ನಾಡಿನ ಖ್ಯಾತ ಪಶುವೈದ್ಯ ವಿಜ್ಞಾನಿ, ಸಾಹಿತಿ, ಚಿಂತಕ, ಬರಹಗಾರರು, ಪಶು ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ: ಎನ್.ಬಿ.ಶ್ರೀಧರ, ಇವರಿಗೆ ಕರ್ನಾಟಕ
ಪಶುವೈದ್ಯಕೀಯ ಸಂಘ ಇವರು ಜೀವಮಾನದಲ್ಲಿ ಪಶುವೈದ್ಯಕೀಯ ರಂಗಕ್ಕೆ ಮಾಡಿದ ಗಣನೀಯ
ಸಾಧನೆಗಾಗಿ “ ಡಾ: ಆರ್ ಡಿ ನಂಜಯ್ಯ ಸ್ಮಾರಕ ಜೀವಮಾನದ ಶ್ರೇಷ್ಟ ಪಶುವೈದ್ಯ ಪ್ರಶಸ್ತಿ” ನೀಡಿ,
ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ತಾಂತ್ರಿಕ ಸಮ್ಮೇಳನದಲ್ಲಿ
ಸನ್ಮಾನಿಸಲಾಗಿದೆ.
ಇವರು ಪಶುವೈದ್ಯಕೀಯ ರಂಗದಲ್ಲಿ ಜಾನುವಾರುಗಳಲ್ಲಿ ಬರುವ ಅನೇಕ ರೀತಿಯ
ಸಸ್ಯಜನ್ಯ ನಿಗೂಢ ಕಾಯಿಲೆಗಳ ಬಗ್ಗೆ ಸಂಶೋಧನೆ ನಡೆಸಿ ಅವುಗಳಿಗೆ ಕಾರಣ ಮತ್ತು ಚಿಕಿತ್ಸೆಯನ್ನು ಪತ್ತೆ
ಮಾಡಿ ಸಹಸ್ರಾರು ಜಾನುವಾರುಗಳ ಉಳಿವಿಗೆ ಕಾರಣರಾಗಿರುವುದನ್ನು ಮತ್ತು ರೈತರ ಮಾಹಿತಿಗಾಗಿ ಅನೇಕ
ತಾಂತ್ರಿಕ ಮಾಹಿತಿಗಳನ್ನು ವಿವಿಧ ಮಾಧ್ಯಮಗಳ ಮೂಲಕ ನೀಡುತ್ತಿರುವುದನ್ನು ಹಾಗೂ ಇತ್ತೀಗಷ್ಟೆ ಇವರಿಗೆ
ಭಾರತೀಯ ಪಶುವೈದ್ಯಕೀಯ ಔಷಧಶಾತ್ರಜ್ಞರ ಮತ್ತು ವಿಷಶಾಸ್ತ್ರಜ್ಞರ ಸಂಘವು “ರಾಷ್ಟ್ರೀಯ ಫ಼ೆಲೊ”
ಪ್ರಶಸ್ತಿ ನೀಡಿರುವುದನ್ನು ಈ ಸಂದರ್ಭದಲ್ಲಿ ನೆನೆಯಬಹುದಾಗಿದೆ.
