Sunday, August 23, 2026
Sunday, August 23, 2026

ಆದಿಚುಂಚನಗಿರಿ ಶಾಖಾಮಠದಲ್ಲಿ ಸಾಮೂಹಿಕ ವಿವಾಹ ಮಹೋತ್ಸವ

Date:

ಶಿವಮೊಗ್ಗ:
ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನಮಠದ ಪರಮ ಪೂಜ್ಯ ಗುರುಗಳಾದ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮಿಗಳವರ ಮಾರ್ಗದರ್ಶನದಲ್ಲಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಮಹಾಸಂಸ್ಥಾನದ ಪ್ರಧಾನಕಾರ್ಯದರ್ಶಿ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ಕನಸಿನಂತೆ 1998ರಂದು ನಿರ್ಮಿಸಿದ ಸಮುದಾಯ ಭವನ ಉದ್ಘಾಟನೆ ದಿನದಿಂದ ಆರಂಭಗೊಂಡ ವಿವಾಹ ಮಹೋತ್ಸವಕ್ಕೆ 25ನೇ ವರುಷ ತಲುಪಿದ್ದು, ಈ ಮಹೋತ್ಸವವು ನಗರದ ಶರಾವತಿ ನಗರದಲ್ಲಿರುವ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ನಡೆಯಲಿದ್ದು, ಅಂದಿನಿಂದ ಉಚಿತ ಸಾಮೂಹಿಕ ವಿವಾಹದಲ್ಲಿ ಸಾವಿರಾರು ಜನ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಪ್ರತಿ ವಿವಾಹ ಮಹೋತ್ಸವದ ವಿಶೇಷತೆ ಎಂದರೆ ಮದುವೆಯಾಗುವ ವಧು ವರರಿಗೆ ವಿವಾಹಕ್ಕೆ ಬೇಕಾದ ಅಗತ್ಯ ಸಾಮಗ್ರಿಗಳನ್ನು ಮಠವೇ ನೀಡುತ್ತದೆ. ಹೆಣ್ಣಿಗೆ ತಾಳಿ, ಕಾಲುಂಗುರ, ಬಟ್ಟೆ ನೀಡಿದರೆ. ಗಂಡಿಗೆ ಅಂಗಿ,ಪಂಚೆ, ಕಲ್ಪವೃಕ್ಷ ನೀಡಲಾಗುತ್ತದೆ. ಇದೇ ಸಂದರ್ಭದಲ್ಲಿ ಶ್ರೀ.ಕಾಲಭೈರವೇಶ್ವರ ದೇವಾಲಯದ ವಾರ್ಷಿಕೋತ್ಸವ ಸಮಾರಂಭ ನಡೆಯಲಿದೆ.

ಆಸಕ್ತ ವಧು ವರರು ತಮ್ಮ ಇತ್ತೀಚಿನ ಭಾವಚಿತ್ರ,ಆಧಾರ್ ಕಾರ್ಡ್, ಜಾತಿ ಹಾಗೂ ಜನನ ಪ್ರಮಾಣ ಪತ್ರ,ಗ್ರಾಮ ಪಂಚಾಯಿತಿ ಅಥವಾ ನಗರಸಭೆಯಿಂದ ಪಡೆದ ದೃಢೀಕರಣ ಪತ್ರದೊಂದಿಗೆ ತಾವು ಹಾಗೂ ತಮ್ಮ ಪೋಷಕರೊಂದಿಗೆ ಬಂದು, ದಿನಾಂಕ :25/3/23 ರೊಳಗೆ ತಮ್ಮ ಹೆಸರನ್ನು ಮೇಲ್ಕಂಡ ವಿಳಾಸದಲ್ಲಿ ನೋಂದಾಯಿಸಿಕೊಳ್ಳಬೇಕೆಂದು ಕೋರುತ್ತೇವೆ.
ಪ್ರತಿ ವರ್ಷದಂತೆ ವಿವಾಹವಾಗಿ 50 ವರ್ಷ ತುಂಬಿದ ಹಿರಿಯ ಆದರ್ಶ ದಂಪತಿಗಳಿಗೆ ಸನ್ಮಾನ ಸಮಾರಂಭ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಹಾಗೂ ಹೆಸರು ನೊಂದಾಯಿಸಲು 08182-257958,254141,9742885628 ಗೆ ಸಂಪರ್ಕಿಸಿ ಎಂದು ಮಹಾಸಂಸ್ಥಾನ ಮಠದ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...