Saturday, August 29, 2026
Saturday, August 29, 2026

ವಿದ್ಯಾರ್ಥಿಗಳು ಶಿಕ್ಷಣ ಪೂರೈಸಿದ ನಂತರ ವೃತ್ತಿಪರತೆಯಲ್ಲಿ ಸಾಮಾನ್ಯ ಜ್ಞಾನ ‌ಮತ್ತು ಭಾಷಾಪ್ರಭುತ್ವ ಇರಬೇಕು- ಡಾ.ಫ್ರಾನ್ಸಿಸ್ ಡಿಸೋಜಾ

Date:

ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವಿದ್ಯಾಭ್ಯಾಸದೊಂದಿಗೆ ವ್ಯಕ್ತಿತ್ವ ವಿಕಸನದ, ಸಾಮಾಜಿಕ ಜ್ಞಾನದ ಬಗ್ಗೆಯೂ ತಿಳಿಸುವುದು ಶಿಕ್ಷಕರ ಕರ್ತವ್ಯ. ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಮುಗಿಸಿ ವೃತ್ತಿ ಜೀವನಕ್ಕೆ ಕಾಲಿಟ್ಟಾಗ ಮೊದಲಿಗೆ ಅವರ ಸಾಮಾನ್ಯ ಜ್ಞಾನ, ಭಾಷೆಯ ಮೇಲಿನ ಹಿಡಿತ ಇವೆಲ್ಲವೂ ಮುಖ್ಯವಾಗಿ ಬೇಕಾಗುತ್ತದೆ ಎಂದು ಸಂಪನ್ಮೂಲ ವ್ಯಕ್ತಿಗಳಾದ ಡಾ. ಫ್ರಾನ್ಸಿಸ್ ಡಿಸೋಜ ಅವರು ತಿಳಿಸಿದರು.

ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಇಂಗ್ಲೀಷ್ ವಿಭಾಗ ಮತ್ತು ದಿಶಾ ಸಂಸ್ಥೆಯ ಸಹಯೋಗದಲ್ಲಿ ಎರಡು ದಿನಗಳ ಕಮ್ಯೂನಿಕೇಟಿವ್ ಇಂಗ್ಲಿಷ್ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಈಗಿನ ಆಧುನಿಕ ಸಂದರ್ಭದಲ್ಲಿ ಇಂಗ್ಲಿಷ್ ಭಾಷೆ ಅತ್ಯಗತ್ಯ. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಕಾಲೇಜಿನ ಆಡಳಿತ ಮಂಡಳಿ ಶ್ರಮಿಸುತ್ತಿದೆ. ಅದರ ಭಾಗವಾಗಿ ಕಮ್ಯುನಿಕೇಟಿವ್ ಇಂಗ್ಲಿಷ್ ಕಾರ್ಯಗಾರ ಏರ್ಪಡಿಸಿರುವುದು ನಿಜಕ್ಕೂ ಶ್ಲಾಘನೀಯ. ವಿದ್ಯಾರ್ಥಿಗಳು ಮಾತೃಭಾಷೆಯೊಂದಿಗೆ ಇಂಗ್ಲೀಷ್ ಭಾಷೆಗೂ ಒತ್ತು ನೀಡಿ ಈಗಿನಿಂದಲೇ ತಯಾರಿ ನಡೆಸಿದರೆ , ಭಾಷೆಯ ಮೇಲೆ ಹಿಡಿತ ಸಾಧಿಸಲು ಸಾಧ್ಯವಾಗುತ್ತದೆ ಎಂದರು.

ಯಾವುದೇ ಭಾಷೆಯನ್ನು ಕಲಿಯಬೇಕಾದಲ್ಲಿ ಕೇವಲ ಅದನ್ನ ಬರೆದು ಓದಿ ಕಲಿಯುವುದರೊಂದಿಗೆ, ಒಳ್ಳೆಯ ಕೇಳುಗರಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾಲೇಜಿನ ಪ್ರಾಚಾರ್ಯರಾದ ಡಾ. ಸಂಧ್ಯಾ ಕಾವೇರಿ ಅವರು ಮಾತನಾಡಿ, ವಿದ್ಯಾರ್ಥಿಗಳ ಅಭಿವೃದ್ಧಿಗೆ ಕಾಲೇಜಿನಲ್ಲಿ ಹಲವಾರು ಕಾರ್ಯಗಾರಗಳನ್ನ ಏರ್ಪಡಿಸಲಾಗುತ್ತದೆ. ಶೈಕ್ಷಣಿಕ ಕಲಿಕೆಯೊಂದಿಗೆ ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಸನಕ್ಕೂ ಹೆಚ್ಚು ಆದ್ಯತೆ ನೀಡಬೇಕು. ಸಂಪನ್ಮೂಲ ವ್ಯಕ್ತಿಗಳಿಂದ ದೊರೆಯುವ ಪ್ರತಿಯೊಂದು ವಿಷಯವನ್ನು ಗಮನವಿಟ್ಟು ಆಲಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಶೈಕ್ಷಣಿಕ ಮುಖ್ಯಸ್ಥರಾದ ಡಾ. ರಾಜೇಂದ್ರ ಚೆನ್ನಿ, ಇಂಡಿಯನ್ ಎಕ್ಸ್‌ಪ್ರೆಸ್‌ನ ವಿಶೇಷ ವರದಿಗಾರ ರಾಮ್ ಚಂದ್ರ ಗುನಾರಿ, ಮನಶಾಸ್ತ್ರ ವಿಭಾಗದ ವಿಭಾಗದ ಮುಖ್ಯಸ್ಥರಾದ ಡಾ. ಅರ್ಚನಾ ಕೆ ಭಟ್, ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ರೇಷ್ಮಾ ಫ್ರಾಂಸಿಸ್, ಗ್ರಂಥಪಾಲಕರು, ದಿಶಾ ಸಂಸ್ಥೆಯ ಸಂಯೋಜಕರಾದ ಗಣೇಶ್, ಹಾಗೂ ಉಪನ್ಯಾಸಕರು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಕಾಲೇಜಿನ ಶೈಕ್ಷಣಿಕ ಮುಖ್ಯಸ್ಥರಾದ ಡಾ. ರಾಜೇಂದ್ರ ಚೆನ್ನಿ ಅವರನ್ನು ಅಭಿನಂದಿಸಲಾಯಿತು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಬಿಜೆಪಿ ಹೋರಾಟ ಮುಂದುವರಿಕೆ : ಬಿ.ವೈ.ವಿಜಯೇಂದ್ರ

B.Y. Vijayendra ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಚಾರವನ್ನು ನಾನು...

B.Y. Raghavendra ಶಿವಮೊಗ್ಗದಿಂದ ಆಂಧ್ರದ ಮಚಿಲಿಪಟ್ಣಂ ಗೆ ವಿಶೇಷ ರೈಲು – ಸಂಸದ ಬಿ.ವೈ‌ರಾಘವೇಂದ್ರ

B.Y. Raghavendra ಶಿವಮೊಗ್ಗ ಜನತೆಗೆ ಮತ್ತೊಂದು ವಿಶೇಷ ಸಿಹಿಸುದ್ದಿ ದೊರೆತಿದ್ದು, ಆಂಧ್ರ...

B.Y. Raghavendra ಕಸ್ತೂರಿ ರಂಗನ್ ವರದಿ ಕರಡು ಜಾರಿ ಬಗ್ಗೆ ಪಕ್ಷದ ಸಭೆಯಲ್ಲಿ ಸುದೀರ್ಘ ಚರ್ಚೆ- ಬಿ.ವೈ.ರಾಘವೇಂದ್ರ

B.Y. Raghavendra ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ...

Klive Special Article ಕರೆದರೆ ಬರಬಾರದೆ?ಶ್ರೀರಾಯರ ಆರಾಧನಾ ವಿಶೇಷ ಲೇಖನ.ಕರ್ತೃ: ಎನ್.ಜಯಭೀಮ ಜೊಯ್ಸ್, ಶಿವಮೊಗ್ಗ.

Klive Special Article “ಕರೆದರೆ ಬರಬಾರದೇ ಗುರು ರಾಘವೇಂದ್ರ/ವರ ಮಂತ್ರಾಲಯ ಪುರ...