Sunday, December 7, 2025
Sunday, December 7, 2025

ಗ್ರಾಮಾಭಿವೃದ್ಧಿಯ ಬಗ್ಗೆ ಯುವಜನತೆ ಆಲೋಚಿಸಬೇಕು-ವಿಜಯ್ ಕುಮಾರ್

Date:

ಗ್ರಾಮೀಣಾಭಿವೃದ್ಧಿಯ ಪರಿಕಲ್ಪನೆ, ಕನಸು ಸಾಕಾರಗೊಳಿಸುವ ದಿಸೆಯಲ್ಲಿ ಯುವಜನತೆ ಆಲೋಚನೆ ನಡೆಸಬೇಕಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್ ಹೇಳಿದರು.

ಶಿವಮೊಗ್ಗ ತಾಲೂಕಿನ ಗಾಜನೂರಿನ ಸರ್ಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಕುವೆಂಪು ವಿವಿಯ ವಿಶ್ವವಿದ್ಯಾಲಯ ಶ್ರೀಮದ್ ರಂಭಾಪುರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಎನ್‌ಎಸ್‌ಎಸ್ 1 & 2 ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜತೆಯಲ್ಲಿ ಪಠ್ಯೇತರ ಚಟುವಟಿಕೆಗಳ ಬಗ್ಗೆಯು ಆಸಕ್ತಿ ಬೆಳೆಸಿಕೊಳ್ಳಬೇಕು. ಗ್ರಾಮೀಣಾಭಿವೃದ್ಧಿ ಕುರಿತು ಆಲೋಚನೆ ನಡೆಸಬೇಕು. ಸೇವಾ ಮನೋಭಾವ ಬೆಳೆಸಿಕೊಳ್ಳುವ ಜತೆಯಲ್ಲಿ ಇಂತಹ ಶಿಬಿರಗಳಿಂದ ಗ್ರಾಮಾಂತರ ಪ್ರದೇಶದ ಅರಿವು ವೃದ್ಧಿಯಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರೋಟರಿ ಮಾಜಿ ಸಹಾಯಕ ಗವರ್ನರ್ ರವೀಂದ್ರನಾಥ ಐತಾಳ್ ಮಾತನಾಡಿ, ಇಂದಿನ ವಿದ್ಯಾರ್ಥಿಗಳಲ್ಲಿ ಸೇವೆ ಮಾಡುವ ಮನೋಭಾವಕ್ಕೆ ಗುರು ಹಿರಿಯರು, ಸ್ಥಳೀಯರು ಮತ್ತು ಸರ್ಕಾರದ ಪ್ರೋತ್ಸಾಹ ಅಗತ್ಯ. ಇಂದಿನ ಶಿಬಿರಕ್ಕೆ ಮಕ್ಕಳೊಂದಿಗೆ ಕೈ ಜೋಡಿಸುವ ಸ್ಥಳೀಯ ನಾಗರಿಕರ ಮತ್ತು ಜನ ಪ್ರತಿನಿಧಿಗಳ ಸಹಾಯ ಮುಖ್ಯ ಎಂದು ಹೇಳಿದರು.

ಪ್ರತಿ ದಿನ ಶಿಬಿರಾರ್ಥಿಗಳು ಗಮನ ಕೊಡುವ ಸ್ವಚ್ಚ ಭಾರತ ಪರಿಕಲ್ಪನೆಯ ಗ್ರಾಮ ನೈರ್ಮಲ್ಯ, ಸ್ವಚ್ಚತೆ ಮತ್ತು ಪರಿಸರ ಪ್ರೇಮ ಇದು ಮಹಾತ್ಮಾ ಗಾಂಧಿ ಹಾಗೂ ಪ್ರಧಾನ ಮಂತ್ರಿ ಮೋದಿಯವರ ಕನಸು ಇದಕ್ಕೆ ಸಹಕರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೌರಮ್ಮ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಎನ್.ಎಸ್.ಎಸ್ ತರಬೇತುದಾರ ನಾಗರಾಜ ಮಾತನಾಡಿ ಶಿಬಿರದ ಉದ್ದೇಶ ತಿಳಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಶರತ್, ಕಿರಣ ವಿ.ಕೆ, ವಾಣಿ.ವಿ, ತೇಜಸ್ವಿನಿ ಮತ್ತು ಸಲ್ಮ ಭಾಗಿಯಾಗಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...