸವದ ಬಗ್ಗೆ ಎಲ್ಲರಲ್ಲೂ ಉತ್ಸಾಹ ಹೆಚ್ಚಾಗಿದೆ. ಅದರಲ್ಲೂ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿರುವ ರಂಗೋಲಿ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧೆಡೆಯ ಮತ್ತು ನಗರವಾಸಿಗಳು ಹಾಗೂ ಶಾಲಾ, ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಮಹಿಳೆಯರಲ್ಲಿ ಇನ್ನಷ್ಟು ಆಸಕ್ತಿಯನ್ನು ಹೆಚ್ಚಿಸಿದೆ ಎಂದು ಹೇಳಿ ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಮಹಿಳೆಯರಿಗೆ ಮತ್ತು ಯುವತಿಯರಿಗೆ ಶುಭ ಹಾರೈಸಿದರು.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಕೀನಾ ಅವರು ಮಾತನಾಡಿ, ಬಳ್ಳಾರಿ ಉತ್ಸವದ ಅಂಗವಾಗಿ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಎರಡು ಸುತ್ತಿನ ಸ್ಪರ್ಧೆ ಇದಾಗಿದೆ.

ಸಾಂಪ್ರದಾಯಿಕ (ಚುಕ್ಕಿ) ಮತ್ತು ಕಲಾಕೃತಿ ಆಧಾರದ ಮೇಲೆ ಎರಡನೇಯ ಸುತ್ತಿಗೆ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.

ಮೊದಲ ಸುತ್ತಿನಲ್ಲಿ ಒಟ್ಟು 160 ಮಹಿಳೆಯರು ಹಾಗೂ ಯುವತಿಯರು ಭಾಗವಹಿಸಿದ್ದಾರೆ. 50ರಿಂದ 60 ಜನರ ಸುಂದರವಾಗಿ ಮೂಡಿಬಂದ ರಂಗೋಲಿಯನ್ನು ನಾಳೆ ದುರ್ಗಮ್ಮ ದೇವಸ್ಥಾನದ ಆವರಣದಲ್ಲಿ ನಡೆಯಲಿರುವ ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.

ಅಂತಿಮ ಸುತ್ತಿನಲ್ಲಿ ವಿಜೇತರಾದವರಿಗೆ ಮೊದಲ ಬಹುಮಾನ ಪಡೆದವರಿಗೆ ರೂ.3000, ಎರಡನೇ ಬಹುಮಾನ ರೂ.2000 ಹಾಗೂ ತೃತೀಯ ಬಹುಮಾನವಾಗಿ ರೂ.1000 ಗಳನ್ನು ನಗದು ಬಹುಮಾನದ ಜೊತೆಗೆ 4 ಸಮಾಧನಕರ ಬಹುಮಾನದ ಜೊತೆಗೆ ಭಾಗವಹಿಸಿದ ಎಲ್ಲರಿಗೂ ಪ್ರಶಸ್ತಿ ಪತ್ರವನ್ನು ನೀಡಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಸಿಡಿಪಿಓ ಉಷಾ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ಮಲ್ಲಿಕಾರ್ಜುನ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ರಾಮಣ್ಣ, ಮೌನೇಶ್, ಡಬ್ಲ್ಯೂಸಿಡಿ ನಾಗವೇಣಿ, ವಾರ್ಡನ್ ಉಷಾ, ಅಂಬಿಕಾ ಸೇರಿದಂತೆ ಇತರರು ಇದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...