ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದು, ಮಹಿಳೆಯರನ್ನು ಸ್ವಾಲಂಬಿಗಳನ್ನಾಗಿ ಮಾಡಿದರೆ ಕುಟುಂಬದ ಆರ್ಥಿಕ ಪರಿಸ್ಥಿತಿಯು ಸದೃಢವಾಗುತ್ತದೆ ಎಂದು ಇನ್ನರ್ವ್ಹೀಲ್ ಜಿಲ್ಲಾ ಚೇರ್ಮನ್ ಕವಿತಾ ನಿಯತ್ ಹೇಳಿದರು.
ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ ಇನ್ನರ್ವ್ಹೀಲ್ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಹಮ್ಮಿಕೊಳ್ಳಲಾದ ಅಧಿಕೃತ ಭೇಟಿ ಸಮಾರಂಭದಲ್ಲಿ ಮಾತನಾಡಿ, ಮಹಿಳೆಯರು ಸಾಧನೆ ಮಾಡುವಂತೆ ಪೂರಕ ಸಹಕಾರ ನೀಡಬೇಕು ಎಂದು ತಿಳಿಸಿದರು.
ಇನ್ನರ್ವ್ಹೀಲ್ ಶಿವಮೊಗ್ಗ ಪೂರ್ವ ಸಂಸ್ಥೆಯು ಸ್ನೇಹ, ಪ್ರೀತಿ, ಸೇವೆಗಾಗಿ ಸ್ಥಾಪಿತವಾಗಿ ವಿಶ್ವಾದ್ಯಂತ ಲಕ್ಷಾಂತರ ಸದಸ್ಯರನ್ನು ಹೊಂದಿದೆ. ನಿರಂತರವಾಗಿ ಸಮಾಜಮುಖಿ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿದ್ದು, ಜಾಗೃತಿ ಕಾರ್ಯಕ್ರಮ ಹಾಗೂ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತದೆ ಎಂದರು.
ಮಹಿಳಾ ಸಬಲೀಕರಣ ಕಾರ್ಯಕ್ರಮಗಳ ಮೂಲಕ ಮಹಿಳೆಯರಲ್ಲಿ ಆತ್ಮವಿಶ್ವಾಸ ವೃದ್ಧಿಸುವ ಕಾರ್ಯ ನಡೆಸುತ್ತಿದೆ. ಸಮಾಜಮುಖಿ ಆಲೋಚನೆಗಳನ್ನು ಕಾರ್ಯಗಳನ್ನು ಇನ್ನರ್ವ್ಹೀಲ್ ಶಿವಮೊಗ್ಗ ಪೂರ್ವ ಸಂಸ್ಥೆಯು ನಡೆಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ಇನ್ನರ್ವ್ಹೀಲ್ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷೆ ಮಧುರಾ ಮಹೇಶ್ ಮಾತನಾಡಿ, ನಮ್ಮ ಸಂಸ್ಥೆ ವತಿಯಿಂದ ಈಗಾಗಲೇ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡುವುದರ ಜತೆಯಲ್ಲಿ ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದ ಬಡಮಕ್ಕಳಿಗೆ ಆರ್ಥಿಕ ನೆರವು ನೀಡುವ ಕೆಲಸ ಮಾಡುತ್ತಿದೆ. ಗ್ರಾಮೀಣ ಶಾಲೆಗಳಲ್ಲಿ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ನೆರವು ನೀಡಲಾಗುತ್ತದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ನೂತನ ಇನ್ನರ್ವ್ಹೀಲ್ ಸದಸ್ಯರನ್ನು ಸೇರ್ಪಡೆಗೊಳಿಸಲಾಯಿತು.
ಆರ್ಥಿಕವಾಗಿ ಹಿಂದುಳಿದ ಬೀದಿಬದಿ, ಸೊಪ್ಪು, ತರಕಾರಿ ವ್ಯಾಪಾರಸ್ಥರಿಗೆ ನೆರಳಿಗೆ ಅನುಕೂಲವಾಗುವಂತೆ 8 ಛತ್ರಿಗಳನ್ನು ವಿತರಿಸಲಾಯಿತು.
ಕಾರ್ಯದರ್ಶಿ ಉಮಾ ವೆಂಕಟೇಶ್, ಜಿಲ್ಲಾ ಮಾಜಿ ಚೇರ್ಮನ್ ವಾರಿಜಾ ಜಗದೀಶ್, ಸುಧಾ ಪ್ರಸಾದ್, ಭಾರತಿ ಚಂದ್ರಶೇಖರ್, ಮಾಜಿ ಅಧ್ಯಕ್ಷರಾದ ಬಿಂದು ವಿಜಯ್ಕುಮಾರ್, ವಿಜಯ ರಾಯ್ಕರ್, ವೀಣಾ ಹರ್ಷ, ನಿಯೋಜಿತ ಜಿಲ್ಲಾ ಚೇರ್ಮನ್ ಶಬರಿ ಕಡಿದಾಳ್, ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಸುಮತಿ ಕುಮಾರಸ್ವಾಮಿ, ಶಿಲ್ಪಾ ಗೋಪಿನಾಥ್, ವಾಗ್ದೇವಿ ಬಸವರಾಜ್ ಉಪಸ್ಥಿತರಿದ್ದರು.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.