Wednesday, July 8, 2026
Wednesday, July 8, 2026

ಖೋಖೋ ಪಂದ್ಯಾವಳಿಯಿಂದ ಯುವಜನತೆಗೆ ಸ್ಫೂರ್ತಿ-ವಿನೋದ್ ಬೊಗಸೆ

Date:

ಗ್ರಾಮೀಣ ಕ್ರೀಡೆಗಳು ನಶಿಸುತ್ತಿರುವ ಇಂದಿನ ಕಾಲಘಟ್ಟದಲ್ಲಿ ಗ್ರಾಮದ ಯುವಕರ ಸ್ಪೂರ್ತಿ ನೀಡುವ ಸಲುವಾಗಿ ಖೋ ಖೋ ಪಂದ್ಯಾವಳಿ ಆಯೋಜಿಸಿ ಪ್ರೇರೇಪಿ ಸುವ ಕಾರ್ಯ ಮಾಡಲಾಗುತ್ತಿದೆ ಎಂದು ಕಡವಂತಿ ಗ್ರಾ.ಪಂ. ಸದಸ್ಯ ವಿನೋದ್ ಬೊಗಸೆ ಹೇಳಿದರು.

ಖಾಂಡ್ಯ ಹೋಬಳಿಯ ಗೋರಿಗಂಡಿ ಗ್ರಾಮದಲ್ಲಿ ನೈನ್ ಬ್ಲಾಕ್ ಯುವಕರ ತಂಡ ಆಯೋಜಿಸಲಾಗಿದ್ದ ಗ್ರಾಮೀಣ ಹಾಗೂ ಜಿಲ್ಲಾ ಮಟ್ಟದ ಎರಡು ದಿನಗಳ ಕಾಲ ನಡೆದ ಖೋ ಖೋ ಪಂದ್ಯಾವಳಿಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.

ಆಧುನಿಕತೆ ಬೆಳೆದಂತೆ ಕ್ರೀಡೆಗಳಲ್ಲಿ ಮಕ್ಕಳಿಗೆ ಆಸಕ್ತಿ ಕಡಿಮೆಯಾಗುತ್ತಿದೆ. ಮೊಬೈಲ್, ಎಲೆಕ್ಟಾçನಿಕ್ ವಸ್ತುಗಳ ವ್ಯಾಮೋಹದಿಂದಾಗಿ ಗ್ರಾಮೀಣ ಕ್ರೀಡೆಗಳು ನಶಿಸುತ್ತಿವೆ. ಇದನ್ನು ಉಳಿಸುವ ನಿಟ್ಟಿನಲ್ಲಿ ಗ್ರಾಮದ ಯುವಕರು ಒಗ್ಗಟ್ಟಾಗಿ ಹಳ್ಳಿಗಾಡಿನ ಗ್ರಾಮೀಣ ಕ್ರೀಡೆಗಳಿಗೆ ಒತ್ತು ನೀಡಿ ಪ್ರೋತ್ಸಾಹಿಸುತ್ತಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ಕಾರ್ಯಕಾರಿಣ ಸದಸ್ಯ ರಾಘು ಮಾತನಾಡಿ ಯುವಕರು ಅತ್ಯಂತ ಶ್ರಮವಹಿಸಿ ಕ್ರೀಡೆ ಆಯೋಜಿಸಿರುವುದು ಖುಷಿಯ ವಿಚಾರ. ಮುಂಬರುವ ದಿನಗಳಲ್ಲಿ ಇದೇ ರೀತಿ ಗ್ರಾಮೀಣ ಕ್ರೀಡೆಗಳನ್ನು ಬೆಳೆಸಲು ಮುಂದಾಗಬೇಕು ಎಂದು ಸಲಹೆ ಮಾಡಿದರು.

ಇದೇ ವೇಳೆ ಖೋ ಖೋ ಪಂದ್ಯಾವಳಿಯಲ್ಲಿ ವಿಜೇತರಾದ ಸಖರಾಯಪಟ್ಟಣ, ಗೋರಿಗಂಡಿ ಹಾಗೂ ಸಂಗಮೇಶ್ವರ ತಂಡಕ್ಕೆ ತಂಡಗಳಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಪಕ್ಷದ ಖಾಂಡ್ಯ ಹೋಬಳಿ ಎಸ್ಸಿ ಘಟಕದ ಅಧ್ಯಕ್ಷ ಲಕ್ಷ್ಮಣ್, ಪ್ರಧಾನ ಕಾರ್ಯದರ್ಶಿಗಳಾದ ಸಂತೋಷ್, ಮಂಜು ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...