ಶಿವಮೊಗ್ಗ: ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್, ಶಿವಮೊಗ್ಗ ಶಾಖೆಯ ಅಡಿಯಲ್ಲಿ ಬರುವ ಶ್ರೀ ಆದಿಚುಂಚನಗಿರಿ ಸಂಯುಕ್ತ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿಯಾದ ಸೌಭಿಯಾ ತೆಹರಿಮ್ ಅವರು ಕಲಬುರಗಿಯ ಶ್ರೀ ಗುರು ವಿದ್ಯಾಪೀಠದಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ ವಿಜ್ಞಾನ ಸಮಾವೇಶ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.
ಜನವವರಿ,16, 17 ಮತ್ತು 18 ರಂದು 3ದಿನ ನಡೆದ 30 ನೇ ರಾಜ್ಯಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಿ, “ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಜೀವ ಪರಿಸರ ವ್ಯವಸ್ಥೆಯನ್ನು ಅರ್ಥಮಾಡಿಕೊಳ್ಳೋಣ” ಎಂಬ ವಿಷಯವನ್ನು ಕುರಿತು, ಉತ್ತಮವಾಗಿ ವಿಷಯ ಮಂಡಿಸಿದ್ದಾರೆ.
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಅವರಿಗೆ ಬಂಗಾರದ ಪದಕ,ಪ್ರಶಸ್ತಿ ಪತ್ರ ಸಿಕ್ಕಿದೆ.
ಸೌಭಿಯಾ ಅವರು 9ನೇ ತರಗತಿಯಲ್ಲಿ ಓದುತ್ತಿದ್ದಾರೆ. ಶಿವಮೊಗ್ಗದ ಮಹಮ್ಮದ್ ಆದಿಲ್ ಷಾ ಮತ್ತು ಉಮ್ಮೆಸಲ್ಮಾ ದಂಪತಿಗಳ ಪುತ್ರಿ.
ವಿದ್ಯಾರ್ಥಿನಿ ಸೌಭಿಯಾ ಜನವರಿ ತಿಂಗಳ ಅಂತ್ಯದಲ್ಲಿ ನಡೆಯಲಿರುವ
ಗುಜರಾತಿನ ಅಮದಾಬಾದಿನ ರಾಷ್ಟ್ರೀಯ ವಿಜ್ಞಾನ ಮಕ್ಕಳ ಸಮಾವೇಶದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.
ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥಸ್ವಾಮೀಜಿ ಯವರು, ಆಡಳಿತ ಮಂಡಳಿಯ ಸದಸ್ಯರು,ಪ್ರಾಂಶುಪಾಲರು ಮತ್ತು ಶಿಕ್ಷಕ ವೃಂದದವರು ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.