Sunday, December 7, 2025
Sunday, December 7, 2025

ಭತ್ತ, ಮೆಕ್ಕೆಜೋಳ ರಾಗಿಗೆ ಬೆಂಬಲ ಬೆಲೆ ಹೆಚ್ಚಿಸಿ

Date:

ರಾಜ್ಯ ಸರ್ಕಾರ ಬತ್ತ ಮತ್ತು ಮೆಕ್ಕೆಜೋಳಕ್ಕೆ ವೈಜ್ಞಾನಿಕ ಬೆಲೆ ನಿಗದಿ ಪಡಿಸಿ ಖರೀದಿಗಾಗಿ ಎಲ್ಲೆಡೆ ಖರೀದಿ ಕೇಂದ್ರ ತರೆಯಬೇಕೆಂದು ರಾಜ್ಯ ರೈತಸಂಘ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.
ದುಬಾರಿ ಕೂಲಿ, ರಸಗೊಬ್ಬರ, ಕೀಟನಾಶಕಗಳ, ಬೆಲೆ ಎರಡುಪಟ್ಟು ಹೆಚ್ಚಾಗಿದೆ. ರೈತರ ಜೀವನ ವೆಚ್ಚವೂ ಜಾಸ್ತಿಯಾಗಿದೆ. ಆದರೆ ರೈತರು ಬೆಳೆದ ಬೆಳೆಗಳಿಗೆ ಮಾತ್ರ ಬೆಲೆ ಕಡಿಮೆಯಾಗುತ್ತಿದೆ. ರೈತರು ಬೆಳೆಗಳನ್ನು ಅರ್ಧ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಆ ಕಾರಣದಿಂದ ಅವರು ಬ್ಯಾಂಕ್ ಗಳ ಸಾಲವನ್ನು ತೀರಿಸಲು ಆಗುತ್ತಿಲ್ಲ. ಸಾಲದ ಹೊರೆ ಜಾಸ್ತಿಯಾಗಿ ಜೀವನ ನಿರ್ವಹಣೆಯ ದುರಸ್ತವಾಗಿದೆ ಎಂದು ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪನವರು ಹೇಳಿದ್ದಾರೆ.
ಜಿಲ್ಲೆಯಲ್ಲಿ 78,000 ಹೆಕ್ಟೇರ್ ನಲ್ಲಿ ಭತ್ತ, 53,000 ಹೆಕ್ಟೇರ್ ನಲ್ಲಿ ಮೆಕ್ಕೆಜೋಳ ಹಾಗೂ ರಾಜ್ಯದಲ್ಲಿ 10.22 ಲಕ್ಷ ಹೆಕ್ಟೇರ್ ನಲ್ಲಿ ಭತ್ತ ,14.16 ಲಕ್ಷ ಹೆಕ್ಟೇರ್ ನಲ್ಲಿ ಮೆಕ್ಕೆಜೋಳ ಮತ್ತು 6.90 ನಲ್ಲಿ ರಾಗಿ ಬೆಳೆದಿದ್ದಾರೆ.
ಈ ವರ್ಷ ಉತ್ತಮ ಫಸಲು ಬಂದರೂ ಕುಯ್ಲು ಹಂತದಲ್ಲಿ ಬಂದ ಮಳೆಯಿಂದಾಗಿ ಕೈಗೆ ಸಿಕ್ಕಿದ್ದು, ಬಾಯಿಗೆ ಬರದಂತಾಗಿದೆ.
ಆದ್ದರಿಂದ ಮೆಕ್ಕೆಜೋಳ ಮತ್ತು ಭತ್ತದ ಧಾರಣೆ ಕುಸಿತ ವಾಗಿರುವುದರಿಂದ ರಾಜ್ಯ ಸರ್ಕಾರ ಮಧ್ಯ ಪ್ರವೇಶ ಮಾಡಿ ಎರಡೂ ಬೆಳೆಗಳಿಗೆ ರೂ.3 ಸಾವಿರ ಮತ್ತು ರಾಗಿಗೆ 4 ಸಾವಿರ ರೂ. ಬೆಂಬಲ ಬೆಲೆ ಘೋಷಿಸಿ ಖರೀದಿ ಮಾಡಬೇಕೆಂದು ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...