Saturday, May 23, 2026
Saturday, May 23, 2026

ಕೃಷಿ ವಿಚಕ್ಷಣಾದಳ ಸಭೆ: ಸಚಿವರ ಸೂಚನೆ.

Date:

ಕೃಷಿ ವಿಚಕ್ಷಣಾ ದಳದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾನ್ಯ ಕೃಷಿ ಸಚಿವರಾದ ಬಿ.ಸಿ.ಪಾಟೀಲ ಅವರು ಮಾತನಾಡಿ ರಾಜ್ಯದಲ್ಲಿ ರೈತರಿಗೆ ಯಾವುದೇ ರೀತಿಯ ಕಳಪೆಯಾದ ಕೃಷಿ ಪರಿಕರಗಳು, ರಸಗೊಬ್ಬರ, ಕೀಟನಾಶಕಗಳು ಸರಬರಾಜಿಗಾದಂತೆ ಕೃಷಿ ವಿಚಕ್ಷಣಾ ದಳವನ್ನು ಇನ್ನಷ್ಟು ಜಾಗೃತಿಗೊಳಿಸಲು ತಿಳಿಸಿದರು.

ಕಳಪೆ ರಸಗೊಬ್ಬರ, ಕೀಟನಾಶಕಗಳು ತಯಾರಾಗದಂತೆ ಅಕ್ರಮ ದಾಸ್ತಾನು, ಕಾಳಸಂತೆಯಲ್ಲಿ ಮಾರಾಟವಾಗದಂತೆ ತಳಮಟ್ಟದಲ್ಲಿ ಅವುಗಳನ್ನು ಬುಡಸಹಿತ ಕಿತ್ತು ಹಾಕಬೇಕು. ರೈತರಿಗೆ ಅನ್ಯಾಯ ವಾಗುವಂತಹ ಇಂತಹ ಕುಕೃತ್ಯದಲ್ಲಿ ಯಾರೇ ಅಧಿಕಾರಿಗಳಾಗಲಿ, ಇನ್ಯಾರೇ ಆಗಲಿ ಶಾಮಿಲ್ ಆಗದಂತೆ ನೋಡಿಕೊಂಡು ತಪ್ಪಿತಸ್ಥರ ವಿರುದ್ಧ ರ್ನಿದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಸಚಿವರು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.

ಕೃಷಿ ಇಲಾಖೆಯ “ಟೋಲ್ ಫ್ರೀ- ಸಹಾಯವಾಣಿ” ದೂರವಾಣಿ ಸಂಖ್ಯೆಯನ್ನು ಜಾಗೃತಿ ಕೋಶಕ್ಕೂ ವಿಸ್ತರಿಸುವಂತೆ ಈ ಸಭೆಯಲ್ಲಿ ಸಚಿವರು ಸೂಚಿಸಿದರು.

ಈ ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಅವರು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...