Tuesday, October 1, 2024
Tuesday, October 1, 2024

ಫೆಬ್ರವರಿ 4 ರಂದು ಜಿಲ್ಲಾ ಸರ್ಕಾರಿ ನೌಕರರ ಸಮ್ಮೇಳನ-ಷಡಕ್ಷರಿ

Date:

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ, ಶಿವಮೊಗ್ಗ ಇವರ ವತಿಯಿಂದ ಸರ್ಕಾರಿ ನೌಕರರ ಸಮ್ಮೇಳನ, ನೌಕರರಿಗೆ ಪ್ರಜಾ ಸ್ನೇಹಿ ಆಡಳಿತ ಕಾರ್ಯಗಾರ, ನೌಕರರ ಫ್ಯಾಮಿಲಿ ಮಾರ್ಟ್ ಉದ್ಘಾಟನೆ ದಿನಾಂಕ 4/2/2023ರಂದು ಎನ್ ಇ ಎಸ್ ಕಾಲೇಜು ಆವರಣ, ಕುವೆಂಪು ರಂಗ ಮಂದಿರದ ಹಿಂಭಾಗ ನಡೆಯಲಿದೆ.

ಪತ್ರಿಕಾಗೋಷ್ಠಿ ನಡೆಸಿದ ಶ್ರೀ.ಸಿ.ಎಸ್. ಷಡಾಕ್ಷರಿ ಅವರು ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಒಂದಿಷ್ಟು ನೌಕರರಿಗೆ ಪ್ರಜಾ ಸ್ನೇಹಿ ಆಡಳಿತದ ಬಗ್ಗೆ ಜಾಗೃತಿ ಮೂಡಿಸಬೇಕು ಎಂಬ ಕಾರ್ಯಗಾರವನ್ನು ಇಟ್ಟುಕೊಂಡಿದ್ದೇವೆ. ಡಾ. ಗುರುರಾಜ್ ಕರ್ಜಗಿ ಖ್ಯಾತ ಚಿಂತಕರು ಮತ್ತು ವಾಗ್ಮಿಗಳು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದರು.

ಇತ್ತೀಚಿನ ದಿನಗಳಲ್ಲಿ ನೌಕರರು ಒತ್ತಡದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಒತ್ತಡದಿಂದ ಹೊರಬಂದು ಹೇಗೆ ನಾವು ಎಫೆಕ್ಟಿವ್ ಆಗಿ ಕೆಲಸ ನಿರ್ವಹಿಸಬೇಕು. ಈ ಬರ್ತಡೆ ದಿಂದ ಹೊರಬರಲು ನಮಗೆ ನಗುವೆಂಬುವುದು ಬಹಳ ಮುಖ್ಯ. ಆದ್ದರಿಂದ ನೌಕರರ ಹಿತದೃಷ್ಟಿಯಿಂದ ನಗೆ ಹಬ್ಬ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಖ್ಯಾತ ಹಾಸ್ಯ ಕಲಾವಿದರಾದ ಶ್ರೀ. ಗಂಗಾವತಿ ಪ್ರಾಣೇಶ್ ಅವರು ಕೆಲಸದ ಒತ್ತಡಕ್ಕೆ ನಗೆ ಮದ್ದು ಎಂಬ ವಿಷಯದ ಕುರಿತು ನಗೆ ಮದ್ದನ್ನು ನೀಡಲಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಿವಮೊಗ್ಗ ಶಾಸಕರಾದ ಶ್ರೀ ಕೆಎಸ್ ಈಶ್ವರಪ್ಪ ಅವರು ನೆರವೇರಿಸಲಿದ್ದಾರೆ. ಫ್ಯಾಮಿಲಿ ಮಾರ್ಟ್ ಉದ್ಘಾಟನೆಯನ್ನು ಶಿವಮೊಗ್ಗದ ಸಂಸದರಾದ ಶ್ರೀ ಬಿ .ವೈ .ರಾಘವೇಂದ್ರ ಅವರು ಉದ್ಘಾಟಿಸಲಿದ್ದಾರೆ. ಶಿವಮೊಗ್ಗ ತಾಲೂಕಿನಲ್ಲಿ ಸುಮಾರು ಏಳರಿಂದ ಎಂಟು ಸಾವಿರ ಜನ ಸರ್ಕಾರಿ ನೌಕರರಿದ್ದಾರೆ. ಸಮ್ಮೇಳನದಲ್ಲಿ ಭಾಗಿಯಾಗುವ ನೌಕರರಿಗೆ OOD ಸೌಲಭ್ಯವನ್ನು ನೀಡಲಾಗುತ್ತದೆ. ಈ ಸಮ್ಮೇಳನದಲ್ಲಿ ಭಾಗಿಯಾಗುವವರಿಗೆ ಮಾತ್ರ ನೆನಪಿನ ಕಾಣಿಕೆ ನೀಡಲಾಗುತ್ತದೆ. ಸಮ್ಮೇಳನದಲ್ಲಿ ಭಾಗಿಯಾಗುವವರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಇರುತ್ತದೆ ಎಂದು ಷಡಾಕ್ಷರಿ ಅವರು ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ರೂಪ ರೇಷೆ ಗಳ ಬಗ್ಗೆ ಮಾಹಿತಿ ನೀಡಿದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...