ಶಿವಮೊಗ್ಗ: ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಹಾಗೂ ಪ್ರಾಣಿ ತಳಿ ಅನುವಂಶೀಯತೆ ಹಾಗೂ ತಳಿ ಶಾಸ್ತ ವಿಭಾಗ, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಗ್ರಾಮೀಣ ಪ್ರದೇಶದ ರೈತರು ಅಥವಾ ರೈತ ಮಹಿಳೆಯರು ಅಥವಾ ನಿರುದ್ಯೋಗ ಯುವಕ ಯುವತಿಯರಿಗೆ ಜ.23 ರಂದು ಶಿವಮೊಗ್ಗದ ವಿನೋಬನಗರದಲ್ಲಿರುವ ಪಶುವೈದ್ಯಕೀಯ ಮಹಾವಿದ್ಯಾಲಯದ ಪ್ರಾಣಿ ಅನುವಂಶೀಯತೆ ಹಾಗೂ ತಳಿಶಾಸ್ತ್ರ ವಿಭಾಗದಲ್ಲಿ ಮೇವು ಬೆಳೆಗಳ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ತರಬೇತಿಯಲ್ಲಿ ಹಸಿರು ಮೇವಿನ ಬೆಳೆಗಳ ಬೇಸಾಯ ಕ್ರಮಗಳು, ಮೇವು ಬೆಳೆಗಳ ತಾಕುಗಳಿಗೆ ಭೇಟಿ, ಮೇವು ಬೀಜಗಳ ಸಂಸ್ಕರಣೆ ಹಾಗೂ ಮೇವಿನ ತಳಿಗಳ ಪಸರಣೆ-ಪ್ರಾಯೋಗಿಕ ತರಬೇತಿ, ಹುಲ್ಲುಗಾವಲು ನಿರ್ವಹಣೆಯ ಅಗತ್ಯತೆಯ ಕುರಿತಾದ ವಿವಿಧ ವಿಷಯಗಳನ್ನು ತಿಳಿಸಲಾಗುವುದು.
ಆಸಕ್ತರು ತಮ್ಮ ಹೆಸರನ್ನು ಡಾ. ಆರ್. ಜಯಶ್ರೀ, ಸಹ ಪ್ರಾಧ್ಯಾಪಕರು ಹಾಗೂ ರಾ.ಕೃ.ವಿಕಾಸ ಯೋಜನಾ ಸಂಯೋಜಕರು, ಪ್ರಾಣಿ ಅನುವಂಶೀಯತೆ ಹಾಗೂ ತಳಿಶಾಸ್ತ್ರ ವಿಭಾಗ, ಪಶುವೈದ್ಯಕೀಯ ಮಹಾವಿದ್ಯಾಲಯ, ವಿನೋಬನಗರ, ಶಿವಮೊಗ್ಗ, ಮೊ.ಸಂ.: 9916918909/8310384135 ಗಳಿಗೆ ಎಸ್.ಎಂ.ಎಸ್./ವಾಟ್ಸಾಪ್ ಅಥವಾ ನೇರ ಸಂಪರ್ಕಿಸಿ ನೋಂದಾಯಿಸಿಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿಲಾಗಿದೆ.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.