Wednesday, October 2, 2024
Wednesday, October 2, 2024

ಮನಮುದಗೊಳ್ಳಲು ಕ್ರೀಡಾ ಚಟುವಟಿಕೆ ಸಹಕಾರಿ-ಎಂ.ಸಿ.ಸುರೇಶ್

Date:

ಚಿಕ್ಕಮಗಳೂರು: ಮನರಂಜನಾ ಕೂಟದ ಸ್ಪರ್ಧೆಗಳಲ್ಲಿ ಬಿ.ಎಸ್.ಎನ್.ಎಲ್. ನೌಕರರು ಹಾಗೂ ಕುಟುಂಬ ಸದಸ್ಯರು ಅತ್ಯಂತ ಕ್ರಿಯಾಶೀಲರಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ ಎಂದು ಮನರಂಜನಾ ಕೂಟದ ಅಧ್ಯಕ್ಷ ಎಂ.ಸಿ.ಸುರೇಶ್ ಹೇಳಿದರು.

ಚಿಕ್ಕಮಗಳೂರು ನಗರದ ಸಮೀಪದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಬಿ.ಎಸ್.ಎನ್.ಎಲ್. ದೂರವಾಣಿ ಮನರಂಜನಾ ಕೂಟದ ವಾರ್ಷಿಕೋತ್ಸವವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಇಲಾಖೆಯ ನೌಕರರಿಗೆ ಕ್ರಿಕೇಟ್ ಸೇರಿದಂತೆ ವಿವಿಧ ಆಟೋಟ ಕ್ರೀಡೆಗಳನ್ನು ಆಯೋಜಿಸಿ ದೈಹಿಕ ವಾಗಿ ಶಕ್ತಿ ತುಂಬುವ ಕೆಲಸ ಮಾಡಲಾಗಿದ್ದು ಇಲಾಖೆಯ ನೌಕರರು ಕುಟುಂಬ ಸಮೇತರಾಗಿ ಅತ್ಯಂತ ಸಂತೋಷದಿಂದ ಪಾಲ್ಗೊಂಡು ಯುವಕರನ್ನು ಮೀರಿಸುವಂತೆ ಕ್ರೀಡೆಯಲ್ಲಿ ಭಾಗವಹಿಸಿ ಮೆರಗು ತಂದಿದ್ದಾರೆ ಎಂದರು.

ಕೆಲಸದ ಒತ್ತಡದಿಂದ ಬಳಲುವ ವ್ಯಕ್ತಿಗಳಿಗೆ ಕ್ರೀಡೆಯು ಮನಶಾಂತಿ ನೀಡುವ ಸಾಧನವಾಗಿದೆ. ದಿನನಿತ್ಯದ ಕೆಲಸ-ಕಾರ್ಯಗಳ ಜಂಜಾಟಗಳಲ್ಲಿ ನೌಕರರಿಗೆ ಸ್ವಲ್ಪಮಟ್ಟಿನ ಮನಸ್ಸನ್ನು ಮೃದಗೊಳಿಸಲು ಕ್ರೀಡಾ ಚಟುವಟಿಕೆಗಳು ಪೂರಕವಾಗಲಿದೆ ಎಂದರು.

ಕಾರ್ಯದರ್ಶಿ ಪಿ.ಮಂಜುನಾಥ್ ಮಾತನಾಡಿ ಮನರಂಜನಾ ಕೂಟವು ಸ್ಥಾಪನೆಯಾಗಿ ಅನೇಕ ವರ್ಷಗಳು ಕಳೆದಿದೆ. ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಜೊತೆಗೆ ಇಲಾಖೆಯಲ್ಲಿ ನಿವೃತ್ತಗೊಂಡವರಿಗೆ ಗೌರವಿಸುವ ಕಾರ್ಯವು ನಡೆಸಿಕೊಂಡು ಬರಲಾಗುತ್ತಿದೆ ಎಂದರು.

ಇದೇ ವೇಳೆ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅತಿಹೆಚ್ಚು ಅಂಕಗಳಿಸಿದ ನೌಕರರ ಮಕ್ಕಳಿಗೆ ಸನ್ಮಾನಿಸಲಾಯಿತು.

ವಿವಿಧ ಕ್ರೀಡೆಯಲ್ಲಿ ಪಾಲ್ಗೊಂಡು ಪ್ರಥಮ ಸ್ಥಾನ ಗಳಿದವರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬಿ.ಎಸ್.ಎನ್.ಎಲ್ ಜಿಲ್ಲಾ ಅಧಿಕಾರಿ ಕೆ.ಎಲ್.ಶಿವಣ್ಣ, ನೌಕರರಾದ ಪರಮೇಶ್ವರ್, ಕ್ರೀಡಾ ಕಾರ್ಯದರ್ಶಿ ಬಿ.ಟಿ. ಲಕ್ಷ್ಮಣ್ ,ನೌಕರರಾದ ಜೋಸೆಫ್, ಎನ್.ಜಿ.ರಮೇಶ್, ಕೆ.ಪಿ.ಸುಂದ್ರೇಶ್, ಕಿರಣ್ ಸಿಬ್ಬಂದಿ ವರ್ಗ ಹಾಗೂ ಕುಟುಂಬದವರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...