Thursday, December 18, 2025
Thursday, December 18, 2025

ಭದ್ರಾವತಿಯಲ್ಲಿ ರೈಲ್ವೆ ಸುರಕ್ಷಾ ಜಾಗೃತಿ ಅಭಿಯಾನ

Date:

ಭದ್ರಾವತಿ ಸಮೀಪದ ಕಡದಕಟ್ಟೆಯ ಕೆಜಿಆರ್ ಗ್ರಾಮಾಂತರ ಹಿರಿಯ ಪ್ರಾಥಮಿಕ ಶಾಲೆ(ಅನುದಾನಿತ) ಮತ್ತು ನವಚೇತನ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶಿವಮೊಗ್ಗ ರೈಲ್ವೆ ಇಲಾಖೆ ವತಿಯಿಂದ ಸುರಕ್ಷಿತ ರೈಲ್ವೆ ಪ್ರಯಾಣ ಹಾಗೂ ರೈಲ್ವೆ ಕಾಯ್ದೆ ಕುರಿತು ಜಾಗೃತಿ ಅಭಿಯಾನ ಏರ್ಪಡಿಸಲಾಗಿತ್ತು

ಶಿವಮೊಗ್ಗ ಆರ್‍ಪಿಎಫ್ ಇನ್ಸ್‍ಪೆಕ್ಟರ್ ಬಿ.ಎನ್.ಕುಬೇರಪ್ಪ ಹಾಗೂ ಸಬ್ ಇನ್ಸ್‍ಪೆಕ್ಟರ್ ಸಂತೋಷ್ ಎಸ್ ಗಾವಕರ್ ಹಾಗೂ ಸಿಬ್ಬಂದಿ ವರ್ಗದವರು ಜಾಗೃತಿ ಅಭಿಯಾನ ನಡೆಸಿಕೊಟ್ಟರು.

ಪಿಎ ಸಿಸ್ಟಂ ಮತ್ತು ಟಿವಿ ಪ್ರದರ್ಶಕಗಳ ಮೂಲಕ ವಿದ್ಯಾರ್ಥಿಗಳಿಗೆ ಕಲ್ಲು ತೂರಾಟ, ರೈಲ್ವೆ ಹಳಿ ಅತಿಕ್ರಮಣ, ರೈಲ್ವೆ ಹಳಿಯಲ್ಲಿ ಸೆಲ್ಫಿ ತೆಗೆದುಕೊಳ್ಳುವುದರ ಪರಿಣಾಮ, ಜಾನುವಾರುಗಳ ಅಪಘಾತ, ಆತ್ಮಹತ್ಯೆ ಮತ್ತು ಫುಟ್ ಬೋರ್ಡ್‍ಗಳಲ್ಲಿ ಪ್ರಯಾಣಿಸುವುದರಿಂದ ಆಗುವ ಅವಘಡಗಳು ಇತ್ಯಾದಿಗಳ ಗಂಭೀರತೆಗಳ ಬಗ್ಗೆ ತಿಳುವಳಿಕೆ ನೀಡಲಾಯಿತು.

ರೈಲ್ವೇ ಕಾಯ್ದೆಯಡಿ ಬರುವ ಅಪರಾಧಗಳು ಹಾಗೂ ಶಿಕ್ಷೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟ ಅವರು ಎಲ್‍ಸಿ ಗೇಟ್‍ಗಳನ್ನು ಹಾದುಹೋಗುವಾಗ ಎಲ್ಲರೂ ನಿಯಮಗಳನ್ನು ಅನುಸರಿಸಬೇಕು. ಹಾಗೂ ರೈಲುಗಳ ಸುರಕ್ಷಿತ ಮತ್ತು ಸುಗಮ ಓಡಾಟಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಕೆಜಿಆರ್ ಗ್ರಾಮಾಂತರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಸುವರ್ಣ ಹೆಚ್.ಡಿ, ಶಿಕ್ಷಕರು, ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...

Department of Agriculture 2026 ಜನವರಿ 6. ಕೃಷಿ ಇಲಾಖೆಯಿಂದ “ಸಿರಿಧಾನ್ಯ & ಮರೆತು ಹೋದ ಖಾದ್ಯಗಳ ಪಾಕ ತಯಾರಿ” ಸ್ಪರ್ಧೆ

Department of Agriculture ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2026 ರ ಅಂಗವಾಗಿ ಕೃಷಿ...

Shivamogga Police ಶಿಕಾರಿಪುರ- ಚುರ್ಚುಗುಂಡಿಯಿಂದ ಯುವಕ ನಾಪತ್ತೆ, ಪೊಲೀಸ್ ಪ್ರಕಟಣೆ

Shivamogga Police ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...