Saturday, December 6, 2025
Saturday, December 6, 2025

ಕರ್ನಾಟಕದಲ್ಲಿ ಹೆದ್ದಾರಿ ಅಭಿವೃದ್ದಿಗೆ ₹3.579 ಕೋಟಿ ಮೌಲ್ಯದ ಯೋಜನೆ -ಸಚಿವ ನಿತಿನ್ ಗಡ್ಕರಿ

Date:

ರಾಜ್ಯ ವಿಧಾನಸಭಾ ಚುನಾವಣೆ ಸದ್ಯದಲ್ಲಿಯೇ ಘೋಷಣೆಯಾಗಲಿದೆ. ಚುನಾವಣೆಯ ಮೊದಲೇ ರಾಜ್ಯದಲ್ಲಿ ಹೆದ್ದಾರಿಗಳ ಅಭಿವೃದ್ಧಿಗೆ ಯೋಜನೆಗಳನ್ನ ಕೇಂದ್ರ ಭೂಸಾರಿಗೆ ಇಲಾಖೆ ಅನುಮೋದನೆ ನೀಡಿದೆ.

ಕರ್ನಾಟಕದಲ್ಲಿ ಆರು ಕಡೆ ಹೆದ್ದಾರಿ ಅಭಿವೃದ್ಧಿಗಾಗಿ 3,579 ಕೋಟಿ ರೂಪಾಯಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಗತಿ ಯೋಜನೆಯ ಅಡಿಯಲ್ಲಿ ಈ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

ಕೊಪ್ಪಳ, ಗದಗ, ಬಾಗಲಕೋಟೆ ಜಿಲ್ಲೆಯ ಮೂಲಕ ಹಾಯ್ದು ಹೋಗುವ ಭಾನಾಪುರ ಗದ್ದನಕೇರಿ ರಾಷ್ಟ್ರೀಯ ಹೆದ್ದಾರಿ 367 ರಲ್ಲಿ ಅನೇಕ ಯೋಜನೆಗಳಿಗೆ ಮಂಜುರಾತಿ ನೀಡಲಾಗಿದೆ. ಈ ಹೆದ್ದಾರಿಯಲ್ಲಿನ ಕುಕನೂರು, ಯಲಬುರ್ಗಾ ಮತ್ತು ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣಕ್ಕೆ ಬೈಪಾಸ್ ನಿರ್ಮಿಸಲು 333,96 ಕೋಟಿ ರೂಪಾಯಿ ಯೋಜನೆ ಸಿದ್ಧವಾಗಿದೆ ಎಂದು ಗಡ್ಕರಿ ಅವರು ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 357ರಲ್ಲಿ ಎರಡು ಲೇನ್ ರಸ್ತೆಗೆ 172 ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರ ನೀಡಿದೆ. ಇದು ಒಳ್ಳೆಯದು ಎಂದು ಹೇಳಿದ್ದಾರೆ. ಇದೇ ಸಂದರ್ಭದಲ್ಲಿ 909 ಕೋಟಿ ರೂಪಾಯಿಯಲ್ಲಿ ರಾಷ್ಟ್ರೀಯ ಹೆದ್ದಾರಿ 275 ಕುಶಾಲನಗರ ಮೈಸೂರು ಹೆದ್ದಾರಿಗೆ ರಸ್ತೆ ಪಕ್ಕದ ಹೆದ್ದಾರಿ ಅಭಿವೃದ್ಧಿ ಮತ್ತು ಮೂಲಭೂತ ಸೌಲಭ್ಯ ಹಾಗೂ ಮೈಸೂರು ಜಿಲ್ಲೆಯ ಗುಡ್ಡೆ ಹೊಸೂರು ಬಳಿ ಬೈಪಾಸ್ ರಸ್ತೆ ನಿರ್ಮಾಣ, ಯಲೇಚನಳ್ಳಿ ರೋಡ್ ಜಂಕ್ಷನ್ ಶ್ರೀರಂಗಪಟ್ಟಣಕ್ಕೆ ಬೈಪಾಸ್ ನಿರ್ಮಾಣಕ್ಕೆ 739. 39 ಕೋಟಿ ರೂಪಾಯಿ ಯೋಜನೆಗೆ ಮಂಜುರಾತಿ ನೀಡಲಾಗಿದೆ.

ರಾಜ್ಯದಲ್ಲಿ ಅನೇಕ ಹೆದ್ದಾರಿಗಳಿಗೆ ಕೇಂದ್ರ ಸರ್ಕಾರ ಸಾಕಷ್ಟು ಅನುದಾನ ನೀಡಿದೆ. ಚುನಾವಣೆಯ ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಹೆದ್ದಾರಿ ಮತ್ತು ರೋಪ್ ವೇಗಗಳ ನಿರ್ಮಾಣದ ಘೋಷಣೆಗಳು ಚುನಾವಣೆ ಎದುರಿಸುವ ತಂತ್ರಗಾರಿಕೆ ಇರಬಹುದು ಎಂದು ಹೇಳಲಾಗುತ್ತಿದೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...