Friday, March 14, 2025
Friday, March 14, 2025

ಮೂರು ಕೃಷಿ ಕಾಯ್ದೆ ವಾಪಸ್: ಪ್ರಧಾನಿ ಘೋಷಣೆ

Date:

ಈಗ ಜಾರಿಯಲ್ಲಿರುವ ಮೂರು ಕೃಷಿ ಕಾಯ್ದೆಗಳನ್ನು ಸರ್ಕಾರವು ವಾಪಸ್ ಪಡೆಯುವ ಪ್ರಕ್ರಿಯೆ ಆರಂಭ ಮಾಡಲಿದೆ. ಬರುವ ಸಂಸತ್ತಿನ ಅಧಿವೇಶನದಲ್ಲಿ, ಅವುಗಳನ್ನು ಸಂವಿಧಾನಾತ್ಮಕ ಕ್ರಮಗಳ ಮೂಲಕ ವಜಾ ಮಾಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಕಳೆದ ಒಂದು ವರ್ಷದಿಂದ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ್ ಕೃಷಿಕರು ಈ ಮೂರು ಕೃಷಿ ಕಾಯ್ದೆ ರದ್ದುಗೊಳಿಸಲು ಒತ್ತಾಯಿಸಿ, ದೆಹಲಿಯ ಹೊರವಲಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದನ್ನು ಇಲ್ಲಿ ಸ್ಮರಿಸಬಹುದು.

ಪ್ರಧಾನಿ ಮೋದಿಜಿ ಅವರು ಪ್ರತಿಭಟನಾನಿರತ ಕೃಷಿಕರು ತಮ್ಮ ಮನೆಗಳಿಗೆ ಹಿಂದಿರುಗಬೇಕು. ಮತ್ತು ಈ ಕೃಷಿ ಕಾಯ್ದೆಗಳನ್ನು ಹಿಂಪಡೆಯಲಾಗುವುದು ಎಂದು ತಿಳಿಸಿದ್ದಾರೆ. ಅವರು ತಮ್ಮ ಸಂದೇಶದಲ್ಲಿ ಈ ಕೃಷಿ ಕಾಯ್ದೆಗಳ ಗುರಿಯು ಕೃಷಿಕರನ್ನು ಬಲಪಡಿಸುವುದೇ ಆಗಿದೆ. ಆದರೆ ಉತ್ತಮ ಪ್ರಯತ್ನ ಮಾಡಿದರು ಕೂಡ, ಕೆಲವು ವರ್ಗದ ಕೃಷಿಕರನ್ನು ಮನವರಿಕೆ ಮಾಡಿಕೊಡಲಾಗಲಿಲ್ಲ.

“ನಾನು, ಮತ್ತಷ್ಟು ಕಠಿಣವಾಗಿ ಶ್ರಮಿಸುತ್ತೇನೆ. ನಿಮ್ಮ ಕನಸುಗಳನ್ನು ,ದೇಶದ ಕನಸುಗಳನ್ನು ಈಡೇರಿಸಲು ಸಾಧ್ಯ ಮಾಡುತ್ತೇನೆ” ಎಂದು ಭರವಸೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Legislative Council ಇಡೀ ರಾಷ್ಟ್ರವೇ ಮೆಚ್ಚುವ ‌ಕಾನೂನು ಶಿಕ್ಷಣ ಸಿಗಲಿ- ಮಾಜಿ ನ್ಯಾ.ಎಂ.ಎನ್.ವೆಂಕಟಾಚಲಯ್ಯ

Karnataka Legislative Council ಪ್ರವಾಹೋಪಾದಿಯಲ್ಲಿ ಸಾಧನೆ ಮಾಡುವ ಹಂಬಲ ಉಳ್ಳವರನ್ನು ತಡೆಯಲು...

District Consumer Disputes Redressal Commission ರೆಫ್ರಿಜಿರೇಟರ್ ಸೇವಾನ್ಯೂನತೆ. ಜಿಲ್ಲಾ ವ್ಯಾಜ್ಯ ಪರಿಹಾರ ಆಯೋಗದಿಂದ ಗ್ರಾಹಕರಿಗೆ ಸಿಕ್ಕಿತು ನ್ಯಾಯ

District Consumer Disputes Redressal Commission ದೂರುದಾರರಾದ ಎಸ್.ವಿ.ಲೋಹಿತಾಶ್ವ ಇವರು ಎದುರುದಾರರಾದ...

Senior Chamber International Organization ಪುಷ್ಪ ಎಸ್ ಶೆಟ್ಟಿಅವರಿಗೆ ‌ಸೀನಿಯರ್ ಚೇಂಬರ್ ಉನ್ನತ ಪ್ರಶಸ್ತಿ

Senior Chamber International Organization ಬ್ರಹ್ಮಾವರದಲ್ಲಿ ನಡೆದ ಸೀನಿಯರ್ ಚೇಂಬರ್ ಇಂಟರ್...

State Film Awards 2020 ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಘೋಷಣೆ

State Film Awards 2020ನೇ ಸಾಲಿನ ಆಯ್ಕೆ ಸಮಿತಿಯು ಸಲ್ಲಿಸಿರುವ ವರದಿಯಲ್ಲಿ...