Saturday, December 6, 2025
Saturday, December 6, 2025

ಸಮೃದ್ಧ ಭೂಮಿಯನ್ನ ಮುಂದಿನ ಪೀಳಿಗೆಗೆ ಉಳಿಸಬೇಕಿದೆ-ಡಾ.ಕೆ.ಸುಂದರ ಗೌಡ

Date:

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಚಿಕ್ಕಮಗಳೂರು: ಪ್ರಪಂಚದಲ್ಲಿ ಪ್ರತಿಯೊಬ್ಬರು ಶಾಂತಿ ದಾರಿಯಲ್ಲಿ ನಡೆದು, ಪ್ರೀತಿಯನ್ನು ಪರಸ್ಪರ ಹಂಚಿಕೊಂಡರೆ ಮಾತ್ರ ಮುಂದಿನ ಪೀಳಿಗೆಗೆ ಸಮೃದ್ದ ಭೂಮಿಯನ್ನು ಉಳಿಸಲು ಸಾಧ್ಯ ಎಂದು ರಾಜ್ಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಪ್ರತಿನಿಧಿ ಡಾ|| ಕೆ.ಸುಂದರಗೌಡ ಹೇಳಿದರು.

ಚಿಕ್ಕಮಗಳೂರಿನ ಸಂತ ಜೋಸೆಫರ ಕಾಲೇಜಿನಲ್ಲಿ ಯುವರೆಡ್‌ಕ್ರಾಸ್ ಸಂಸ್ಥೆ ವತಿಯಿಂದ ಏರ್ಪಡಿಸಲಾಗಿದ್ದ ಪರಿಸರ ಸಂರಕ್ಷಣೆ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿ ಅವರು ಮಾತನಾಡುತ್ತಿದ್ದರು.

ವಿಶ್ವದ ಬಲಾಡ್ಯ ದೇಶಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಣುಬಾಂಬ್‌ಗಳಿವೆ. ಇವುಗಳ ಬಳಕೆಯಿಂದ ಪ್ರಪಂಚಕ್ಕೆ ಸಾಕಷ್ಟು ಹಾನಿಯಾಗಲಿದೆ. ಜಪಾನ್ ಹಾಗೂ ಈಚೆಗೆ ಸಿರಿಯಾದಲ್ಲಿ ಭೂಕಂಪವಾಗಿ ಸಾವಿರಾರು ಮಂದಿ ಸಾವಗೀಡಾಗಿರುವುದು ಹಾಗೂ ವಾತಾವರಣ ಕಲುಷಿತವಾಗಲು ಮೂಲ ಕಾರಣ ಅಣುಬಾಂಬ್ ಬಳಕೆ ಎಂದು ಹೇಳಿದರು.

ಮನುಷ್ಯ ಭೂಮಿಯಿಂದ ಗಾಳಿ, ನೀರು, ಆಹಾರಗಳನ್ನು ಪಡೆದುಕೊಳ್ಳುತ್ತಿದ್ದಾನೆ. ಹೊರತು ಪರಿಸರಕ್ಕೆ ಪೂರಕವಾಗಿಲ್ಲ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಹಾಗೂ ನಾಗರೀಕರು ಭೂಮಿಯ ಋಣ ತೀರಿಸುವ ಸಲುವಾಗಿ ಪಣ ತೊಡಬೇಕು. ಪರಿಸರಕ್ಕೆ ಹಾನಿಯಾಗುವುದರ ವಿರುದ್ಧ ಹೋರಾಡಬೇಕು ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಪರಿಸರ ಸಂರಕ್ಷಣೆ ಕುರಿತು ಮುಂಜಾಗ್ರತಾ ಕ್ರಮ ವಹಿಸಿದ್ದಲ್ಲಿ ಉಸಿರಾಟಕ್ಕೆ ತೊಂದರೆಯಾಗಿ ಗಾಳಿಯನ್ನು ಸಿಲಿಂಡರ್ ಮಾದರಿಯಲ್ಲಿ ಖರೀದಿಸಿ ಉಸಿರಾಡಬೇಕಾಗುವ ಸಂಭವವಿದೆ. ಆ ಹಿನ್ನೆಲೆಯಲ್ಲಿ ಪರಿಸರ ಕಾಪಾಡುವಲ್ಲಿ ನಾವುಗಳು ಶ್ರಮವಹಿಸಿದ್ದಲ್ಲಿ ವಿಶ್ವವು ಅಳಿವಿನ ಹಂಚಿಗೆ ತಲುಪಬಹುದು ಎಂದು ಎಚ್ಚರಿಸಿದರು.

ವಿದ್ಯಾರ್ಥಿನಿ ಇಕ್ರಾ ಮೆಹ್ತಾ ಮಾತನಾಡಿ, ಪರಿಸರ ರಕ್ಷಣೆ ಬಗ್ಗೆ ನಾವು ಗಮನಹರಿಸದಿದ್ದಲ್ಲಿ ನೆರೆ ದೇಶಗಳಲ್ಲಿ ಆಹಾರ ಸಮಸ್ಯೆ ಮತ್ತು ಭೂಕಂಪದಂತಹ ದುರ್ಘಟನೆಯನ್ನು ಎದುರಿಸಬಹುದು. ಆದ್ದರಿಂದ ನಾವುಗಳು ಇಂದಿನಿಂದಲೇ ಪಣತೊಟ್ಟು ಪರಿಸರ ಬಗ್ಗೆ ಕಾಳಜಿ ವಹಿಸಿ ಸೂಕ್ತ ನಿರ್ಧಾರ ತೆಗೆದುಕೊಂಡು ಸಂರಕ್ಷಣೆಗೆ ಮುಂದಾಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾಧ್ಯಕ್ಷ ಆರ್.ಶ್ರೀನಿವಾಸ್, ಕಾಲೇಜಿನ ಪ್ರಾಂಶುಪಾಲ ವಿನ್ಸಲ್ ಕಾರ್‌ಡೋಸ್, ಯುವ ರೆಡ್‌ಕ್ರಾಸ್ ಸಂಸ್ಥೆ ಸಂಯೋಜಕ ವಿನಯ್‌ಕುಮಾರ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿ ತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...