Wednesday, October 2, 2024
Wednesday, October 2, 2024

ನೃತ್ಯ ಸಂಗೀತ ಕ್ಷೇತ್ರದಲ್ಲಿ ಪರಿಣಿತಿ ಸಂಸ್ಥೆಯ ಸೇವೆ ಶ್ಲಾಘನೀಯ-ವೇಣುಗೋಪಾಲ್

Date:

ಪ್ರತಿಭಾವಂತರಿಗೆ ರಾಷ್ಟ್ರೀಯ ಮಟ್ಟದ ವೇದಿಕೆಗಳಲ್ಲಿ ಅವಕಾಶ ಕಲ್ಪಿಸುವ ಜತೆಯಲ್ಲಿ ಯುವ ಕಲಾವಿದರಿಗೆ ಪರಿಣಿತಿ ಕಲಾಕೇಂದ್ರ ನಿರಂತರ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದು ಭಾರತೀಯ ವಿದ್ಯಾಭವನ ಜಂಟಿ ನಿರ್ದೇಶಕ ವೇಣುಗೋಪಾಲ್‌ ಹೇಳಿದರು.

ಪರಿಣಿತಿ ಕಲಾಕೇಂದ್ರದ 8ನೇ ವರ್ಷದ ಸಂಭ್ರಮದ ಪ್ರಯುಕ್ತ ನಗರದ ಗಾಂಧಿ ಮೈದಾನದಲ್ಲಿ ಪರಿಣಿತಿ ಕಲಾಕೇಂದ್ರದ ವತಿಯಿಂದ ಆಯೋಜಿಸಿದ್ದ “8ನೇ ವರ್ಷದ ಪರಿಣಿತಿ ರಾಷ್ಟ್ರೀಯ ನೃತ್ಯ ಸಂಗೀತೋತ್ಸವ 2023” ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದರು.

ನೃತ್ಯ, ಸಂಗೀತ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಪರಿಣಿತಿ ಕಲಾಕೇಂದ್ರ ಉತ್ತಮ ಸೇವೆ ಸಲ್ಲಿಸುತ್ತಿದೆ. ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಕಲಾವಿದರನ್ನು ಸಾಗರಕ್ಕೆ ಕರೆಯಿಸುವ ಮುಖಾಂತರ ವೈವಿಧ್ಯ ನೃತ್ಯ ಪ್ರಕಾರಗಳ ಬಗ್ಗೆ ಸಾಗರದ ಸ್ಥಳೀಯ ಪ್ರತಿಭೆಗಳಿಗೆ ಪರಿಚಯಿಸುವ ಕೆಲಸ ಇಂತಹ ಕಾರ್ಯಕ್ರಮಗಳಿಂದ ಆಗುತ್ತಿದೆ ಎಂದು ತಿಳಿಸಿದರು.

ಉದ್ಯಮಿ ಟಿ.ವಿ.ಪಾಂಡುರಂಗ ಮಾತನಾಡಿ, ಸಂಸ್ಕೃತಿ ಪರಂಪರೆ ಬಿಂಬಿಸುವ ಕಾರ್ಯ ಅಭಿನಂದನೀಯ. ರಾಮಾಯಣ, ಮಹಾಭಾರತದ ಕಥನಗಳನ್ನು ನೃತ್ಯದ ಮೂಲಕ ಸುಲಭವಾಗಿ ಅರ್ಥಮಾಡಿಸಲು ಸಾಧ್ಯವಿದೆ. ಎಲ್ಲ ನೃತ್ಯಗಳ ಮೂಲಕ ಒಂದೊಂದು ಕಥನವನ್ನು ಪ್ರೇಕ್ಷಕರಿಗೆ ಪರಿಚಯಿಸಲಾಗುತ್ತಿದೆ ಎಂದರು.

ಮಲೇಷಿಯಾ ನೃತ್ಯ ಗುರು ಡಾ. ಗಣೇಶನ್‌ ಮಾತನಾಡಿ, ರಾಷ್ಟ್ರೀಯ ನೃತ್ಯ ಮಹೋತ್ಸವ ವೇದಿಕೆಯು ಯುವ ಪ್ರತಿಭಾವಂತ ಕಲಾವಿದರಿಗೆ ಅತ್ತ್ಯುತ್ತಮ ವೇದಿಕೆ ಹಾಗೂ ಅವಕಾಶ ಸೃಷ್ಠಿಸುತ್ತದೆ. ಇಂತಹ ಉತ್ಸವ ನಿರಂತರವಾಗಿ ನಡೆಯಬೇಕು ಎಂದು ತಿಳಿಸಿದರು.

ಪರಿಣಿತಿ ಕಲಾಕೇಂದ್ರದ ವಿದ್ವಾನ್‌ ಎಂ.ಗೋಪಾಲ್‌ ಮಾತನಾಡಿ, ನಮ್ಮ ಕಲಾಕೇಂದ್ರದ ವತಿಯಿಂದ ನೃತ್ಯ ತರಬೇತಿ ಜತೆಯಲ್ಲಿ ಯುವ ಉತ್ಸವ ರಾಷ್ಟ್ರೀಯ ನೃತ್ಯ ಸಂಗೀತೋತ್ಸವ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌ ನೀಡಲಾಗುತ್ತಿದೆ ಎಂದು ತಿಳಿಸಿದರು.

ಬೆಂಗಳೂರು, ಕೇರಳ, ಪಶ್ಚಿಮ ಬಂಗಾಳ, ಮಲೇಷಿಯಾ ಸೇರಿ ವಿವಿಧೆಡೆಯಿಂದ ಕಲಾವಿದರು ನೃತ್ಯ ಸಂಗೀತೋತ್ಸವದಲ್ಲಿ ಪಾಲ್ಗೊಂಡಿದ್ದರು.

ಉದ್ಯಮಿ ಟಿ.ವಿ.ಪಾಂಡುರಂಗ ಅವರಿಗೆ ಎಸ್‌.ಎಸ್‌.ರಮೇಶ್‌ ಸ್ಮಾರಕ ಪುರಸ್ಕಾರ, ಡಾ. ಗಣೇಶನ್‌ ಮತ್ತು ಬಿ.ವಿ.ದತ್ತಾತ್ರೇಯ ಅವರಿಗೆ ಜೀವಮಾನ ಸಾಧನೆ ಪುರಸ್ಕಾರ ನೀಡಿ ಗೌರವಿಸಲಾಯಿತು. ಡಾ. ಮಾಯಾ ರಾಜೇಶ್‌ ಅವರಿಗೆ ಪರಿಣಿತಿ ಎಕ್ಸಲೆನ್ಸ್‌, ಅಂಗ್ಸುಮಾನ್‌ ಗುಪ್ತಾ, ಅರ್ಚನಾ ಪುಣ್ಯೇಶ್‌ ಹಾಗೂ ನಿಖಿತಾ ಮಂಜುನಾಥ್‌ ಅವರಿಗೆ ಯಂಗ್‌ ಅಚೀವರ್‌ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

ಪರಿಣಿತಿ ರಾಷ್ಟ್ರೀಯ ನೃತ್ಯ ಸಂಗೀತೋತ್ಸವ ಸಮಿತಿ ಅಧ್ಯಕ್ಷ ಅರುಣ್‌ ಕುಮಾರ್‌ ಅಧ್ಯಕ್ಷತೆ ವಹಿಸಿದ್ದರು. ಪರಿಣಿತಿ ಕಲಾಕೇಂದ್ರದ ಗೌರವಾಧ್ಯಕ್ಷೆ ವೀಣಾ ಬೆಳೆಯೂರು, ವಿಠ್ಠಲ್‌ ಪೈ ಹೆಗ್ಗೋಡು, ಉದ್ಯಮಿ ಎಸ್‌.ಡಿ.ವೀರಪ್ಪ ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...