Sunday, August 23, 2026
Sunday, August 23, 2026

ಮಹಿಳೆಯರ ಆರೋಗ್ಯ ಮತ್ತು ವಿಕಸನಕ್ಕೆ ಹೆಚ್ಚಿನ ಆದ್ಯತೆ-ಚೈತ್ರ ಸಿ ಗೌಡ

Date:

ಸಮಾಜಮುಖಿ ಕೆಲಸಗಳೊಂದಿಗೆ ಮಹಿಳೆಯರ ಆರೋಗ್ಯ ಮತ್ತು ಅವರ ವೈಯಕ್ತಿಯ ವಿಕಸನಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಜೆಸಿಐ ಮಲ್ನಾಡ್‌ನ ನೂತನ ಅಧ್ಯಕ್ಷೆ ಚೈತ್ರ ಸಿ ಗೌಡ ಹೇಳಿದರು.

ಚಿಕ್ಕಮಗಳೂರಿನ ಗ್ಲಾಸ್‌ಹೌಸ್‌ನಲ್ಲಿ ಆಯೋಜನೆಗೊಂಡಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾಂಭದಲ್ಲಿ ಪ್ರಥಮ ಮಹಿಳಾ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು ಸಾರ್ವಜನಿಕ ವಲಯದಲ್ಲಿ ಸದಾ ಸಮಾಜಮುಖಿ ಕೆಲಸಗಳಿಂದ ಸಕ್ರಿಯರಾಗಿ ಚಿಕ್ಕಮಗಳೂರು ಜನರ ಕಷ್ಟಗಳಿಗೆ ಮತ್ತು ವಿಶೇಷವಾಗಿ ಮಹಿಳೆಯರ ಏಳಿಗೆಗಾಗಿ ಶ್ರಮಿಸಲು ಯೋಜನೆಗಳನ್ನು ರೂಪಿಸಲಾಗುವುದು ಎಂದರು.

ಮುಂದಿನ ದಿನಗಳಲ್ಲಿ ಪರಿಸರದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಮತ್ತು ಮಹಿಳೆಯರ ಆರೋಗ್ಯದ ಬಗ್ಗೆ ಹಾಗೂ ಅವರ ವೈಯಕ್ತಿಕ ವಿಕಸನಕ್ಕೆ ಹೆಚ್ಚಿನ ಆಧ್ಯತೆ ನೀಡಲು ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮತ್ತು ಚಟುವಟಿಕೆಗಳನ್ನು ರೂಪಿಸಿ ಚಿಕ್ಕಮಗಳೂರಿನ ಜೆಸಿಐ ಮಲ್ನಾಡ್ ಪ್ರಪಂಚದಾದ್ಯಂತ ಮಾದರಿಯಾಗುವಂತೆ ಮಾಡಲಾಗುವುದು ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ನಗರಸಭಾಧ್ಯಕ್ಷರಾದ ವರಸಿದ್ಧಿ ವೇಣುಗೋಪಾಲ್ ಅವರು ಮಾತನಾಡಿ ಜೆಸಿಐ ಸಂಸ್ಥೆಯಿಂದ ನಮ್ಮ ನಗರದಲ್ಲಿ ಉತ್ತಮ ಜನಪರ ಸೇವೆಗಳು ಸಿಗುವಂತಾಗಲಿ ಎಂದರು.

ಸಮಾಜ ಸೇವಕಿ ಪಲ್ಲವಿ ಸಿ.ಟಿ ರವಿ ಮಾತನಾಡಿ ಪ್ರಥಮ ಮಹಿಳಾ ಅಧ್ಯಕ್ಷೆಯಾಗಿರುವ ಚೈತ್ರರನ್ನು ಅಭಿನಂದಿಸಿ ಮಹಿಳೆಯರ ಬಗೆಗೆ ವಿಶೇಷ ಕಾಳಜಿ ವಹಿಸಿ ಅವರ ಏಳಿಗೆಗೆ ಶ್ರಮಿಸುವಂತಕ ಕಾರ್ಯಗಳನ್ನು ರೂಪಿಸಬೇಕೆಂದು ಸಲಹೆ ನೀಡಿದರು.

ಕೃಷಿ ಜಂಟಿ ನಿರ್ದೇಶಕರಾದ ಜೆಸಿಐನ ತಿರುಮಲೇಶ್‌ರವರು ಜೆಸಿಐನ ಕಾರ್ಯವೈಖರಿಯ ಬಗ್ಗೆ ಹಾಗೂ ಜೆಸಿಐನ ಸಮಾಜಮುಖಿ ಕಾರ್ಯಗಳ ಬಗ್ಗೆ ವಿಶೇಷ ಉಪನ್ಯಾಸವನ್ನು ನೀಡಿದರು.

ಕಾರ್ಯಕ್ರಮದಲ್ಲಿ ಜೆಸಿಐನ ಪೂರ್ವಾಧ್ಯಕ್ಷರಾದ ಗಿರಿಧರ್ ರಾಜ್ ಅರಸ್, ವಲಯ ಅಧ್ಯಕ್ಷರಾದ ಯಶಸ್ವಿನಿ, ಪೂರ್ವ ವಲಯಾಧ್ಯಕ್ಷರಾದ ಸಮಥ ನವೀನ್ ಮಿಸ್ಕಿತ್, ವಲಯ ಉಪಾಧ್ಯಕ್ಷರಾದ ಚರಣ್‌ರಾಜ್, ಸಂಸ್ಥಾಪಕ ಅಧ್ಯಕ್ಷರಾದ ಅನಿಲ್ ಆನಂದ್,ಕಾರ್ಯದರ್ಶಿ ಕೋಮಲ, ವಲಯ ಉಪ ಪೂರ್ವಾಧ್ಯಕ್ಷರಾದ ವಿಜಯ್ ಕುಮಾರ್, ಹರ್ಷವರ್ಧನ್, ರಘುನಂದನ್, ಇಂದ್ರೇಶ್, ಗುರುಮೂರ್ತಿ ನಾಡಿಗ್, ಜೆಜೆಸಿ ಆಯುಶ್, ಪ್ರಿಯಾ ಅನಿಲ್ ಮುಂತಾದವರು ಇದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...