Saturday, December 6, 2025
Saturday, December 6, 2025

3000 ಪೌರ ಕಾರ್ಮಿಕರ ನೇಮಕಾತಿ ಪ್ರಕ್ರಿಯೆಗೆಸಂಘಟನಕಾರರ ಹರ್ಷ

Date:

ಶಿವಮೊಗ್ಗ: ರಾಜ್ಯದ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ರಾಜ್ಯ ಸರ್ಕಾರದ ನಿರ್ಧಾರಗಳನ್ನು ಶಿವಮೊಗ್ಗ ಮಹಾನಗರ ಪಾಲಿಕೆ ಅಧಿಕಾರಿಗಳ ಮತ್ತು ನೌಕರರ ಸಂಘವು ಸ್ವಾಗತಿಸಿದೆ.

ಸಂಘದ ಬೇಡಿಕೆಯಂತೆ ಸ್ಥಳೀಯ ಸಂಸ್ಥೆಗಳಲ್ಲಿನ 3000ಕ್ಕೂ ಹೆಚ್ಚಿನ ಪೌರಕಾರ್ಮಿಕರ ನೇರ ನೇಮಕಾತಿ ಗೆ ಸರ್ಕಾರ ಆದೇಶಿಸಿದ್ದು, ಗುತ್ತಿಗೆ ಕಾರ್ಮಿಕರಾಗಿರುವ ಒಳಚರಂಡಿ ಕಾರ್ಮಿಕರು, ಕಾಮಗಾರಿ ವಿಭಾಗದ ಲೋರ‍್ಸ್, ಕ್ಲಿರ‍್ಸ್, ನೇರ ನೇರ ನೇಮಕಾತಿಗೆ ಪರಿಗಣಿಸುವ ದಿಕ್ಕಿನಲ್ಲಿ ಸರ್ಕಾರ ಒಪ್ಪಿದೆ.

ಇದರೊಂದಿಗೆ ನೌಕರರ ೭ನೇ ವೇತನ ಆಯೋಗವನ್ನು ರಚಿಸಿ ಅನುಷ್ಠಾನಕ್ಕೆ ಮುಂದಾಗಿರುವುದು ಅಭಿನಂದನೀಯವಾಗಿದೆ ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಅಧಿಕಾರಿಗಳ ಮತ್ತು ನೌಕರರ ಸಂಘದ ಅಧ್ಯಕ್ಷರಾದ ಎನ್.ಗೋವಿಂದ ಪ್ರಧಾನ ಕಾರ್ಯದರ್ಶಿ ಡಿ.ಮೋಹನಕುಮಾರ್ ಅವರು ತಿಳಿಸಿದ್ದಾರೆ.

ಪೌರ ಕಾರ್ಮಿಕರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ಹಾಗೂ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆ, ರಾಜ್ಯದಲ್ಲೆ ಮೊದಲನೇಯದಾಗಿ ಶಿವಮೊಗ್ಗ ನಗರದಲ್ಲಿ ಪೌರಕಾರ್ಮಿಕರ ಕಲ್ಯಾಣಭವನ ನಿರ್ಮಾಣಕ್ಕೆ ಕಾರಣಕರ್ತರಾದ ಶಿವಮೊಗ್ಗ ನಗರ ಶಾಸಕರು ಮಾಜಿ ಉಪಮುಖ್ಯಮಂತ್ರಿಗಳೂ ಆದ ಕೆ.ಎಸ್ ಈಶ್ವರಪ್ಪ ಅವರುಗಳಿಗೆ ಫೆ. ೮ ಶಿವಮೊಗ್ಗ ನಗರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯದ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕರ ಪರವಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ಅಧಿಕಾರಿಗಳ ಮತ್ತು ನೌಕರರ ಸಂಘದಿಂದ ಗೌರವ ಸಮರ್ಪಣೆ ಮಾಡಲಾಗುವುದು ಎಂದು ಸಂಘದ ಅಧ್ಯಕ್ಷ ಎನ್. ಗೋವಿಂದ ಅವರು ತಿಳಿಸಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...