ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ದಿ: 12/02/2023 ರ ಭಾನುವಾರದಂದು 2022-23 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ “ರಾಮಣ್ಣ ಸೆಟ್ಟಿ ಪಾರ್ಕ್ ಹತ್ತಿರ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗಾಡಿಕೊಪ್ಪ ಹತ್ತಿರ, ಟ್ಯಾಂಕ್ ಮೊಹಲ್ಲಾ ೪ನೇ ತಿರುವು ಅಂಬೇಡ್ಕರ್ ಪಾರ್ಕ್ ಹತ್ತಿರ, ಶರಾವತಿನಗರ ಚರ್ಚ್ ರಸ್ತೆ ವೀಣಾ ಶಾರದ ಪ್ರೌಢಶಾಲೆ ಆಟೋನಿಲ್ದಾಣದ ಹತ್ತಿರ ಹಾಗೂ ಅಶೋಕನಗರ ಆರ್ಚ್ ಆಟೋ ನಿಲ್ದಾಣದ ಹತ್ತಿರ, ಶಿವಮೊಗ್ಗ”ಗಳಲ್ಲಿ ವಿಶೇಷ ನೀರಿನ ಕಂದಾಯ ವಸೂಲಾತಿ ಕೌಂಟರ್ಗಳನ್ನು ತೆರೆಯಲಾಗಿದೆ.
ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸುವುದು ಅನಿವಾರ್ಯವಾಗಲಿದೆ.
ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರುಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.