Tuesday, March 24, 2026
Tuesday, March 24, 2026

ಸಂಸತ್ತಿನಲ್ಲೂ ಸದ್ದುಮಾಡಿರುವ ಅದಾನಿ ಕಂಪನಿ ಷೇರುಗಳ ವಿವಾದ

Date:

ಅದಾನಿ ಸಮೂಹದ ಅವ್ಯವಹಾರದ ಬಗ್ಗೆ ರಾಜ್ಯಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ , ನಿಯಮ 267ರ ಅಡಿ ವಿಷಯದ ಚರ್ಚೆಗೆ ಅವಕಾಶ ಕೊಡಬೇಕು ಎಂದು ಒತ್ತಾಯಿಸಿದರು.

ಶೇರು ಮೌಲ್ಯಗಳ ಕೃತಕ ಏರಿಳಿಕೆ ಮಾಡಿದ ಆರೋಪ ಹೊತ್ತಿರುವ ಅದಾನಿ ಗ್ರೂಪ್ ನ ಅವ್ಯವಹಾರದ ಕುರಿತ ಹಿಂಡನ್ ಬರ್ಗ್ ರಿಸರ್ಚ್ ನೀಡಿದ್ದ ವರದಿ ಪ್ರಸ್ತಾಪಿಸಿ ಆರೋಪಗಳ ಬಗ್ಗೆ ಜಂಟಿ ಸಂಸದೀಯ ಸಮಿತಿ ಅಥವಾ ಸುಪ್ರೀಂ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪ್ರತಿಪಕ್ಷಗಳ ಸದಸ್ಯರು ಆಗ್ರಹಿಸಿದರು‌.

ಆದರೆ ಚರ್ಚೆಗೆ ಅವಕಾಶ ಕಲ್ಪಿಸಲು ಸಭಾಪತಿ ಜಗದೀಶ್ ಧನಕರ್ ನಿರಾಕರಿಸಿದರು. ಇದರಿಂದ ಆಕ್ರೋಶಗೊಂಡ ಪ್ರತಿಪಕ್ಷಗಳು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದರಿಂದ ಗದ್ದಲ ಉಂಟಾಗಿ ಕಲಾಪ ಮುಂದೂಡಿಕೆಯಾಯಿತು.

ಬಳಿಕ ಸದನದ ಹೊರಗೆ ಮಾತನಾಡಿದ ಖರ್ಗೆ , ಎಸ್ ಬಿ ಐ, ಎಲ್ಐಸಿ ಸೇರಿದಂತೆ ಸಾರ್ವಜನಿಕ ಸಂಸ್ಥೆಗಳು ಅದಾನಿ ಸಮೂಹದ ಕಂಪನಿಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಹೂಡಿಕೆ ಮಾಡಿವೆ. ಹಿಂಡನ್ ಬರ್ಗ್ ವರದಿಯಿಂದ ಶೇರುಗಳ ಮೌಲ್ಯ ಪಾತಾಳಕ್ಕೆ ಕುಸಿದಿದೆ.

ಇದರಿಂದ ಸಾರ್ವಜನಿಕರಿಗೆ ತಮ್ಮ ಹಣದ ಬಗ್ಗೆ ಆತಂಕ ಶುರುವಾಗಿದೆ. ಸರ್ಕಾರ ಜನರಲ್ಲಿ ಮೂಡಿರುವ ಸಂಶಯವನ್ನು ನಿವಾರಿಸಲು ಮುಂದಾಗಬೇಕು. ಸಮಗ್ರ ತನಿಖೆಗೆ ಆದೇಶಿಸಿ ತನಿಕಾ ವರದಿ ಅಂಶಗಳನ್ನೂ ಪ್ರತಿದಿನ ಪ್ರಕಟಿಸಬೇಕು ಎಂದು ಒತ್ತಾಯಿಸಿದರು

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...